Month: April 2025

COMMUNITY NEWS HOME INETRNATIONAL LATEST NEWS

ಪೋಪ್ ಫ್ರಾನ್ಸಿಸ್ ಅಂತ್ಯಕ್ರಿಯೆ: ಭಾರತದ ರಾಪ್ಟ್ರಪತಿ ಮುರ್ಮು ಭಾಗಿ

ರೋಮ್‌: ಐದು ದಿನಗಳ ಹಿಂದೆ (ಏ. 21)ರಂದು ನಿಧನರಾಗಿದ್ದ ಕ್ರೈಸ್ತರ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆ ಇಂದು ವ್ಯಾಟಿಕನ್ ಸಿಟಿಯಲ್ಲಿ ಜರುಗಲಿದೆ. ಈ ಅಂತ್ಯಕ್ರಿಯೆಗೆ ವಿಶ್ವದಿಂದ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಭಾರತದ ಪ್ರತಿನಿಧಿಯಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈಗಾಗಲೇ ರೋಮ್‌ ತಲುಪಿದ್ದಾರೆ. ಶುಕ್ರವಾರ ನಡೆದ ಅಂತಿಮ ನಮನ ಕಾರ್ಯಕ್ರಮದಲ್ಲಿ ಶ್ರದ್ದಾಂಜಲಿ ಅರ್ಪಿಸಿದರು. ಇದೇ ವೇಳೆ ಮುಂಬೈನ ಈ ಹಿಂದಿನ ಆರ್ಚ್‌ ಬಿಷಪ್‌ ಓಸ್ವಾಲ್ಡ್‌ ಕಾರ್ಡಿನಲ್‌ ಗ್ರೇಶಿಯಸ್‌ ಸೇರಿ ಹಲವರು  ಭಾಗವಹಿಸಿದ್ದರು.

COMMUNITY NEWS HOME INETRNATIONAL LATEST NEWS

ಇಂದು ಪೋಪ್‌ ಅಂತ್ಯಕ್ರಿಯೆ: ನೇರಪ್ರಸಾರ ಎಲ್ಲಿ; ಸಂಪೂರ್ಣ ವಿವರ ಇಲ್ಲಿದೆ…

ರೋಮ್‌: ಐದು ದಿನಗಳ ಹಿಂದೆ (ಏ. 21)ರಂದು ನಿಧನರಾಗಿದ್ದ ಕ್ರೈಸ್ತರ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆ ಇಂದು ವ್ಯಾಟಿಕನ್ ಸಿಟಿಯಲ್ಲಿ ಜರುಗಲಿದೆ. ಪೋಪ್ ಅವರು ಬದುಕಿದ್ದಾಗ ತಮ್ಮ ಅಂತ್ಯಕ್ರಿಯೆಯನ್ನು ವ್ಯಾಟಿಕನ್ ಸಿಟಿಯ ಸೇಂಟ್ ಮರಿಯಾ ಮಗೊಯ್ರ್ ನ ಆವರಣದಲ್ಲಿ ನೆರವೇರಿಸಬೇಕು ಎಂದು ಕೋರಿದ್ದರಂತೆ. ಹಾಗಾಗಿ, ಅಂತಿಮ ಇಚ್ಛೆಯನ್ನು ಪೂರೈಸುವ ಸಲುವಾಗಿ ಸಂತ ಮರಿಯಾ ಮಗೊಯ್ರ್ ನಲ್ಲೇ ಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಭಾರತೀಯ ಕಾಲಮಾನ ಇಂದು (ಏ. 26ರಂದು) ಮಧ್ಯಾಹ್ನ 1.30ರ ಸುಮಾರಿಗೆ ಆರಂಭವಾಗುವ ಅಂತಿಮ […]

COMMUNITY NEWS LATEST NEWS

ಮಂಗಳೂರು ಕ್ರೈಸ್ತರಿಂದ ಜಗದ್ಗುರು ಪೋಪ್ ಫ್ರಾನ್ಸಿಸ್‌ಗೆ ನುಡಿನಮನ

ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದ ವತಿಯಿಂದ ಕೆಥೋಲಿಕರ ಪರಮೋಚ್ಛ  ಜಗದ್ಗುರು ಪೋಪ್ ಫ್ರಾನ್ಸಿಸ್ ಅವರಿಗೆ ಶ್ರದ್ಧಾಂಜಲಿ ಸಭೆ ಶುಕ್ರವಾರ ನಗರದ ಮಿಲಾಗ್ರಿಸ್ ಚರ್ಚ್ ವಠಾರದಲ್ಲಿ ನಡೆಸಲಾಯಿತು. ಮಂಗಳೂರು ಬಿಷಪ್ ಅ.ವಂ.ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಶ್ರದ್ದಾಂಜಲಿ ಅರ್ಪಿಸಿ ಮಾತನಾಡಿ, ಪೋಪ್ ಫ್ರಾನ್ಸಿಸ್ ಅವರು ಜಗತ್ತಿಗೆ ಬೆಳಕಾಗಿದ್ದಾರೆ. ಮಕ್ಕಳು, ಯುವಕರು, ಬಡವರು, ದೀನರು ಮತ್ತು ವಲಸಿಗರಿಗೆ ಹತ್ತಿರವಾಗಿದ್ದರು. ಪೋಪ್ ಫ್ರಾನ್ಸಿಸ್ ನಮಗೆ ಸಹೋದರತ್ವವನ್ನು ಕಲಿಸಿದ್ದಾರೆ ಎಂದರು. ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಮಾತನಾಡಿ, […]

COMMUNITY NEWS LATEST NEWS

ಪೆಹಲ್ಗಾಮ್‌ ದಾಳಿ ಖಂಡಿಸಿದ ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಹಾಗೂ AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ

ಮಂಗಳೂರು: ಪಹಲ್ಗಾಮಿನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಅಖಿಲ ಭಾರತ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಇದರ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಪಹಲ್ಗಾಮಿನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಮೃತರಿಗೆ ಸಂತಾಪ ಸೂಚಿಸುತ್ತೇವೆ. ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಕಥೊಲಿಕ್ ಸಭಾ ಕೂಡ ಜೊತೆಗಿರಲಿದೆ. ಭಾರತದ ಪ್ರತಿ ಜನರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಭಯೋತ್ಪಾದನೆ ದಾಳಿ ಕ್ರೂರ ಅಪರಾಧ. ಇದಕ್ಕೆ ಯಾವುದೇ […]

COMMUNITY NEWS LATEST NEWS

ಮಂಗಳೂರು: MCC ಬ್ಯಾಂಕ್‌ನಿಂದ ಪೋಪ್ ಫ್ರಾನ್ಸಿಸ್‌ಗೆ ಗೌರವ ನಮನ

ಮಂಗಳೂರು: ಎಂ.ಸಿ.ಸಿ ಬ್ಯಾಂಕ್ ಮಂಗಳೂರು ಇದರ ಆಡಳಿತ ಕಛೇರಿಯಲ್ಲಿ ಪರಮಪೂಜ್ಯ ಪೋಪ್ ಫ್ರಾನ್ಸಿಸ್ ಅವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ದಿನಾಂಕ ಏ.24 ರಂದು ಬ್ಯಾಂಕಿನ ಆಡಳಿತ ಕಛೇರಿಯಲ್ಲಿ ನಡೆಯಿತು. ಶ್ರೀಮತಿ ಕ್ಯಾರೆನ್ ಕ್ರಾಸ್ತಾ ತಂಡದಿಂದ ಪ್ರಾರ್ಥನಾ ಗೀತೆಯೊಂದಿಗೆ ಸಭೆ ಪ್ರಾರಂಭವಾಯಿತು. ಈ ಸಂದರ್ಭದಲ್ಲಿ ಫಾ. ಮುಲ್ಲರ್ಸ್ ಸಂಸ್ಥೆಯ ನಿಯೋಜಿತ ನೀರ್ದೇಶಕರಾದ ವಂದನೀಯ ಪೌಸ್ತಿನ್ ಲೋಬೊ ಹಾಜರಿದ್ದರು. ವಂ. ಪೌಸ್ತಿನ್ ಲೋಬೊ ಪರಮಪೂಜ್ಯ ಪೋಪ್ ಫ್ರಾನ್ಸಿಸ್ ಅವರ ಆತ್ಮಕ್ಕೆ ಗೌರವ ಸಲ್ಲಿಸಿ ಅವರು ಹಲವಾರು ಸಂದರ್ಭಗಳಲ್ಲಿ ಪೋಪ್ ಆವರೊಂದಿಗಿನ […]

COMMUNITY NEWS HOME INETRNATIONAL LATEST NEWS

“ಚರ್ಚ್‌ಗಳು ಬಡವರ ಪರವಾಗಿ ಇರಬೇಕು” ಎಂದಿದ್ದ ಪೋಪ್‌ ಫ್ರಾನ್ಸಿಸ್‌

ವ್ಯಾಟಿಕನ್‌ ಸಿಟಿ: ಪೋಪ್ ಫ್ರಾನ್ಸಿಸ್ ಅವರು ತಮ್ಮ ಸರಳತೆ ಹಾಗೂ ಸಹಾನೂಭೂತಿಯ ಮೂಲಕ ಜನರ ಪೋಪ್‌ ಎಂದು ಹೆಗ್ಗಳಿಕೆ ಗಳಿಸಿದ್ದರು. ಇದೇ ಕಾರಣಕ್ಕೆ ಜಗತ್ತಿನಾದ್ಯಂತ ಕೋಟ್ಯಂತರ ಮಂದಿಯ ಪ್ರೀತಿಗೆ ಪಾತ್ರರಾಗಿದ್ದ ಸಂದರ್ಭದಲ್ಲೇ, ಚರ್ಚ್‌ನೊಳಗಿನ ಸಂಪ್ರದಾಯವಾದಿಗಳಿಂದ ವಿರೋಧವನ್ನೂ ಎದುರಿಸಿದ್ದಾರೆ. “ಚರ್ಚ್‌ಗಳು ಬಡವರ ಪರವಾಗಿ ಇರಬೇಕು” 13ನೇ ಶತಮಾನದಲ್ಲಿ ಪೋಪ್‌ ಆಗಿದ್ದ, ತನ್ನೆಲ್ಲಾ ಸಂಪತ್ತನ್ನು ತ್ಯಜಿಸಿ ಬಡವರಿಗಾಗಿ ಜೀವನವನ್ನು ಮುಡಿಪಾಗಿಟ್ಟ ಸೇಂಟ್‌ ಫ್ರಾನ್ಸಿಸ್‌ ಬಳಿಕ ಫ್ರಾನ್ಸಿಸ್‌ ಎಂಬ ಹೆಸರನ್ನು ಪಡೆದ ಮೊದಲ ಪೋಪ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು.‘ಚರ್ಚ್‌ಗಳು ಬಡವರ ಪರವಾಗಿ […]

DAKSHINA KANNADA HOME LATEST NEWS

ಪೆಹಲ್ಗಾಮ್ ದುಷ್ಕೃತ್ಯ: ಬಿಷಪ್‌ ಖಂಡನೆ

ಮಂಗಳೂರು: ಭಾರತದ ಮುಕುಟಮಣಿ ಎನ್ನಿಸಿರುವ ಕಾಶ್ಮೀರದಲ್ಲಿ ಪ್ರವಾಸಕ್ಕಾಗಿ ತೆರಳಿದ್ದ ಅಮಾಯಕ ನಾಗರಿಕರನ್ನು ಹತ್ಯೆ ಮಾಡಿದ ಉಗ್ರಗಾಮಿಗಳ ಕೃತ್ಯ ಅತ್ಯಂತ ಖಂಡನೀಯ, ಯಾವುದೇ ತಪ್ಪೆಸಗದವರ ಮೇಲೆ ಏಕಾಏಕಿ ಗುಂಡಿಟ್ಟು ಕೊಂದಿರುವುದು ಮಾನವತೆಗೆ ಕಳಂಕ ಎಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್‌ ಅತಿ ವಂದನೀಯ ಡಾ.ಪೀಟರ್‌ ಪಾವ್ಲ್‌ ಸಾಲ್ಡನ್ಹಾ ಅವರು ಖೇದ ವ್ಯಕ್ತಪಡಿಸಿದ್ದಾರೆ. ರಜೆಯಲ್ಲಿ ಕುಟುಂಬಗಳು, ಮಹಿಳೆಯರು ಮಕ್ಕಳ ಸಹಿತ ಕಾಶ್ಮೀರ ಪಹಲ್ಗಾಮ್‌ಗೆ ಪ್ರವಾಸ ತೆರಳಿದ್ದರು. ಅಲ್ಲಿ ಮುಖ್ಯವಾಗಿ ಪುರುಷರನ್ನೇ ಗುರಿಯಾಗಿಸಿ ಉಗ್ರರು 26 ಮಂದಿಯ ತಲೆಗೇ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. […]

COMMUNITY NEWS HOME INETRNATIONAL LATEST NEWS

ಪೋಪ್‌ ಆಸೆಯಂತೆ ನೆಚ್ಚಿನ ಸ್ಥಳದಲ್ಲಿ ಅಂತ್ಯಕ್ರಿಯೆ…!

ರೋಮ್‌: ಫ್ರಾನ್ಸಿಸ್‌ ಅವರು ಪೋಪ್‌ ಆಗಿ ಆಯ್ಕೆಯಾದಾಗಿನಿಂದಲೂ ಸರಳ ಜೀವನ ನಡೆಸಿದ್ದರು. ತಮ್ಮ ಅಂತ್ಯಸಂಸ್ಕಾರದ ವಿಧಿ ವಿಧಾನಗಳು ಸರಳವಾಗಬೇಕು ಎಂದು ಅವರು ಬಯಸಿದ್ದರು. ಇದಕ್ಕಾಗಿ 2024ರ ಏಪ್ರಿಲ್‌ನಲ್ಲಿ ಹೊಸ ನಿಯಮಗಳನ್ನು ರೂಪಿಸಿದ್ದ ಅವರು ಶತಮಾನಗಳಷ್ಟು ಹಳೆಯ ಸಂಪ್ರದಾಯವನ್ನು ಅಂತ್ಯಗೊಳಿಸಿದ್ದರು. ಅವುಗಳಲ್ಲಿ ಪ್ರಮುಖವು ಇಂತಿವೆ photo credit apnews 100 ವರ್ಷದ ನಂತರ ವ್ಯಾಟಿಕನ್‌ ಹೊರಗೆ ಅಂತ್ಯಕ್ರಿಯೆ ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ಪೋಪ್ ಅವರ ಆಸೆಯಂತೆಯೇ ಸರಳೀಕರಣ ಗೊಳಿಸ ಲಾಗಿದೆ. ಅದರಂತೆ ವ್ಯಾಟಿಕನ್ ನಗರದಲ್ಲಿರುವ ಸಂತ ಪೀಟರ್ ಬೆಸಿಲಿಕಾದಲ್ಲಿ ಮೊದಲಿಗೆ […]

HOME INETRNATIONAL LATEST NEWS

ಏ.26 ರಂದು ಪೋಪ್‌ ಫ್ರಾನ್ಸಿಸ್‌ ಅಂತ್ಯಕ್ರಿಯೆ: ಹಲವು ದೇಶದ ಗಣ್ಯರು ಭಾಗಿ

ವ್ಯಾಟಿಕನ್‌ ಸಿಟಿ: ಸೋಮವಾರ ನಿಧನರಾದ ಕ್ರೈಸ್ತರ ಪರಮೋಚ್ಚ ಗುರುಗಳಾದ ಪೋಪ್‌ ಫ್ರಾನ್ಸಿಸ್‌ ಅವರ ಅಂತ್ರಕ್ರಿಯೆಯನ್ನು ಶನಿವಾರ ಬೆಳಗ್ಗೆ 10 ಗಂಟೆಗೆ ನಡೆಸಲು ನಿರ್ಧರಿಸಲಾಗಿದೆ.  ಪೋಟೋ ಕೃಪೆ (VATICAN MEDIA Divisione) ವ್ಯಾಟಿಕನ್‌ನಲ್ಲಿ ಮಂಗಳವಾರ ನಡೆದ ಕಾರ್ಡಿನಲ್‌ಗಳ ಮೊದಲ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಂತೆಯೇ, ಪೋಪ್‌ರ ಮೃತದೇಹವನ್ನು ಸೇಂಟ್ ಪೀಟರ್ಸ್ ಬೆಸಿಲಿಕಾಗೆ ತಂದ ಬಳಿಕ ಬುಧವಾರದಿಂದ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ಏ.26ರಂದು ಬೆಳಗ್ಗೆ 10 ಗಂಟೆಗೆ ಸೇಂಟ್‌ ಪೀಟರ್‌ ಸ್ಕೈರ್‌ನಲ್ಲಿ ಅಂತ್ರಕ್ರಿಯೆಯ ಬಲಿಪೂಜೆ ನಡೆಸಲಾಗುವುದು. ಈ ಬಲಿಪೂಜೆಯು ಕಾಲೇಜ್‌ […]

DAKSHINA KANNADA HOME LATEST NEWS

ಪಾಕ್‌ ಗಡಿ ಬಂದ್‌; ಪಾಕಿಸ್ತಾನಿಯರಿಗೆ ಭಾರತ ಪ್ರವೇಶ ನಿಷೇಧ ಸೇರಿ ಐದು ಮಹತ್ವದ ನಿರ್ಧಾರ

ನವದೆಹಲಿ: ಪೆಹಲ್ಗಾಮ್‌ ಉಗ್ರರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನ ವಿರುದ್ಧ ಮಹತ್ವದ ನಿರ್ಧಾರ ಕೈಗೊಂಡಿದೆ. ಇಂದು ನಡೆದ ಸಭೆಯಲ್ಲಿ ಭಾರತ ಗಡಿಯಾಚೆಗಿನ ಭಯೋತ್ಪಾದನೆ ಕೊನೆಗೊಳಿಸಲು ಮತ್ತು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ಇಂದು ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆ ನಡೆದಿದೆ. ಈ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಇತರ […]