ರಾಜ್ಯದಾದ್ಯಂತ ಯುವ ಸಬಲೀಕರಣಕ್ಕಾಗಿ ಯುವ ಕಾಂಗ್ರೆಸ್ ಕಾರ್ಯಕ್ರಮ; ಮಂಜುನಾಥ ಗೌಡ
ಮಂಗಳೂರು: ಯುವ ಜನರ ಉದ್ಯೋಗ, ಶಿಕ್ಷಣ ಹಾಗೂ ಬದುಕು ಕಟ್ಟಿಕೊಳ್ಳಲು ಯುವ ಕಾಂಗ್ರೆಸ್ ರಾಜ್ಯದಾದ್ಯಂತ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ. ಪಕ್ಷ ಸಂಘಟನೆಯೊಂದಿಗೆ ಯುವ ಸಬಲೀಕರಣದ ಯೋಜನೆಯ ನೀಲಿ ನಕ್ಷೆಯನ್ನು ಯುವ ಕಾಂಗ್ರೆಸ್ ಹೊಂದಿದೆ, ಅದನ್ನು ಸಾಕಾರಗೊಳಿಸಲಿದೆ” ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ ಹೇಳಿದರು. ಆದಿತ್ಯವಾರದಂದು ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯನ್ನು […]









