Month: June 2025

DAKSHINA KANNADA

ರಾಜ್ಯದಾದ್ಯಂತ ಯುವ ಸಬಲೀಕರಣಕ್ಕಾಗಿ ಯುವ ಕಾಂಗ್ರೆಸ್ ಕಾರ್ಯಕ್ರಮ; ಮಂಜುನಾಥ ಗೌಡ

ಮಂಗಳೂರು:   ಯುವ ಜನರ ಉದ್ಯೋಗ, ಶಿಕ್ಷಣ ಹಾಗೂ ಬದುಕು ಕಟ್ಟಿಕೊಳ್ಳಲು ಯುವ ಕಾಂಗ್ರೆಸ್ ರಾಜ್ಯದಾದ್ಯಂತ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ. ಪಕ್ಷ ಸಂಘಟನೆಯೊಂದಿಗೆ ಯುವ ಸಬಲೀಕರಣದ ಯೋಜನೆಯ ನೀಲಿ ನಕ್ಷೆಯನ್ನು ಯುವ ಕಾಂಗ್ರೆಸ್ ಹೊಂದಿದೆ, ಅದನ್ನು ಸಾಕಾರಗೊಳಿಸಲಿದೆ” ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ ಹೇಳಿದರು. ಆದಿತ್ಯವಾರದಂದು ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯನ್ನು […]

DAKSHINA KANNADA

ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಕಾಂಗ್ರೆಸ್ ಶಾಸಕರಿಂದಲೇ ಸರ್ಟಿಫಿಕೇಟ್ :- ಶಾಸಕ ಕಾಮತ್

ಮಂಗಳೂರು ಜೂನ್ 24 ರಾಜ್ಯ ಸರ್ಕಾರದ ಭ್ರಷ್ಟಾಚಾರ ಇಷ್ಟು ದಿನ ಒಳಗೊಳಗೆ ನಡೆಯುತ್ತಿದ್ದ   ಕಮಿಷನ್‌ ಅವ್ಯವಹಾರ ಇದೀಗ ಬಹಿರಂಗವಾಗಿಯೇ ನಡೆಯಲಾರಂಭಿಸಿದ್ದು ಸರ್ಕಾರದ ಹುಳುಕುಗಳೆಲ್ಲ ಬೀದಿಗೆ ಬಂದು ಜನಸಾಮಾನ್ಯರೂ ಸಹ ಹೇಸಿಗೆ ಪಟ್ಟುಕೊಳ್ಳುವಷ್ಟರ ಮಟ್ಟಿಗೆ ರಾಜ್ಯದ ಆಡಳಿತ ಹದಗೆಟ್ಟಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಆರೋಪಿಸಿದರು.  ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದಿಂದ ಸ್ವತಃ ಕಾಂಗ್ರೆಸ್ಸಿನ ಹಿರಿಯ ನಾಯಕರುಗಳೇ ಬೇಸತ್ತಿದ್ದು ಇದೀಗ ನೇರವಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ಆರಂಭಿಸಿದ್ದಾರೆ. ಬಡವರಿಗಾಗಿ ಇರುವ ಹೌಸಿಂಗ್ ಬೋರ್ಡ್‌ ಲಂಚಕೋರರ ಅಡ್ಡೆಯಾಗಿದ್ದು, ಕಮಿಷನ್‌ ಕೊಟ್ಟವರಿಗೆ […]

DAKSHINA KANNADA

ಪುತ್ತೂರಿನಿಂದ ಮಂಗಳೂರಿಗೆ ನಾನ್ ಸ್ಟಾಪ್ ಎಕ್ಸ್‌ಪ್ರೆಸ್ ಬಸ್ ಆರಂಭ: ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರಿನಿಂದ ಮಂಗಳೂರಿಗೆ ನಾನ್ ಸ್ಟಾಪ್ ಸರಕಾರಿ ಬಸ್ ಶೀಘ್ರ ಸಂಚಾರ ಆರಂಭ ಮಾಡಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಶಾಸಕರ ಕಚೇರಿಯಲ್ಲಿ ಸೋಮವಾರ ನಡೆದ ಕೆಎಸ್‌ಆರ‍್ಟಿಸಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಶಾಸಕರು ತನ್ನ ಕಚೇರಿಯಲ್ಲಿ ಪುತ್ತೂರು ವಿಭಾಗದ ಕೆಎಸ್‌ಆರ‍್ಟಿಸಿ ಅಧಿಕಾರಿಗಳ ಸಭೆಯನ್ನು ಕರೆದು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸರಕಾರಿ ಬಸ್ ಸಂಚಾರದಲ್ಲಿ ಇರುವ ಲೋಪ ದೋಷಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಮಳೆಗಾಲ ಮತ್ತು ಶಾಲಾ ಪ್ರಾರಂಭದ ದಿನಗಳಾಗಿರುವ ಕಾರಣ ಶಾಲಾ […]

DAKSHINA KANNADA

ವಿಜಯ ಕೋಟ್ಯಾನ್ ಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ.ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್ 2  ರಂದು ಪ್ರಕಟವಾದ “ಹುಲಿ ವೇಷಕ್ಕೆ ಖದರ್ ನೀಡಿದ್ದ ಆಸಿಫ್” ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು 5,001 ರು., ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ಒಳಗೊಂಡಿದೆ.. ಸಿಸಿಆರ್ ಬಿ  ಎಸಿಪಿ ಗೀತಾ ಕುಲಕರ್ಣಿ, ಹಿರಿಯ ಪತ್ರಕರ್ತ ಜೈದೀಪ್ ಶೆಣೈ, ಪತ್ರಿಕೋದ್ಯಮ ಉಪನ್ಯಾಸಕ ಗುರುಪ್ರಸಾದ್ […]

DAKSHINA KANNADA

ಕರ್ನಾಟಕದ  ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು ಮತ್ತು ವೈಫಲ್ಯಗಳ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದೆ ಸಂಸದ ಕ್ಯಾ. ಚೌಟ

ಗುರುಪುರ: ರಾಜ್ಯದ ಪ್ರಗತಿಗೆ ಅದರಲ್ಲಿಯೂ ಅವಿಭಜಿತ ದಕ್ಷಿಣ ಕನ್ನಡದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಮರೆತಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವುದಕ್ಕೆ ಜನಾಂದೋಲವನ್ನು ರೂಪಿಸುವವರೆಗೆ ಬಿಜೆಪಿ ವಿರಮಿಸುವುದಿಲ್ಲ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಕ್ಷವು ಗುರುಪುರ ಗ್ರಾಮ ಪಂಚಾಯತ್ ಕಚೇರಿ ಮುಂದೆ ಇಂದು ನಡೆಸಿದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, […]

DAKSHINA KANNADA

ಸೋಮೇಶ್ವರದ ಕಡಲಕಿನಾರೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಪರಿಕಲ್ಪನೆಯ “ಯೋಗ ವಿತ್ ಯೋಧ”  ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಮಂಗಳೂರು: ದಕ್ಷಿಣ ಕನ್ನಡದ ಪ್ರಮುಖ ಪ್ರವಾಸಿ ತಾಣಗಳ ಪೈಕಿ ಒಂದಾಗಿರುವ ಸೋಮೇಶ್ವರದ ಕಡಲಕಿನಾರೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಪರಿಕಲ್ಪನೆಯ “ಯೋಗ ವಿತ್ ಯೋಧ” 2ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಅತ್ಯಂತ ಯಶಸ್ವಿ ಹಾಗೂ ಅರ್ಥಪೂರ್ಣವಾಗಿ ನಡೆಯಿತು. ಆ ಮೂಲಕ ಸಮುದ್ರದ ತೆರೆಯಬ್ಬರದ ನಡುವೆ ಪ್ರಕೃತಿ ಹಾಗೂ ದೈವಿಕತೆಯ ಮಡಿಲಲ್ಲಿ ಮನಸ್ಸನ್ನು ಶಾಂತಗೊಳಿಸಿ ದೇಹವನ್ನು ಹತೋಟಿಯಲ್ಲಿಡುವ ಯೋಗಾಭ್ಯಾಸದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು.  ಸಸಿಹಿತ್ಲು ಬೀಚ್ ನಲ್ಲಿ ಕಳೆದ ವರ್ಷ ಕ್ಯಾ. ಚೌಟ ನೇತೃತ್ವದಲ್ಲಿ […]

DAKSHINA KANNADA

ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ

ವಿಟ್ಲ: ಹಸಿರೇ ಉಸಿರು ಎಂಬ ಧ್ಯೇಯದೊಂದಿಗೆ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ವಿಟ್ಲ ವಲಯ ಅರಣ್ಯಾಧಿಕಾರಿ ಶ್ರೀಯುತ ವೀರಣ್ಣ ಇವರು ಕಾರ್ಯಕ್ರಮವನ್ನು ಗಿಡ ನೆಟ್ಟು ಅದಕ್ಕೆ ನೀರುಣಿಸುವ ಮೂಲಕ ವಿಭಿನ್ನ ಶೈಲಿಯಲ್ಲಿ ಉದ್ಘಾಟಿಸಿ ವನಮಹೋತ್ಸವದ ಮಹತ್ವದ ಬಗ್ಗೆ ತಿಳಿಸಿದರು. ಶಾಲಾ ಸಂಚಾಲಕರಾದ ಫಾ. ಐವನ್ ಮೈಕೆಲ್ ರೋಡ್ರಿಗಸ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಟ್ಲ ವಲಯದ ಅರಣ್ಯ ಗಸ್ತು ಅಧಿಕಾರಿ ಸತೀಶ್‌ ಡಿ ಸೋಜಾ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರು ಫಾ […]

DAKSHINA KANNADA

ಪಂಚಾಯತ್  ಸಭೆಯಲ್ಲಿ ತುಳು ಭಾಷೆ ಬಳಕೆಗೆ ಕಾನೂನಿನ ನಿರ್ಬಂಧವಿಲ್ಲ: ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್

ಮಂಗಳೂರು : ಗ್ರಾಮ ಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ಜನಪ್ರತಿನಿಧಿಗಳು ಚರ್ಚಿಸುವ ಸಂಧರ್ಭದಲ್ಲಿ ತುಳುಭಾಷೆ ಬಳಕೆ ಮಾಡುವುದಕ್ಕೆ ಕಾನೂನಿನ ನಿಯಾಮನುಸಾರ ಯಾವುದೇ ನಿರ್ಬಂಧ ಇರುವುದಿಲ್ಲ  ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಪ್ರತಿಕ್ರಿಯಿಸಿದ್ದಾರೆ. ಕಾರ್ಕಳದ ಯಶಸ್ವಿ ನಾಗರಿಕ ಸೇವಾ ಸಂಘದ ಸಂಚಾಲಕ ಮುರಳೀಧರ ಎಂಬವರು ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರಿಗೆ ಮನವಿ ಸಲ್ಲಿಸಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಜನಪ್ರತಿನಿಧಿಗಳು  ಮತ್ತು ಅಧಿಕಾರಿಗಳು ಚರ್ಚಿಸುವಾಗ ತುಳು ಭಾಷೆ ಬಳಕೆ ಮಾಡದಂತೆ […]

DAKSHINA KANNADA

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ 56 ಪೊಲೀಸ್ ಸಿಬ್ಬಂದಿಯನ್ನು ವರ್ಗಾಯಿಸಲಾಗಿದೆ. ಈ ವರ್ಗಾವಣೆಯನ್ನು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಆದೇಶದಂತೆ ಕೈಗೊಳ್ಳಲಾಗಿದ್ದು, ಕೋಮು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಪ್ರಮುಖವಾದುದೆಂದು ಪರಿಗಣಿಸಲಾಗಿದೆ. ವರ್ಗಾವಣೆಯಾದ ಸಿಬ್ಬಂದಿಯಲ್ಲಿ ಬಜ್ಪೆ ಠಾಣೆಯ ಹೆಡ್ ಕಾನ್ಸ್‌ಟೇಬಲ್ ರಶೀದ್ ಅವರ ಹೆಸರು ಕೂಡ ಸೇರಿದ್ದು, ಇವರು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರಿಂದ ಆರೋಪಕ್ಕೆ ಒಳಗಾಗಿದ್ದರು. ಈ […]

COMMUNITY NEWS DAKSHINA KANNADA LATEST NEWS STATE

ತುಳು ಭಾಷೆ ಗ್ರಾ.ಪಂ.ಗಳಲ್ಲಿ ಬಳಸುವಂತಿಲ್ಲ? ತೀವ್ರ ಚರ್ಚೆ ಹುಟ್ಟು ಹಾಕಿದ ಜಿ.ಪಂ. ಪತ್ರ

ಮಂಗಳೂರು, ಜೂನ್ 20: ಗ್ರಾಮ ಪಂಚಾಯತ್ ನಲ್ಲಿ ತುಳು ಭಾಷೆಯನ್ನು ಸಾಮಾನ್ಯ ಸಭೆ ಸಂದರ್ಭದಲ್ಲಿ ಬಳಸಲು ಅವಕಾಶ ನೀಡದೆ, ಕನ್ನಡಕ್ಕೆ ಆದ್ಯತೆ ನೀಡುವ ಕುರಿತಾಗಿ ಪತ್ರವೊಂದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಪತ್ರ ತೀವ್ರ ಚರ್ಚೆ ಹುಟ್ಟು ಹಾಕಿದೆ. ಕಾರ್ಕಳ ಮೂಲದ ವ್ಯಕ್ತಿಯೊಬ್ಬ ದ.ಕ. ಜಿಲ್ಲಾ ಪಂಚಾಯತ್ ಮುಖ್ಯಾಧಿಕಾರಿಗೆ ಪತ್ರ ಬರೆದು, ಗ್ರಾ.ಪಂ. ಸಾಮಾನ್ಯ ಸಭೆಯ ವೇಳೆ ತುಳು ಭಾಷೆಗೆ ಅವಕಾಶ ನೀಡದೆ ಕನ್ನಡದಲ್ಲೇ ಚರ್ಚೆಗೆ ಅವಕಾಶ ನೀಡುವಂತೆ ಪಿಡಿಒ ಗಳಿಗೆ ಆದೇಶ ನೀಡಬೇಕೆಂದು ಕೋರಿ […]