ಮಂಗಳೂರು ಏರ್ಪೋರ್ಟ್ ಸಂಪರ್ಕಿಸುವ ಮರಕಡ ರಸ್ತೆ ಅಗಲೀಕರಣ, ತುರ್ತು ರಿಪೇರಿಗೆ ಆಗ್ರಹ
ಮಂಗಳೂರು: ಮಂಗಳೂರು ನಗರದಿಂದ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಲ್ಲಿ ಮರವೂರು ಸೇತುವೆಯಿಂದ ಮರಕಡ ನಡುವಿನ ರಸ್ತೆಯನ್ನು ಅಗಲೀಕರಣಗೊಳಿಸಿ ಅಭಿವೃದ್ದಿಪಡಿಸುವುದಕ್ಕೆ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಪತ್ರ ಬರೆದಿದ್ದಾರೆ. ಮಂಗಳೂರು ನಗರದಿಂದ ಏರ್ ಪೋರ್ಟ್ ಗೆ ಸಂಪರ್ಕಿಸುವ ಮುಖ್ಯರಸ್ತೆಯು ಮರಕಡದವರೆಗೆ ಈಗಾಗಲೇ ಚತುಷ್ಪಥ ರಸ್ತೆಯಾಗಿ ಅಭಿವೃದ್ದಿಯಾಗಿದೆ. ಆದರೆ ಅಲ್ಲಿಂದ ಮುಂದಕ್ಕೆ ಮರವೂರು ಸೇತುವೆ ಮತ್ತು ಮರಕಡ ನಡುವಿನ […]











