Month: October 2025

COMMUNITY NEWS DAKSHINA KANNADA LATEST NEWS STATE UDUPI

ಕ್ಯಾನ್ಸರ್ ಗೆದ್ದು ನಿರ್ಗತಿಕರ ಸೇವೆ ಮಾಡುವ ಕೋರಿನ್ ರಸ್ಕಿನಾ ಅವರು ಕನ್ನಡ ರಾಜ್ಯೋತ್ಸವ ರಾಜ್ಯ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಕ್ಯಾನ್ಸರ್ ಗೆದ್ದು ನಿರಾಶ್ರಿತರು, ನಿರ್ಗತಿಕರ ಸೇವೆಯನ್ನು ಮಾಡುತ್ತಿರುವ ಕೋರಿನ್ ಆಂಟೊನಿಯಟ್ ರಸ್ಕಿನಾ ಅವರು ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮಂಗಳೂರಿನ ಕುಲಶೇಖರದ ವೈಟ್ ಡೌಸ್ ಸಂಸ್ಥೆಯ ಸ್ಥಾಪರಾಗಿದ್ದು, ಕ್ಯಾನ್ಸರ್ ಕಾಯಿಲೆ ಗೆದ್ದು ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ದಿಟ್ಟ ಮಹಿಳೆ. ತನ್ನ ನೋವನ್ನು ಮರೆತು ತಾನು ಪ್ರೀತಿಸಿದ ನಿರಾಶ್ರಿತರ ಸೇವೆಗಾಗಿ ಸಾವನ್ನೂ ಜಯಿಸಿ ಬಂದವರಾಗಿದ್ದಾರೆ.ಕಳೆದ ೩೧ ವರ್ಷಗಳಿಂದ ಬೀದಿ ಬದಿಯಲ್ಲಿರುವ ನಿರಾಶ್ರಿತರು, ನಿರ್ಗತಿಕರ, ಮಾನಸಿಕ ಅಸ್ವಸ್ಥರ ಬಾಳಿಗೆ ಬೆಳಕಾಗುತ್ತಿದ್ದಾರೆ.ವಿದ್ಯಾರ್ಥಿ ಜೀವನದಲ್ಲೇ ಆಸ್ಪತ್ರೆಗಳಿಗೆ ಭೇಟಿ ನೀಡಿ […]

HOME STATE

ಅನಿವಾಸಿ ಕನ್ನಡಿಗ ಝಕರಿಯಾ ಜೋಕಟ್ಟೆ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು: ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಡಮಾಡುವ 2025-26ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಸೌದಿ ಅರೇಬಿಯಾ ಜುಬೈಲ್ ನ ಅಲ್ ಮುಝೈನ್ ಕಂಪೆನಿ ಸಂಸ್ಥಾಪಕ ಹಾಗೂ ಮಂಗಳೂರಿನ ಪ್ರತಿಷ್ಟಿತ ಸಂಸ್ಥೆ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಝಕರಿಯಾ ಜೋಕಟ್ಟೆ ಅವರು “ಅನಿವಾಸಿ ಕನ್ನಡಿಗ” ವಿಭಾಗದಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬಜ್ಪೆಗುತ್ತು ಹಾಜಿ ಬಿ. ಶೇಕುಂಞಿ ಹಾಗೂ ಕತೀಜಮ್ಮ ದಂಪತಿ ಪುತ್ರನಾಗಿರುವ ಝಕರಿಯಾ ಜೋಕಟ್ಟೆ 1958 ಮೇ 10 ರಂದು ಜೋಕಟ್ಟೆಯ ತೋಕೂರಿನಲ್ಲಿ ಜನಿಸಿದರು. […]

DAKSHINA KANNADA HOME

ಭಾರತ-ಪಾಕಿಸ್ತಾನ ಯುದ್ಧದಲ್ಲಿ ಸೆಣಸಾಡಿದ್ದ ಯುದ್ಧ ಟ್ಯಾಂಕರ್ ಮಂಗಳೂರಿನಲ್ಲಿ ಸಾರ್ವಜನಿಕ ವೀಕ್ಷಣೆಗೆ

ಮಂಗಳೂರಿ ನಲ್ಲಿ ಸೈನ್ಯಕ್ಕೆ ಸೇರುವವರಿಗೆ ಹಾಗೂ ದೇಶಪ್ರೇಮಿಗಳಿಗೆ ಸ್ಫೂರ್ತಿಯಾಗುವುದ ಕ್ಕಾಗಿ ಶರಲಾಗಿರುವ ಯುದ್ಧಬ್ಯಾಂಕ್‌ ಕೊನೆಗೂ ಸೂಕ್ತ ಗೌರವ ಲಭ್ಯವಾ ಗುವ ಲಕ್ಷಣ ಗೋಚರಿಸಿದೆ. ಈಗಿರುವ ಕದ್ರಿ ಯುದ್ಧ ಸ್ಮಾರಕದ ಪಕ್ಕದಲ್ಲೇ ಪುಟ್ ವಾತ್‌ನಲ್ಲಿ ಸೂಕ್ತ ಬದಲಾವಣೆ ನಿರ್ಮಿಸಿ, ಅದರ ಮೇಲೆ ಟ್ಯಾಂಕ್ ಇರಿಸಿ ನಾಗರಿಕರ ಗಮನ ಸೆಳೆಯುವ ರೀತಿಯಲ್ಲಿ ಯೋಜನೆ ರೂಪಿಸಲಾಗಿದೆ.ಮಂಗಳೂರು ಮಹಾನಗರಪಾಲಿಕೆ ಈ ಟ್ಯಾಂಕ್ ನಿರ್ವಹಣೆಯ ಹೊಣೆ ಹೊತ್ತಿದ್ದು ವೇದಿಕೆ ನಿರ್ಮಾಣದ ಗುತ್ತಿಗೆ ಯನ್ನು ಮುಗೋಡಿ ಕನ್ ಸ್ಟ್ರಕ್ಷನ್ಸ್ ವಹಿಸಿಕೊಂಡಿದೆ.ಉಚಿತವಾಗಿ ಪಾಲಿಕೆಗೆ ಸಿಕ್ಕಿದ ಈ ಬ್ಯಾಂಕ್ […]

DAKSHINA KANNADA HOME

ಕೊಳಲು ನುಡಿಸುತ್ತಲೇ ಸ್ವಿಮ್ಮಿಂಗ್ ಮಾಡಿ ವಿಶ್ವ ದಾಖಲೆ ಮಂಗಳೂರಿನ ರೂಬನ್ ಸಾಧನೆಗೆ ಅಭಿನಂದನೆ

ಈಜುಕೊಳದಲ್ಲಿ ಈಜುತ್ತಲೇ ಕೊಳಲು ನುಡಿಸುವ ಮೂಲಕ ಖ್ಯಾತ ಸಂಗೀತಗಾರ ಮತ್ತು ಬಹುವಾದ ವಾದಕ ರೂಬನ್ ಜೇಸನ್ ಮಚಾದೊ ಅವರು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ್ದಾರೆ.ಮಂಗಳೂರಿನ ಸೈಂಟ್ ಅಲೋಶಿಯನ್ ವಿ.ವಿಯ ಈಜುಕೊಳದಲ್ಲಿ ಬುಧವಾರ ಅವರು ಕೊಳಲು ನುಡಿಸುತ್ತಾ ಬ್ಯಾಕ್ ಸ್ಟೋಕ್ ನಲ್ಲಿ 20 ನಿಮಿಷಗಳ ಕಾಲ, 700 ಮೀ.ಗೂ ಹೆಚ್ಚು ಈಜಿ ದಾಖಲೆ ಬರೆದರು. ಈಜುವುದೇ ಒಂದು ಕಲೆ. ಬ್ಯಾಕ್ ಸ್ಟೋಕ್ ಮತ್ತೊಂದು ಕಲೆ. ಇದರ ಜತೆಗೆ ಕೊಳಲು ನುಡಿಸುತ್ತ ನಿರಾಳವಾಗಿ ಈಜುವುದು ದೊಡ್ಡ […]

DAKSHINA KANNADA HOME

ದಾಯ್ಜಿವರ್ಲ್ಡ್ ಮೀಡಿಯಾ ಹಾಗೂ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಓಂಕಾಲಜಿ ಸಹಯೋಗದಲ್ಲಿ ‘ಕ್ಯಾನ್ಸರ್ ಗೆಲ್ಲೋಣ’ ಜಾಗೃತಿ ಅಭಿಯಾನ

ಮಂಗಳೂರು : ದಾಯ್ಜಿವರ್ಲ್ಡ್ ಮೀಡಿಯಾ ತನ್ನ 25 ವರ್ಷಗಳ ಮಾಧ್ಯಮ ಶ್ರೇಷ್ಠತೆಯ ಆಚರಣೆಯ ಭಾಗವಾಗಿ, ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಓಂಕಾಲಜಿ (MIO) ಸಹಯೋಗದಲ್ಲಿ ‘ಕ್ಯಾನ್ಸರ್ ಗೆಲ್ಲೋಣ’ ಎಂಬ ಒಂದು ವರ್ಷದ ಕ್ಯಾನ್ಸರ್ ಜಾಗೃತಿ ಅಭಿಯಾನವನ್ನು ಶನಿವಾರ ಭವ್ಯವಾಗಿ ಆರಂಭಿಸಿದೆ. ಈ ಉಪಕ್ರಮದ ಮೂಲಕ ಕ್ಯಾನ್ಸರ್ ತಡೆಗಟ್ಟುವಿಕೆ, ಚಿಕಿತ್ಸೆ ಮತ್ತು ಗುಣಮುಖತೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಉದ್ದೇಶಿಸಲಾಗಿದೆ. MIO ಆವರಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, MIOಯ ವಿಕಿರಣ ಓಂಕಾಲಜಿ ವಿಭಾಗದ ನಿರ್ದೇಶಕ […]

DAKSHINA KANNADA

ಟೈ ಎಲೈಟ್ ಗಾಗಿ ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಮತ್ತು ದ ಇಂಡಸ್ ಎಂಟರ್ ಪ್ರೈಸಸ್ (ಟೈ ) ಶೈಕ್ಷಣಿಕ ಒಪ್ಪಂದ

ಮಂಗಳೂರು: ದ ಇಂಡಸ್ ಎಂಟರ್ ಪ್ರೈಸಸ್ (ಟೈ )ಮಂಗಳೂರು ಹಾಗೂ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಜಂಟಿಯಾಗಿ ಟೈ ಎಲೈಟ್ ಕಾರ್ಯಕ್ರಮ ಸಂಯೋಜಿಸಲು ಒಪ್ಪಂದ ಮಾಡಿಕೊಂಡಿವೆ. ಇದರಿಂದ ಶೈಕ್ಷಣಿಕ ಮತ್ತು ಉದ್ಯಮರಂಗದ ನಡುವಿನ ಅಂತರ ನಿವಾರಿಸುವ ಹಾಗೂ ಮಕ್ಕಳಲ್ಲಿ ಉದ್ಯಮಶೀಲತೆಯನ್ನು ಬೆಳೆಸುವ ಗುರಿ ಹೊಂದಲಾಗಿದೆ. ಕೆನರಾ ಇಂಜಿನಿಯರಿಂಗ್ ಕಾಲೇಜು ಸಹಿತ ಕೆನರಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಲ್ಲಿ ಸ್ಟಾರ್ಟ್ ಅಪ್ ಸಂಸ್ಕೃತಿ, ನಾಯಕತ್ವ, ಸಂಶೋಧನಾ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಹತ್ವದ ಮೈಲಿಗಲ್ಲು ಎಂಬಂತೆ ಕಳೆದ ಶುಕ್ರವಾರ ಈ ಒಪ್ಪಂದ ಮಾಡಿಕೊಳ್ಳಲಾಗಿದೆ. […]

DAKSHINA KANNADA HOME

*ಸಂತ ಮದ‌ರ್ ತೆರೇಸಾ ವಿಚಾರ ವೇದಿಕೆ, ಮಂಗಳೂರು ಇದರ ಆಶ್ರಯದಲ್ಲಿ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ*

ಸಂತಾ ಮದರ್ ತೆರೇಸಾ ವಿಚಾರ ವೇದಿಕೆ, ಮಂಗಳೂರು ಇವರ ಆಶ್ರಯದಲ್ಲಿ,ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ 2025 ಹಬ್ಬವನ್ನು ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಪಟಾಕಿ ಸಿಡಿತ ಮತ್ತು ದೀಪ ಬೆಳಗುವ ಮೂಲಕ ಕಾರ್ಯಕ್ರಮದ ಚಾಲನೆ ನೀಡಲಾಯಿತು ಹಬ್ಬಗಳನ್ನು ಒಂದು ಕುಟುಂಬದಂತೆ ಒಟ್ಟಿಗೆ ಆಚರಿಸುವುದರಿಂದ ಸಮಾಜದಲ್ಲಿ ಶಾಂತಿ, ಗೌರವ ಮತ್ತು ಸಹೋದರತ್ವ ಬೆಳೆಯುತ್ತದೆ ಎಂದು ಸಂತಾ ಮದರ್ ತೆರೆಸಾ ವಿಚಾರ ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ಅಭಿಪ್ರಾಯ ವ್ಯಕ್ತಪಡಿಸಿದರು. ಮಾನವತೆಗೆ ಸೇವೆಯ ಮೂಲಕ ಪ್ರೀತಿಯನ್ನು ಹರಡುವ ಸಂತಾ […]

HOME STATE

*ಪ್ರಕಾಶ್ ಪಡುಕೋಣೆ, ಪುಲ್ಲೇಲ ಗೋಪಿಚಂದ್, ಸೈನಾ ನೆಹ್ವಾಲ್, ಪಿ.ವಿ.ಸಿಂಧು ಭಾರತೀಯ ಬ್ಯಾಡ್ಮಿಂಟನ್ ಗೆ ಅಡಿಪಾಯ ಹಾಕಿ ದೇಶಕ್ಕೆ ಕೀರ್ತಿ ತಂದಿದ್ದಾರೆ: ಸಿ.ಎಂ.ಸಿದ್ದರಾಮಯ್ಯ*

ಮಂಗಳೂರು ಅ 27: ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ನ್ಯೂ ಉರ್ವ ಕ್ರೀಡಾಂಗಣದಲ್ಲಿ ನಡೆದ “ಚೀಫ್ ಮಿನಿಸ್ಟರ್ – ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ 2025 ಪಂದ್ಯಾವಳಿ”ಯನ್ನು ಉದ್ಘಾಟಿಸಿ ಮಾತನಾಡಿದರು. ಒಲಂಪಿಕ್ಸ್, ಪ್ಯಾರಾ ಒಲಂಪಿಕ್ಸ್ ಸೇರಿ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದವರಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಎ ಗುಂಪಿನ ಹುದ್ದೆಗಳ ಜೊತೆಗೆ ಇತರೆ ಹುದ್ದೆಗಳನ್ನೂ ಮೀಸಲಿಟ್ಟಿದ್ದೇವೆ. DySP ಸೇರಿ ಇತರೆ […]

HOME STATE

*ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್ ಐ ಆರ್- ಮುಖ್ಯಮಂತ್ರಿ ಸಿದ್ದರಾಮಯ್ಯ*

ಮಂಗಳೂರು, ಅಕ್ಟೋಬರ್ 27: ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್ ಐ ಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ ಮಾತನಾಡಿದ್ದಾರೆ ಎಂದರು. *ಎಸ್ ಐ ಟಿ […]

DAKSHINA KANNADA

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ – ಪ್ರಥಮ ಬಿ.ಎ.ಎಂ.ಎಸ್ ಒರಿಯೆಂಟೇಶನ್ ಕಾರ್ಯಕ್ರಮ

ಸುಳ್ಯ: ಅ.27 ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ 2025-26 ನೇ ಸಾಲಿನ ಪ್ರಥಮ ಬಿಎಎಂಎಸ್ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯಕ್ರಮ ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ನಡೆಯಿತು. ಡಾ. ಕೆ ವಿ ಚಿದಾನಂದ ಅಧ್ಯಕ್ಷರು, ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾಭ್ಯಾಸದ ಪ್ರಾಮುಖ್ಯತೆ, ಆಯುರ್ವೇದ ಜನಪ್ರಿಯತೆ, ವೈದ್ಯಕೀಯ ಕ್ಷೇತ್ರದ ಮಹತ್ವ, ವೈದ್ಯರ ನಿಸ್ವಾರ್ಥ ಮನೋಭಾವದ ಸೇವೆ ಹಾಗೂ ಶಿಸ್ತಿನ ಬಗ್ಗೆ ವಿವರಿಸಿದರು. ಇಂದಿನ ಆಧುನಿಕ ಯುಗದಲ್ಲಿ ಪ್ರಾಚೀನ ಮತ್ತು ನವೀನ ವೈದ್ಯಕೀಯ ಪದ್ಧತಿಗಳನ್ನು ಸಮಯೋಚಿತವಾಗಿ ಬಳಸಿಕೊಂಡು ರೋಗಿಗಳ ಕ್ಷೇಮಕ್ಕಾಗಿ ಇರುವ ವಿಫುಲ […]