Month: September 2025

DAKSHINA KANNADA HOME

6 ತಿಂಗಳೊಳಗೆ 2000 ನಿವೇಶನ ರಹಿತ ಕುಟುಂಬಗಳಿಗೆ ಸೈಟ್ ಹಂಚುತ್ತೇವೆ: ಶಾಸಕ ಅಶೋಕ್ ರೈ

ಪುತ್ತೂರು: ಚುನಾವಣೆ ಸಮಯದಲ್ಲಿ ಜನರಿಗೆ ಕೊಟ್ಟ ಭರವಸೆಯನ್ನು ಈಡೇರಿಸುವ ಕೆಲಸವನ್ನು ಮಾಡಿಯೇ ಮಾಡುತ್ತೇನೆ ಮುಂದಿನ 6 ತಿಂಗಳೊಳಗೆ 2000 ನಿವೇಶನವನ್ನು ಕೊಟ್ಟೇ ಕೊಡ್ತೇನೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಪುತ್ತೂರು ತಾಪಂ ಸಭಾಂಗಣದಲ್ಲಿ ನಡೆದ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಿಡಿಒಗಳ ಸಭೆಯಲ್ಲಿ ಮಾತನಾಡಿದರು. ಗ್ರಾಮಗಳಲ್ಲಿ ಕಾಯ್ದಿರಿಸಿದ ನಿವೇಶನ ಮತ್ತು ಗ್ರಾಪಂಗಳಿಗೆ ಬಂದಿರುವ ನಿವೇಶನ ರಹಿತ ಫಲಾನುಭವಿಗಳ ಮಾಹಿತಿಯನ್ನು ಪಡೆದರು. ಮುಂದಿನ ಆರು ತಿಂಗಳ ಬಳಿಕ ನಿವೇಶನ ಇಲ್ಲದ ಅರ್ಹ ಬಡಕುಟುಂಬಗಳಿಗೆ ೨೦೦೦ ನಿವೇಶನ […]

DAKSHINA KANNADA HOME

ವಿಟ್ಲ ಎರುಂಬು ಮೆಣಸಿನಗಂಡಿಯಲ್ಲಿ ಮಾದಕ ವಸ್ತು ಮಾರಾಟ: ಮೂವರ ಬಂಧನ

ವಿಟ್ಲ ಸೆ. 16: ಅಳಿಕೆ ಗ್ರಾಮದ ಎರುಂಬು ಮೆಣಸಿನಗಂಡಿಯಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಗಳನ್ನುತಪಾಸಣೆ ನಡೆಸಿದ ಪೊಲೀಸರಿಗೆ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸಿದ ವಿಚಾರ ತಿಳಿದು ಬಂದಿದ್ದು, ಮೂವರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾಕ್ ವಿಟ್ಲ ಕಸಬಾ ಗ್ರಾಮದ ಮಂಗಳಪದವು ನಿವಾಸಿ ಸನತ್ ಕುಮಾರ್ (23), ಪೊನ್ನೊಟ್ಟು ನಿವಾಸಿ ಮಹಮ್ಮದ್ రాయిరో (23) ಮತ್ತು ಮಂಗಳಪದವು ನಿವಾಸಿ ಚೇತನ್ (23) ಬಂಧಿತರು. ಆರೋಪಿಗಳಿಂದ 6.27 ಗ್ರಾಂ ತೂಕದ ಗಾಂಜಾ, ಮೊಬೈಲ್, ಒಂದು 3 ದ್ವಿಚಕ್ರ ವಾಹನವನ್ನು […]

HOME NATIONAL

ಒಂದಕ್ಕಿಂತ ಹೆಚ್ಚು ಬಾರಿ ಕಚ್ಚುವ ಬೀದಿ ನಾಯಿಗೆ ಜೀವಾವಧಿ ಶಿಕ್ಷೆ! ಉ.ಪ್ರ.ಸರಕಾರ ಆದೇಶ |

ಉತ್ತರ ಪ್ರದೇಶ ಸೆ.16: ಯಾವುದೇ ಪ್ರಚೋದನೆಯಿಲ್ಲದೆ ಒಂದಕ್ಕಿಂತ ಹೆಚ್ಚು ಸಂದರ್ಭಗಳಲ್ಲಿ ಮನುಷ್ಯರಿಗೆ ಕಚ್ಚುವಂತಹ ಉತ್ತರ ಪ್ರದೇಶದ ಬೀದಿ ನಾಯಿಗಳಿಗೆ ಜೀವಾವಧಿ ಶಿಕ್ಷೆ ಕಟ್ಟಿಟ್ಟ ಬುತ್ತಿಯಾಗಲಿದೆ. ಕೇಳಲು ವಿಚಿತ್ರವೆನಿಸಿದರೂ ಬೀದಿ ನಾಯಿಗಳ ನಿರ್ವಹಣೆ ಯನ್ನು ಖಾತ್ರಿಪಡಿಸಿಕೊಳ್ಳಲು ಈ ಆದೇಶವನ್ನು ಉತ್ತರ ಪ್ರದೇಶ ರಾಜ್ಯ ಸರಕಾರ ಹೊರಡಿಸಿದೆ. ಮೊದಲ ಬಾರಿ ಕಚ್ಚುವಂತಹ ನಾಯಿಯನ್ನು 10 ದಿನಗಳ ಕಾಲ ಆಶ್ರಯ ಕೇಂದ್ರದಲ್ಲಿ ಇರಿಸ ಲಾಗುತ್ತದೆ. ಈ ಅವಧಿಯಲ್ಲಿ ಸಂತಾನಶಕ್ತಿ ಹರಣ ಚಿಕಿತ್ಸೆ ಲಸಿಕೆಗಳನ್ನು ನೀಡಲಾಗುವುದಲ್ಲದೆ ಅವು ಗಳ ವರ್ತನೆಯನ್ನು ಪರಿಶೀಲಿಸಲಾಗುತ್ತದೆ. 10 […]

DAKSHINA KANNADA HOME

ದೈವಾರಾಧನೆ, ಹುಲಿವೇಷ ಕುಣಿಸುವ ತಾಸೆಯ ವೈಭವಕ್ಕೆ ಸೌಹಾರ್ದದ ಕಲಶ!

ಮಂಗಳೂರು .ಸೆ 17 : ನವರಾತ್ರಿ, ದಸರಾ ಸಂಭ್ರಮಕ್ಕೆ ನಾಡು ಸಿದ್ದಗೊಂಡಿದೆ. ಎಲ್ಲೆಲ್ಲೂ ಹುಲಿ ವೇಷದ ಸಂಭ್ರಮದ ಕುಣಿತಕ್ಕೆ ತಾಸೆಯ ಶಬ್ದಕೇಳಲು ಶುರುವಾಗುತ್ತಿದೆ. ವಿಶೇಷವೆಂದರೆ, ಈ ತಾಸೆಯ ಶಬ್ದ ಕೇಳಲು ಮುಖ್ಯವಾಗಿ ಬೇಕಾಗಿರುವ ತಾಸೆಯೊಳಗಿನ “ಕಲಶ ಕರಾವಳಿಯಲ್ಲಿ ಸೌಹಾರ್ದದ ಬೆಸುಗೆ ಬೆಸೆದಿದೆ! ಮಂಗಳೂರು ಹೊರವಲಯದ ಎಡಪದವಿನ ಮೊಹಮ್ಮದ್ ರಫೀಕ್ ಅವರು ಮೂರು ದಶಕಗಳಿಂದ ತುಳುನಾಡಿನ ದೈವಾರಾಧನೆ ಹಾಗೂ ಹುಲಿವೇಷಗಳಿಗೆ ಪ್ರಮುಖವಾದ ವಾದ್ಯ ಪ್ರಕಾರವಾದ ತಾಸೆಯ ತಯಾರಿಯಲ್ಲಿ ಅತ್ಯಂತ ಅಗತ್ಯ ಭಾಗವಾದ ‘ಕಲಶ’ ನಿರ್ಮಾ ಣದಲ್ಲಿ ತೊಡಗಿಸಿಕೊಂಡಿದ್ದಾರೆ. ತಾನೆ […]

DAKSHINA KANNADA HOME

*ವಿಚ್ಚೇಧನಕ್ಕೆ ಬಂದವರನ್ನು ಒಂದುಗೂಡಿಸಿದ ಲೋಕ್ ಅದಾಲತ್*

ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್ ಕಾರ್ಯಕ್ರಮವು ವಿಚ್ಚೇಧನಕ್ಕೆ ಮುಂದಾಗಿದ್ದ ದಂಪತಿಯನ್ನು ಒಂದುಗೂಡಿಸುವಲ್ಲಿ ಯಶಸ್ವಿಯಾಯಿತು. ಹರೀಶ್- ಶಶಿಕಲಾ ಎಂಬ ದಂಪತಿಯು ದಾಂಪತ್ಯ ಭಿನ್ನಾಭಿಪ್ರಾಯಗಳಿಂದ ವಿಚ್ಚೇಧನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನಂತರ ಈ ಪ್ರಕರಣವನ್ನು ನ್ಯಾಯಾಲಯದ ಮಧ್ಯಸ್ಥಿಕೆ ಕೇಂದ್ರದ ಮೂಲಕ ಸರಿಪಡಿಸಲು ಪ್ರಯತ್ನಿಸಿ, ಗಂಡ ಹೆಂಡತಿಯ ಮಧ್ಯೆ ಸಂಧಾನ ನಡೆಸಿ, ಒಂದುಗೂಡಿ ದಾಂಪತ್ಯ ಜೀವನ ಮುಂದುವರೆಸುವುದರ ಬಗ್ಗೆ ಉಭಯ ಪಕ್ಷಗಾರರಿಗೆ ಮನವರಿಕೆ ಮಾಡಲಾಗಿದೆ. ಸಂಧಾನಕ್ಕೆ ಒಪ್ಪಿ, ದಂಪತಿಗಳು ಮತ್ತೆ ಒಂದುಗೂಡಿ ಜೀವನ ಮುಂದುವರಿಸಲು […]

DAKSHINA KANNADA HOME

ಶಾಸಕ ಅಶೋಕ್ ರೈ ನೇತೃತ್ವದ ದೀಪಾವಳಿ ಕಾರ್ಯಕ್ರಮ “ ಅಶೋಕ ಜನಮನ” ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ

ಪುತ್ತೂರು: ಅಕ್ಟೋಬರ್ 20 ರಂದು ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್‌ ಟ್ರಸ್ಟ್ ವತಿಯಿಂದ ನಡೆಯುವ ದೀಪಾವಳಿ ಕಾರ್ಯಕ್ರಮ “ ಅಶೋಕ ಜನಮನ” ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಶಾಸಕರೂ ಆದ ಅಶೋಕ್ ರೈ ತಿಳಿಸಿದರು. ಶಾಸಕರ ಕಚೇರಿ ಸಭಾಂಗಣದಲ್ಲಿ ನಡೆದ ಟ್ರಸ್ಟ್ ಸಭೆಯಲ್ಲಿ ಮಾತನಾಡಿದ ಅವರು ಈ ಬಾರಿಯ ಕಾರ್ಯಕ್ರಮಕ್ಕೆ ಸುಮಾರು ಒಂದು ಲಕ್ಷಕ್ಕೂ ಮಿಕ್ಕಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದ್ದು […]

DAKSHINA KANNADA HOME

*ಎಂ.ಸಿ.ಸಿ. ಬ್ಯಾಂಕಿನ 12ನೇ ಎಟಿಎಂ ಕಿನ್ನಿಗೋಳಿ ಶಾಖೆಯಲ್ಲಿ ಉದ್ಘಾಟನೆ*

ಮಂಗಳೂರು: ಎಂಸಿಸಿ ಬ್ಯಾಂಕ್, ಮಂಗಳೂರು ತನ್ನ 12 ನೇ ಎಟಿಎಂ ಕಿನ್ನಿಗೋಳಿ ಶಾಖೆಯಲ್ಲಿ ಎಟಿಎಂ ಅನ್ನು ಎಂಆರ್‌ಪಿಎಲ್‌ನ ಕಾರ್ಪೊರೇಟ್ ಬ್ರ‍್ಯಾಂಡಿAಗ್ ಮತ್ತು ಕಾರ್ಪೊರೇಟ್ ಕಮ್ಯುನಿಕೇಷನ್ಸ್ನ ಚೀಫ್ ಜನರಲ್ ಮ್ಯಾನೇಜರ್ ಡಾ| ರುಡಾಲ್ಫ್ ಜೋಯರ್ ನೊರೊನ್ಹಾ ಅವರು ಉದ್ಘಾಟಿಸಿದರು. ಕಿನ್ನಿಗೋಳಿಯ ಇಮ್ಯಾಕ್ಯುಲೇಟ್ ಕಾನ್ಸೆಪ್ಷನ್ ಚರ್ಚ್ನ ಧರ್ಮಗುರು ರೆವರೆಂಡ್ ಫಾದರ್ ಜೋಕಿಮ್ ಫೆರ್ನಾಂಡಿಸ್ ಅವರು ಎಟಿಎಂ ಅನ್ನು ಆಶೀರ್ವದಿಸಿದರು. ಹೊಸದಾಗಿ ಉದ್ಘಾಟನೆಗೊಂಡ ಎಟಿಎಂನಿAದ ಮೊದಲ ನಗದು ಹಿಂಪಡೆಯುವಿಕೆಯನ್ನು ಬಳ್ಕುಂಜೆಯ ಸೇಂಟ್ ಪೌಲ್ಸ್ ಚರ್ಚ್ನ ಧರ್ಮಗುರು ರೆವರೆಂಡ್ ಫಾದರ್ ಪೌಲ್ ಸಿಕ್ವೇರಾ […]

DAKSHINA KANNADA HOME

ಸಂತ ಮದರ್ ತೆರೇಸಾರವರ ನೆನಪಿನಲ್ಲಿ ಜಿಲ್ಲಾಮಟ್ಟದ ವಿಚಾರ ಸಂಕಿರಣ

ಮಂಗಳೂರು, ಸೆ. 11: ಬಹುತ್ವ ಬಹುಭಾಷೆ, ಬಹು ಸಂಸ್ಕೃತಿಯೊಂದಿಗೆ ಬೆಳದು ಬಂದಿರುವ ಭಾರತದಲ್ಲಿ ಏಕ ಸಂಸ್ಕೃತಿ, ಏಕ ಭಾಷೆಯ ಅಧಿಕಾರಶಾಹಿ ರಾಜಕಾರಣಿಗಳ ಒತ್ತಾಸೆಗೆ ಬಲಿಯಾಗದೆ, ಸಂವಿಧಾನದ ಪರವಾಗಿ ನಿಲ್ಲುವ ಮೂಲಕ ಸಹಬಾಳ್ವೆಯನ್ನು ಉಳಿಸಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷಪ್ರೊ| ಪುರುಷೋತ್ತಮ ಬಿಳಿಮಲೆ ಹೇಳಿದರು. ಮಂಗಳೂರು ಸಂತ ಮದರ್‌ತೆರೇಸಾ ವಿಚಾರ ವೇದಿಕೆ ವತಿಯಿಂದ ಮದರ್ ತೆರೇಸಾ ಅವರ 28ನೇ ಸಂಸ್ಕರಣ ದಿನದ ಅಂಗವಾಗಿ ‘ಸಹಬಾಳ್ವೆಗೆ ಎದುರಾಗಿರುವ ಅಪಾಯಗಳು; ಪ್ರಜಾಪ್ರಭುತ್ವದ ಮುಂದಿ ರುವ ಸವಾಲುಗಳು’ ಎಂಬ ವಿಷಯದಲ್ಲಿ ಕುದ್ಮುಲ್ […]

HOME STATE

ಇಂಗ್ಲೆಂಡ್‌ನ ಕೇಂಬ್ರಿಡ್ಜ್‌ ವಿವಿ ಜೊತೆ ಕರ್ನಾಟಕ ಸಂಶೋಧನೆ, ಶೈಕ್ಷಣಿಕ ಸಹಯೋಗ

ಬೆಂಗಳೂರು: ವಿಶ್ವದ ಅತ್ಯಂತ ಶ್ರೇಷ್ಠ ಮತ್ತು ಪುರಾತನ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಇಂಗ್ಲೆಂಡ್‌ನ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದೊಂದಿಗೆ ಕರ್ನಾಟಕ ಸರ್ಕಾರದ ಸಂಶೋಧನೆ ಮತ್ತು ಶೈಕ್ಷಣಿಕ ಸಹಯೋಗ ಏರ್ಪಟ್ಟಿದೆ. ಈ ಮೂಲಕ ಕರ್ನಾಟಕ ಸರ್ಕಾರವು ಜಾಗತಿಕ ಶೈಕ್ಷಣಿಕ ವಲಯದಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಇಂಗ್ಲೆಂಡ್‌ನ ಪ್ರತಿಷ್ಠಿತ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದೊಂದಿಗೆ ಸಂಶೋಧನೆ ಮತ್ತು ಅಭಿವೃದ್ಧಿ ಉತ್ತೇಜಿಸುವ ನಿಟ್ಟಿನಲ್ಲಿ ದೀರ್ಘಾವಧಿಯ ಶೈಕ್ಷಣಿಕ ಸಹಯೋಗವನ್ನು ಘೋಷಿಸಲಾಗಿದೆ. ಈ ಸಹಯೋಗವು ಕರ್ನಾಟಕದ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹೊಸ ಆಯಾಮ ನೀಡುವುದರೊಂದಿಗೆ, ವಿದ್ಯಾರ್ಥಿ ಹಾಗೂ ಅಧ್ಯಾಪಕರಿಗೆ ಅಂತರಾಷ್ಟ್ರೀಯ […]

DAKSHINA KANNADA HOME

*ಕಲಾ ನಿಧಿ *ರಾಷ್ಟ್ರೀಯ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ, ಮಾಣೂರು ಆಯ್ಕೆ.

ಮಂಗಳೂರು: ಸೆ. 10 ನಾಟ್ಯ ಮಯೂರಿ ಟ್ರಸ್ಟ್ ಆಶ್ರಯದಲ್ಲಿ ಬೆಂಗಳೂರಿನ ಕನ್ನಡ ಭವನದಲ್ಲಿ ಸೆಪ್ಟೆಂಬರ್ 27ರಂದು ನಡೆಯುವ ಕಾರ್ಯಕ್ರಮದಲ್ಲಿ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಅವರ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ *ಕಲಾ ನಿಧಿ* ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದು ಪ್ರಶಸ್ತಿ, ಪ್ರದಾನ ಕಾರ್ಯಕ್ರಮವು ಸೆಪ್ಟೆಂಬರ್ 27ರಂದು ಕನ್ನಡ ಭವನದಲ್ಲಿ ನಡೆಯಲಿದೆ. ಟ್ರಸ್ಟಿನ ಸ್ಥಾಪಕರಾದ ಪ್ರೇಮಾಂಜಲಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. .ಡಾ. ಮಾಲತಿ ಶೆಟ್ಟಿ ಮಾಣೂರುರವರು ಕಳೆದ 20 ವರುಷಗಳಿಂದ ಸಾಹಿತ್ಯ […]