Month: April 2025

DAKSHINA KANNADA HOME LATEST NEWS STATE

ಬೆಳ್ತಂಗಡಿ: NIA ಜೊತೆ ಕರ್ತವ್ಯ ನಿರ್ವಹಿಸಿದ್ದ ಪೊಲೀಸ್ ಹೆಡ್ ಕಾನ್ಟೇಬಲ್‌ಗೆ ಮುಖ್ಯಮಂತ್ರಿ ಪದಕ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಂಭೀರ ಪ್ರಕರಣ ನಡೆದರೂ ವಿಶೇಷ ಪೊಲೀಸ್ ತಂಡದ ಜೊತೆಗೆ ಇದ್ದು ಹಿರಿಯ ಅಧಿಕಾರಿಗಳು ಹೇಳಿದಂತೆ ಕರ್ತವ್ಯ ನಿರ್ವಹಿಸಿ ಭೇದಿಸುವ ಪೊಲೀಸ್ ಹೆಡ್ ಕಾನ್ಟೇಬಲ್ ಮೂರುಗೋಳಿಯ ಪ್ರವೀಣ್.ಎಂ ಇವರಿಗೆ ಈ ಭಾರಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದು, ಎಪ್ರಿಲ್ 2 ರಂದು ಕರ್ನಾಟಕ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪದಕ ಪ್ರದಾನ ಮಾಡಿದರು. ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಮೂರುಗೋಳಿ ನಿವಾಸಿ ಅಣ್ಣು ದೇವಾಡಿಗ ಮತ್ತು ಬೇಬಿ ದೇವಾಡಿಗರ ಪ್ರಥಮ ಪುತ್ರ […]

DAKSHINA KANNADA HOME LATEST NEWS

ಮಂಗಳೂರು: ಅಡಿಕೆ ವ್ಯಾಪಾರಿಯಿಂದ 29 ಲಕ್ಷ ರೂ. ವಂಚನೆ

ಮಂಗಳೂರು: ಅಡಿಕೆ ವ್ಯಾಪಾರಿಯೊಬ್ಬ ಸಹಕಾರಿ ಸಂಘವೊಂದಕ್ಕೆ 29 ಲಕ್ಷ ರೂ. ಮೋಸ ಮಾಡಿದ ಬಗ್ಗೆ ಮಂಗಳೂರು ನಗರ ಹೊರವಲಯದ ಪಣಂಬೂರು  ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ. ಬೈಕಂಪಾಡಿಯಲ್ಲಿ ಕಾರ್ಯಾಚರಿಸುತ್ತಿರುವ ಮಂಗಳೂರು ಅಗ್ರಿಕಲ್ಚರಿಸ್ಟ್ಸ್ ಸಹಕಾರಿ ಸಂಘ ಸಂಸ್ಥೆಯು ಮಂಗಳೂರು ಮತ್ತು ಇತರ ಕಡೆಗಳಲ್ಲಿ ಅಡಿಕೆ ಖರೀದಿ ಮತ್ತು ಮಾರಾಟ ವ್ಯವಹಾರ ನಡೆಸುತ್ತಿದೆ. ಆರೋಪಿ ಸತ್ಯನಾರಾಯಣ ರಾಮಚಂದ್ರ ಭಟ್‌ (55) ಎಂಬಾತ ಗುಜರಾತ್‌ನ ಅಹಮದಾಬಾದ್ ನಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದು, 2009ರಲ್ಲಿ ಮಂಗಳೂರು ಅಗ್ರಿಕಲ್ಚರಿಸ್ಟ್ಸ್ ಸಹಕಾರಿ ಸಂಘದಿಂದ ಆರೋಪಿಯು […]

DAKSHINA KANNADA HOME LATEST NEWS

ಎ.5 ರಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದ.ಕ ಜಿಲ್ಲಾ ಪ್ರವಾಸ

ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎಪ್ರಿಲ್ 5 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಎಪ್ರಿಲ್ 5 ರಂದು ಬೆಳಿಗ್ಗೆ 6:55 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ಆಗಮನ, ಬೆಳಿಗ್ಗೆ 7:40 ಗಂಟೆಗೆ ಸಕ್ರ್ಯೂಟ್ ಹೌಸ್, 9:30- ನಗರದ ಕೊಡಿಯಾಲ್‍ಬೈಲ್ ಜೈಲ್ ರಸ್ತೆಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಮತ್ತು ಪಶುರೋಗ ತಪಾಸಣೆ ಮತ್ತು ಮಾಹಿತಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ, 10 – ದಕ್ಷಿಣ ಕನ್ನಡ […]

DAKSHINA KANNADA HOME LATEST NEWS

ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ವಿಟ್ಲದಲ್ಲಿ ಬೃಹತ್‌ ಪ್ರತಿಭಟನೆ

ವಿಟ್ಲ: ಮಾಣಿಲ ಗ್ರಾಮದಲ್ಲಿ ಇತ್ತೀಚೆಗೆ ನಡೆದ  ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಭೂಮಾಲಕ ಮಹೇಶ್ ಭಟ್ ನನ್ನು ತಕ್ಷಣ ಬಂಧಿಸಲು ಒತ್ತಾಯಿಸಿ, ಸಂತ್ರಸ್ತ ದಲಿತ ಕುಟುಂಬಕ್ಕೆ ಧೈರ್ಯ ತುಂಬಿ ಪ್ರಕರಣದ ಸಮಗ್ರ ತನಿಖೆ ನಡೆಸಲು, ಕಠಿಣ ಕಾಯ್ದೆಗಳಡಿ ಪ್ರಕರಣ ದಾಖಲಿಸಲು ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ ಹಾಗೂ ವಿವಿಧ ದಲಿತ ಮತ್ತು ಸಮಾನ ಮನಸ್ಕ ಸಂಘಟನೆಗಳು ಇದರ ಸಹಭಾಗಿತ್ವದಲ್ಲಿ ವಿಟ್ಲದಲ್ಲಿ ಪ್ರತಿಭಟನಾ ಸಭೆ ನಡೆಯಿತು. ವಿಟ್ಲದ ಖಾಸಗಿ ಬಸ್ ನಿಲ್ದಾಣದಿಂದ ಹೊರಟ ಪ್ರತಿಭಟನಾ ಮೆರವಣಿಗೆ […]

HOME LATEST NEWS UDUPI

ಕ್ರಿಶ್ಚಿಯನ್ ಯುವತಿ & ಮುಸ್ಲಿಂ ಯುವಕನ ಪ್ರೇಮ ಪ್ರಕರಣಕ್ಕೆ ಬಜರಂಗದಳ ಎಂಟ್ರಿ

ಮಂಗಳೂರು: ಉಡುಪಿಯಲ್ಲಿ ನಡೆದ ಕ್ರಿಶ್ಚಿಯನ್ ಯುವತಿ ಮತ್ತು ಮುಸ್ಲಿಂ ಯುವಕನ ಪ್ರೇಮ ಪ್ರಕರಣಕ್ಕೆ ಇದೀಗ ಹಿಂದೂ ಸಂಘಟನೆಗಳು ಎಂಟ್ರಿ ನೀಡಿವೆ. ಈ ಹೋರಾಟಕ್ಕೆ ಧುಮುಕಿದ ಬಜರಂಗದಳ ಇದು ಲವ್ ಜಿಹಾದ್ ಪ್ರಕರಣ ಎಂದು ಆರೋಪಿಸಿದ್ದಾರೆ. ಜೊತೆಗೆ ಈ ಬಗ್ಗೆ ಉನ್ನತ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಭಜರಂಗದಳದ ಮುಖಂಡ ಸುನಿಲ್ ಕೆ ಆರ್ ಅವರು ಪ್ರತಿಕ್ರಿಯೆ ನೀಡಿ, ವಿಶ್ವ ಹಿಂದೂ ಪರಿಷತ್ ಲವ್ ಜಿಹಾದ್ ಬಗ್ಗೆ ಜಾಗೃತಿ ಕೆಲಸ ಮಾಡುತ್ತಿದೆ.  ಆದರೆ ಜಿಹಾದಿಗಳು ತಮ್ಮ ಕೃತ್ಯ […]

DAKSHINA KANNADA HOME LATEST NEWS

ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯ ಕರಿಮಣಿ ಎಗರಿಸಿ ಪರಾರಿ: ಗಂಭೀರ ಗಾಯ

ಮಂಗಳೂರು: ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ 70 ವರ್ಷದ ವೃದ್ಧೆಯನ್ನು ದೂಡಿಹಾಕಿ ಕರಿಮಣಿ ಸರವನ್ನು ಎಗರಿಸಿದ ಘಟನೆ ಮೂಡಬಿದ್ರೆಯ ಗುಜ್ಜರಗುಂಡಿ ಬಳಿ ಮಾ.31 ರಂದು ನಡೆದಿದೆ. ಘಟನೆಯಲ್ಲಿ ವೃದ್ದೆಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ವಿವರ ಇಂದಿರಾ (70) ಎಂಬುವರು ದಿನಾಂಕ 31-03-2025 ರಂದು ಕೋರಂತಬೆಟ್ಟು ಎಂಬಲ್ಲಿ ತನ್ನ ಅಳಿಯ ಭಾಸ್ಕರ ಎಂಬುವರ ಮನೆ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ಹೋಗಿ ಊಟ ಮುಗಿಸಿ ವಾಪಾಸ್ ಮನೆ ಕಡೆಗೆ ಬೆಳುವಾಯಿ – ಕರಿಯನಂಗಡಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದರು. ಗುಜ್ಜರಗುಂಡಿ ಎಂಬಲ್ಲಿಗೆ […]

DAKSHINA KANNADA HOME LATEST NEWS UDUPI

ನಾಳೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವೆಡೆ ಭಾರೀ ಮಳೆ ಸಾಧ್ಯತೆ..!

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ  ಸೇರಿದಂತೆ ರಾಜ್ಯದ ವಿವಿಧೆಡೆ ನಾಳೆ (ಗುರುವಾರ) ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ 30 ಕಿ.ಮೀ ನಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್ ಮತ್ತು ಗದಗ ಜಿಲ್ಲೆಯಲ್ಲಿ ಗಂಟೆಗೆ 50 […]

DAKSHINA KANNADA HOME LATEST NEWS

“ಮಸೀದಿ, ಮದರಸ, ಖಬರಸ್ತಾನ, ದೋಚಲು ಬಿಡುವುದಿಲ್ಲ” ವಕ್ಫ್‌ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ SDPI ಬೃಹತ್‌ ಪ್ರತಿಭಟನೆ

ಮಂಗಳೂರು: ಸಂಸತ್‌ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ, ಎಸ್‌ಡಿಪಿಐ ಜಿಲ್ಲಾ ಘಟಕದ ನೇತೃತ್ವದಲ್ಲಿ ಬುಧವಾರ ಮಂಗಳೂರಿನ ಕ್ಲಾಕ್‌ ಟವರ್‌ ಬಳಿ ಬೃಹತ್‌ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲೆಯ ಅಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, “ಮಸೀದಿ, ಮದರಸ, ಖಬರಸ್ತಾನ, ದೋಚಲು ಬಿಡುವುದಿಲ್ಲ. ಕೇಂದ್ರ ಸರ್ಕಾರ ಈ ಮಸೂದೆ ಹಿಂಪಡೆಯುವವರೆಗೂ ಹೋರಾಟ ಮುಂದುವರಿಯುತ್ತದೆ. ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಐದು ತಿಂಗಳುಗಳಲ್ಲಿ ನಾಲ್ಕು ಪ್ರತಿಭಟನೆ ನಡೆಸಲಾಗಿದೆ. ಎಸ್‌ಡಿಪಿಐ, ಜಾತ್ಯತೀತ ಸಂಘಟನೆಗಳಿಗೆ ಆಕ್ಷೇಪ ವ್ಯಕ್ತಪಡಿಸಲು […]

HOME LATEST NEWS STATE

Uber, Rapido ಸೇರಿದಂತೆ ಬೈಕ್‌ ಟ್ಯಾಕ್ಸಿ ಕಾರ್ಯಾಚರಣೆ ನಿಲ್ಲಿಸುವಂತೆ ಹೈಕೋರ್ಟ್‌ ಆದೇಶ

ಬೆಂಗಳೂರು: ಉಬರ್, ರ್ಯಾಪಿಡೋ ಸಹಿತ ಹಲವು ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ನಿಯಮ ರೂಪಿಸಿಲ್ಲ. ನಿಯಮಗಳಿಲ್ಲದೇ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಮಾಡುವಂತಿಲ್ಲ. ಹೀಗಾಗಿ ಬೈಕ್ ಟ್ಯಾಕ್ಸಿ ಸ್ಥಗಿತಗೊಳಿಸುವಂತೆ ಓಲಾ, ಉಬರ್ ಮತ್ತು ರ್ಯಾಪಿಡೊಗಳಿಗೆ ಆರು ವಾರಗಳ ಕಾಲಾವಕಾಶ ನೀಡಿ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಹೈಕೋರ್ಟ್ ಪೀಠ ಆದೇಶಿಸಿದ್ದು, 3 ತಿಂಗಳಿನಲ್ಲಿ ನಿಯಮ ರೂಪಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ. ಮೋಟಾರ್ ಸೈಕಲ್‌ಗಳನ್ನು […]

DAKSHINA KANNADA HOME LATEST NEWS

ಮಂಗಳೂರು: ಕಳ್ಳಭಟ್ಟಿ ಅಡ್ಡೆ ಮೇಲೆ ದಾಳಿ-40 ಲೀ.ನಷ್ಟು ಬೆಲ್ಲದ ಕೊಳೆ ಪತ್ತೆ

ಮಂಗಳೂರು: ಆಡಂಕುದ್ರುನಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಉರ್ಬನ್‌ ಡಿಸೋಜಾ ಎಂಬಾತನನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ 5 ಲೀಟರ್‌ ಕಳ್ಳಭಟ್ಟಿ ಸಾರಾಯಿ, ಕಳ್ಳಭಟ್ಟಿ ತಯಾರಿಸಲು ಉಪಯೋಗಿಸುತ್ತಿದ್ದ ಸಲಕರಣೆಗಳು, 40 ಲೀ.ನಷ್ಟು ಬೆಲ್ಲದ ಕೊಳೆ ಪತ್ತೆಯಾಗಿದೆ. ಮಂಗಳೂರು ದಕ್ಷಿಣ ವಲಯದ ಅಬಕಾರಿ ಕಮಲ ಎಚ್‌. ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಬಕಾರಿ ಉಪನಿರೀಕ್ಷಕ ಹರೀಶ್‌ ಪಿ. ಕಾನ್ಸ್ಟೇಬಲ್‌ಗಳಾದ ಬಸವಾರಜ ತೊರೆ, ಆನಂದ್‌, ವಾಹನಚಾಲಕ ರಘುರಾಮ ಕಾರ್ಯಚರಣೆಯಲ್ಲಿ ಸಹಕರಿಸಿದ್ದರು.