Month: June 2025

DAKSHINA KANNADA

ಕೆತ್ತಿಕಲ್ ನಲ್ಲಿ ಇನ್ನಷ್ಟು ಭೂಕುಸಿತ ತಡೆಯಲು  ಜಿಲ್ಲಾಧಿಕಾರಿಗಳು ಹೆದ್ದಾರಿ ಪ್ರಾಧಿಕಾರಕ್ಕೆ ನಿರ್ದೇಶಿಸಿದರು.

ಮಂಗಳೂರು ಜೂನ್ 17  ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಮಂಗಳವಾರ ನಗರದ ಪಂಪ್ ವೆಲ್ ಹಾಗೂ ಕೆತ್ತಿಕಲ್ ಗೆ ಭೇಟಿ ನೀಡಿದರು.ಪಂಪ್ ವೆಲ್ ನಲ್ಲಿ ತೀವ್ರ ಮಳೆ ಸಂದರ್ಭದಲ್ಲಿ ನೀರು ನಿಂತು ಸಮಸ್ಯೆಯಾಗುತ್ತಿರುವ ಸಮಸ್ಯೆ ಪರಿಹರಿಸಲು ರಾಜಾ ಕಾಲುವೆಯಲ್ಲಿ ನೀರಿನ ಸರಾಗ ಹರಿವಿಗೆ ತಾಂತ್ರಿಕವಾಗಿ‌ ಸಮಸ್ಯೆ ಬಗೆಹರಿಸಲು ಅವರು ನಗರಪಾಲಿಕೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು. ಕೆತ್ತಿಕಲ್ ನಲ್ಲಿ ಇನ್ನಷ್ಟು ಭೂಕುಸಿತ ತಡೆಯಲು ಮತ್ತು ರಾಷ್ಟ್ರೀಯ ಹೆದ್ದಾರಿ ಯಲ್ಲಿ ಸುಗಮ ಸಂಚಾರಕ್ಕೆ ತಾಂತ್ರಿಕ ಪರಿಹಾರವನ್ನು ಕೂಡಲೇ ಕೈಗೊಳ್ಳಲು ಜಿಲ್ಲಾಧಿಕಾರಿಗಳು […]

DAKSHINA KANNADA

ನೀಟ್ ಸಾಧಕರಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್  ಸನ್ಮಾನ

ಮಂಗಳೂರು, ಜೂ.17  ಈ ವರ್ಷದ ನೀಟ್ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ  ಜಿಲ್ಲೆಯ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸನ್ಮಾನ ಮಾಡಿದರು.    ಎಕ್ಸ್‍ಪರ್ಟ್  ಕಾಲೇಜಿನ  ವಿದ್ಯಾರ್ಥಿಗಳಾದ ನಿಖಿಲ್ ಸೊನ್ನದ್ (ಅಖಿಲ ಭಾರತ ಮಟ್ಟದ 17ನೇ ರ್ಯಾಂಕ್,ರಾಜ್ಯಮಟ್ಟದ ಪ್ರಥಮ  ರ್ಯಾಂಕ್) ಹಾಗೂ ಕೆ.ಜಿ. ನಿಧಿ (ಅಖಿಲ ಭಾರತ 84ನೇ ರ್ಯಾಂಕ್, ರಾಜ್ಯಮಟ್ಟದ 7ನೇ ರ್ಯಾಂಕ್ ಅವರಿಗೆ ಜಿಲ್ಲಾಧಿಕಾರಿಗಳು ತಮ್ಮ ಕಚೇರಿಯಲ್ಲಿ ಸನ್ಮಾನಿಸಿದರು.      ಈ ಸಂದರ್ಭದಲ್ಲಿ    ಎಕ್ಸ್‍ಪರ್ಟ್  ವಿದ್ಯಾಸಂಸ್ಥೆಗಳ ಮುಖ್ಯಸ್ಥ  ನರೇಂದ್ರ ನಾಯಕ್,  […]

DAKSHINA KANNADA LATEST NEWS STATE

ಸೇದಿ ಬಿಸಾಕಿದ್ದ ಬೀಡಿ ತುಂಡು ಗಂಟಲಲ್ಲಿ ಸಿಲುಕಿ ಮಗು ಸಾವು

ಮಂಗಳೂರು: ಅರ್ಧ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ ಹತ್ತು ತಿಂಗಳ ಮಗವೊಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಅಡ್ಯಾರ್‌ನಲ್ಲಿ ವಾಸವಾಗಿದ್ದ ಬಿಹಾರ ಮೂಲದ ದಂಪತಿಯ 10 ತಿಂಗಳ ಮಗು ಅನೀಶ್ ಕುಮಾರ್ ಮೃತ ಪಟ್ಟಿದೆ. ಶನಿವಾರ ಮಧ್ಯಾಹ್ನ ಸುಮಾರು 1:30ಕ್ಕೆ ಅರ್ಧ ಸೇದಿ ಬಿಸಾಡಿದ್ದ ಬೀಡಿ ತುಂಡನ್ನು ಮಗು ನುಂಗಿ ಅಸ್ವಸ್ಥಗೊಂಡಿತ್ತು. ಅಪರಾಹ್ನ 3:30ಕ್ಕೆ ಮಗುವನ್ನು ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ರವಿವಾರ ಬೆಳಗ್ಗೆ […]

DAKSHINA KANNADA HOME LATEST NEWS

ಪುತ್ತೂರು ಶಾಸಕ ಹಾರೆ ಹಿಡಿದ ಎಫೆಕ್ಟ್‌: ಮಾಣಿ- ಸಂಪಾಜೆ ಹೆದ್ದಾರಿ ಚರಂಡಿ ದುರಸ್ಥಿ ಆರಂಭ

ಪುತ್ತೂರು: ಭಾನುವಾರದಂದು ಪುತ್ತೂರು ಶಾಅಕ ಅಶೋಕ್ ರೈ ಅವರು ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಶಾಲೆಯ ಬಳಿ ಚರಂಡಿ ಇಲ್ಲದೆ ರಸ್ತೆ ಮೇಲೆ ಮಳೆ ನೀರು ಹರಿಯುತ್ತಿರುವುದನ್ನು ಗಮನಿಸಿ ಸ್ವಯಂ ಆಗಿ ಹಾರೆ ಹಿಡಿದು ಚರಂಡಿ ಬಿಡಿಸುವ ಕೆಲಸವನ್ನು ಮಾಡಿದ್ದು ಇದು ಸಾಮಾಜಿಕ ತಾಣದಲ್ಲಿ ವೈರಲ್ ಆಗಿತ್ತು. ರಸ್ತೆ ಬದಿ ಯಲ್ಲಿ ಚರಂಡಿಯಲ್ಲಿ ಹೂಳು ತುಂಬಿದ್ದು ಅದನ್ನು ತೆರವು ಮಾಡದ ವಿಚಾರ ಇಂಜಿನಿಯರ್ ಗಳ ಗಮನಕ್ಕೂ ಬರುವಂತಾಗಿತ್ತು. ಶಾಸಕರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಬಹಳ ಮೆಚ್ಚುಗೆ ವ್ಯಕ್ತವಾಗಿತ್ತು. […]

DAKSHINA KANNADA HOME

17 ಬಡ ವಿದ್ಯಾರ್ಥಿಗಳಿಗೆ ಶಾಸಕ ಅಶೋಕ್ ರೈ ಯವರಿಂದ ಪುಸ್ತಕ ವಿತರಣೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ಕಲಿಯುತ್ತಿರುವ ಆರ್ಥಿಕ ಸಂಕಷ್ಟದಲ್ಲಿರುವ ಒಟ್ಟು 17 ಬಡ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕವನ್ನು ಶಾಸಕ ಅಶೋಕ್ ರೈ ಅವರು ನೀಡಿದ್ದಾರೆ. ತೀರಾ ಬಡತನದಲ್ಲಿರುವ ವಿದ್ಯಾರ್ಥಿಗಳ ಕಲಿಕೆಗೆ ನೆರವಾಗುವ ನಿಟ್ಟಿನಲ್ಲಿ ಶಾಸಕರು ತನ್ನ ಸ್ವಂತ‌ನಿಧಿಯಿಂದ ಪುಸ್ತಕವನ್ನು ನೀಡಿದ್ದಾರೆ. ಈ‌ಸಂಧರ್ಭದಲ್ಲಿ‌ಮಾತನಾಡಿದ ಶಾಸಕರು ತನ್ನ ಕ್ಷೇತ್ರದಲ್ಲಿ ಅನೇಕ ಸಂಕಷ್ಟದಲದಲಿರುವ ಕುಟುಂಬಗಳು, ಅನಾರೋಗ್ಯದಿಂದ ಮನೆ ಯಜಮಾನ ಕೆಲಸಕ್ಕೂ ಹೋಗಲಾರದೆ ಕಷ್ಟದಲ್ಲಿರುವ ಕುಟುಂಬದ ಮಕ್ಕಳಿಗೆ ಬರೆಯುವ ಪುಸ್ತಕವನ್ನು ನೀಡಲಾಗಿದೆ. ಬಡವರ ಮಕ್ಕಳು ಆರ್ಥಿಕ ಸಂಕಷ್ಟದ ಕಾರಣಕ್ಕೆ […]

INETRNATIONAL

ಸುದ್ದಿ ಓದುತ್ತಿರುವಾಗಲೇ ಇಸ್ರೇಲ್ ಕ್ಷಿಪಣಿ ದಾಳಿ: ಓಡಿಹೋದ ನಿರೂಪಕಿ

ಟೆಹ್ರಾನ್: ಸುದ್ದಿ ಓದುತ್ತಿರುವಾಗಲೇ ಇರಾನ್‌ನ ಸರ್ಕಾರಿ ಟಿವಿ ಕಟ್ಟಡದ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಗಾಬರಿಗೊಂಡ ನಿರೂಪಕಿ ಸ್ಥಳದಿಂದ ಓಡಿಹೋದ ವೀಡಿಯೋ ವೈರಲ್‌ ಆಗಿದೆ. https://x.com/clashreport/status/1934629208744960404?ref_src=twsrc%5Etfw%7Ctwcamp%5Etweetembed%7Ctwterm%5E1934629208744960404%7Ctwgr%5Ec0873475d70c17a849d8b81c0c49113abe32d823%7Ctwcon%5Es1_&ref_url=https%3A%2F%2Fadmin.varthabharati.in%2Fmain.jsp ಇಸ್ರೇಲ್  ಮತ್ತು ಇರಾನ್ ನಡುವೆ ಸಂಘರ್ಷ ಪ್ರಾರಂಭವಾದ ನಾಲ್ಕನೇ ದಿನ ಈ ಘಟನೆ ನಡೆದಿದೆ. ಎರಡೂ ದೇಶಗಳ ನಡುವೆ ದಾಳಿಗಳು ಹೆಚ್ಚಾಗುತ್ತಿವೆ.  ಇರಾನ್ನ ರಾಜಧಾನಿ ಟೆಹ್ರಾನ್ ಮೇಲೆ ಇಸ್ರೇಲ್ ನಡೆಸಿದ ಇತ್ತೀಚಿನ ಕ್ಷಿಪಣಿ ದಾಳಿಯಲ್ಲಿ ಇಸ್ರೇಲ್ ತನ್ನ ಮೇಲೆ ದಾಳಿ ಮಾಡಿದೆ ಎಂದು ಇರಾನ್‌ನ ಸರ್ಕಾರಿ ಟಿವಿ […]

DAKSHINA KANNADA

ಪ್ರವಾಹ ತಗ್ಗಿಸುವಿಕೆ ಪ್ರಯತ್ನಗಳನ್ನು ತೀವ್ರಗೊಳಿಸಲು ನಗರಪಾಲಿಕೆಗೆ ಡಿಸಿ ನಿರ್ದೇಶನ

ಮಂಗಳೂರು ನಗರದಲ್ಲಿ ಕೃತಕ ಪ್ರವಾಹ ಮತ್ತು ನೈರ್ಮಲ್ಯ ಸಮಸ್ಯೆಗಳನ್ನು ಪರಿಹರಿಸಲು ತೀವ್ರಗತಿಯಲ್ಲಿ ಕ್ರಮ ಕೈಗೊಳ್ಳಲು ಮಹಾನಗರಪಾಲಿಕೆ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ನಿರ್ದೇಶನ ನೀಡಿದ್ದಾರೆ.ಅವರು ಸೋಮವಾರ ಈ ಸಂಬಂಧ ಮಹಾನಗರಪಾಲಿಕೆ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಪಂಪ್‌ವೆಲ್, ಕೊಟ್ಟಾರಚೌಕಿ, ಕೊಡಿಯಾಲ್ ಗುತ್ತು, ಕಣ್ಣೂರು, ಬೈಲಾರೆ, ಪಾಂಡೇಶ್ವರ ಮತ್ತಿತರ ಕಡೆ ಮರುಕಳಿಸುವ ಪ್ರವಾಹವನ್ನು ತಗ್ಗಿಸಲು ಕೂಡಲೇ ಕ್ರಮ‌ಕೈಗೊಳ್ಳಬೇಕು. ಮಳೆನೀರಿಗೆ ಪರ್ಯಾಯ ತಿರುವು ಮಾರ್ಗಗಳನ್ನು ಗುರುತಿಸಿ ಮತ್ತು ಕಾರ್ಯಗತಗೊಳಿಸಬೇಕು. ಪ್ರವಾಹಕ್ಕೆ ಕಾರಣವಾಗುವ ಜಲಾನಯನ ಪ್ರದೇಶಗಳ ವಿವರವಾದ ಮೌಲ್ಯಮಾಪನವನ್ನು […]

DAKSHINA KANNADA

ದ.ಕ. ಯುವಜನತೆಯ ಪ್ರತಿಭೆ, ವೃತ್ತಿಜೀವನ, ಉದ್ಯಮಶೀಲತೆ ಉತ್ತೇಜನಕ್ಕಾಗಿ ‘ಯುವ್ವಿಕಾಸ’ ಸಂಕಲ್ಪ: ಸಂಸದ ಕ್ಯಾ. ಚೌಟ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಮುದಾಯಕ್ಕೆ ಹೊಸ ಅವಕಾಶಗಳನ್ನು ಸೃಷ್ಟಿಸುವ, ಅವರ ಯೋಚನೆ- ಕನಸುಗಳಿಗೆ ಶಕ್ತಿ ಕೊಡುವ ಹಾಗೂ ಸಾಧ್ಯತೆಗಳನ್ನು ಅನ್ವೇಷಿಸುವ ಗುರಿಯೇ ‘ಯುವ್ವಿಕಾಸ್’ ಸಂಕಲ್ಪ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ. ಸುಳ್ಯದ ತಾಲೂಕು ಪಂಚಾಯತ್‌ನಲ್ಲಿ ಇಂದು ಸಂಸದರ ಕಚೇರಿ ಹಾಗೂ ಸುಂದರ ಭಾರತ ಟ್ರಸ್ಟ್‌ನ ಸಹಯೋಗದಲ್ಲಿ ಆಯೋಜಿಸಲಾಗಿದ್ದ ’ಯುವ್ವಿಕಾಸ್ ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದ.ಕ. ಜಿಲ್ಲೆಯ ಯುವ ಶಕ್ತಿಗಳನ್ನು ಜಾಗೃತಗೊಳಿಸುವ ಜೊತೆಗೆ ಅವರಿಗೆ ಉಜ್ವಲ ಭವಿಷ್ಯ ರೂಪಿಸುವ ಆಶಯದಡಿ […]

DAKSHINA KANNADA

ಪ್ರವಾಹ ಪೀಡಿತ ಪ್ರದೇಶದ ಶಾಶ್ವತ ಪರಿಹಾರಕ್ಕೆ ಕ್ರಮ:- ಶಾಸಕ ಕಾಮತ್

ಮಂಗಳೂರು: ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನಗರದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನಲೆಯಲ್ಲಿ ಇಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಎಕ್ಕೂರು, ತೋಚಿಲ ಕಟ್ಟಪುಣಿ, ರಾಷ್ಟ್ರೀಯ ಹೆದ್ದಾರಿ ಬಳಿಯ ವೈದ್ಯನಾಥ ನಗರ, ಜಪ್ಪಿನಮೊಗರುವಿನ ಗಣೇಶ ನಗರ, ರಾಜಕಾಲುವೆ ಸೇರುವ ನೇತ್ರಾವತಿ ತೀರದ ಕಡೇಕಾರು ಪ್ರದೇಶ, ಮೊದಲಾದ ಪ್ರದೇಶಗಳ, ನೆರೆ ಪರಿಸ್ಥಿತಿಗೆ ಕಾರಣ, ತುರ್ತಾಗಿ ನಡೆಯಬೇಕಿರುವ ಕಾರ್ಯ, ಭವಿಷ್ಯದಲ್ಲಿ ಪ್ರವಾಹ ಮರುಕಳಿಸದಂತೆ […]

DAKSHINA KANNADA HOME LATEST NEWS

ಬೆಳ್ತಂಗಡಿ: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಪಾರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ ನದಿಯಲ್ಲಿ ಯುವಕರೀರ್ವರು ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಬದುಕಿ ಉಳಿದ ಘಟನೆ ಆದಿತ್ಯವಾರ ನಡೆದಿದೆ. ಸವಣಾಲು ಗ್ರಾಮದ ಮಂಜದಬೆಟ್ಟುವಿನಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಪ್ರದೇಶವನ್ನು ಸಂಪರ್ಕಿಸುವ ಕೂಡುಜಾಲು ಎಂಬಲ್ಲಿ ಹರಿಯುತ್ತಿರುವ ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹ ಸವಾರ ಸುಳ್ಯೋಡಿ ನಿವಾಸಿ ಸಂಜೀವ […]