Month: October 2025

COMMUNITY NEWS DAKSHINA KANNADA

ಪಟಾಕಿ ಸಿಡಿದು ಗಾಯಗೊಂಡ ಬಾಲಕನ ಚಿಕಿತ್ಸೆಗೆ ಹರಿದು ಬಂತು ನೆರವು; ಪುಟ್ಟ ಬಾಲಕನತ್ತ ಮಿಡಿದ ಹೃದಯಗಳು; ಬಾಲಕ ಗೌತಮ್ ಚಿಕಿತ್ಸೆಗೆ 15.5 ಲಕ್ಷ ರೂ. ಸಂಗ್ರಹ

ವಿಟ್ಲ: ಮಾಣಿಲ ಗ್ರಾಮದ ಬಿರ್ಕಪು ನಿವಾಸಿ ಜಯರಾಮ ಪೂಜಾರಿ ಹಾಗೂ ಯಶೋಧಾ ದಂಪತಿಯ ಪುತ್ರ ಗೌತಮ್ ಚಿಕಿತ್ಸೆಗೆ ಸಹೃದಯಿಗಳು ಮಿಡಿದಿದ್ದು,  15.5 ಲಕ್ಷ ರೂ. ಸಂಗ್ರಹವಾಗಿದೆ.  ನೆರವಾದ ಎಲ್ಲರಿಗೂ ಕುಟುಂಬ ಕೃತಜ್ಞತೆ ಸಲ್ಲಿಸಿದೆ. ದೀಪಾವಳಿಯ ಪೂರ್ವ ತಯಾರಿಯ ಸಮಯದಲ್ಲಿ ಹಳೆ ಪಟಾಕಿ ಸ್ವಚ್ಛಗೊಳಿಸುವ ವೇಳೆ ಆಕಸ್ಮಿಕವಾಗಿ ಪಟಾಕಿ ಸಿಡಿದು ಗೌತಮ್ ನ ಎರಡೂ ಕೈಗಳಿಗೆ ಗಂಭೀರ ಗಾಯಗಳಾಗಿತ್ತು. ಆತನ ಚಿಕಿತ್ಸೆಗೆ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ 12 ಲಕ್ಷ ರೂ. ಅಗತ್ಯವಿದೆ ಎಂದಿದ್ದರು. ಬಡಕುಟುಂಬಕ್ಕೆ ಆ ಮೊತ್ತ […]

DAKSHINA KANNADA

*ಮಂಗಳೂರು ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ದೀಪಾವಳಿ ಪ್ರಯುಕ್ತ ಗೋಪೂಜೆ *

ಮಂಗಳೂರು: ಮಂಗಳೂರು ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೂಪ ಚೇತನ್ ನೇತೃತ್ವದಲ್ಲಿ ದೀಪಾವಳಿ ಪ್ರಯುಕ್ತ ಗೋಪೂಜೆ ಕಾರ್ಯಕ್ರಮ ಉರ್ವದ ಕುದ್ರು ಶ್ರೀ ಕಲ್ಲುರ್ಟಿ ಪಂಜುರ್ಲಿ ದೈವಸ್ಥಾನದ ಆವರಣದಲ್ಲಿ ಇತ್ತೀಚಿಗೆ ನಡೆಯಿತು. ಈ ಸಂದರ್ಭ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ, ಮಾಜಿ ಶಾಸಕ ಜೆ.ಆರ್ ಲೋಬೊ, ರಾಜ್ಯ ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಪ್ಪಿ, ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್, ಮಾಜಿ […]

DAKSHINA KANNADA HOME

ವೆನ್ಲಾಕ್ ನಲ್ಲಿ ಐಸಿಯು ಘಟಕಗಳ ಇಳಿಕೆಯಿಂದಾಗಿ ರೋಗಿಗಳ ಪರದಾಟ:- ಶಾಸಕ ಕಾಮತ್

ಮಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದರಿಂದ ರೋಗಿಗಳಿಗೆ ತೀವ್ರ ಸಮಸ್ಯೆಯಾಗುತ್ತಿದೆ. ಕೂಡಲೇ ಈ ಬಗ್ಗೆ ಆರೋಗ್ಯ ಸಚಿವರು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಾಸಕ ವೇದವ್ಯಾಸ ಕಾಮತ್ ರವರು ಪತ್ರದ ಮೂಲಕ ಆಗ್ರಹಿಸಿದರು. ನಾನು ಶಾಸಕನಾಗಿ ಆಯ್ಕೆಯಾದ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಯಾದ ವೆನ್ಲಾಕ್ ನಲ್ಲಿ ಕೇವಲ 16 ತೀವ್ರ ನಿಗಾ ಘಟಕಗಳಿದ್ದವು. ಆ ನಂತರ ರೋಗಿಗಳಿಗೆ ಅನುಕೂಲವಾಗಲು ಹಂತ ಹಂತವಾಗಿ ಅವುಗಳ ಸಂಖ್ಯೆಯನ್ನು […]

HOME STATE

*ಭಾರತೀಯರನ್ನು ಪರಸ್ಪರ ಎತ್ತಿಕಟ್ಟಿ ಬ್ರಿಟೀಷರು ಭಾರತವನ್ನು ವಶಕ್ಕೆ ಪಡೆದರು: ಸಿ.ಎಂ.ಸಿದ್ದರಾಮಯ್ಯ*

ಬೆಳಗಾವಿ ಅ 25: ವ್ಯಾಪಾರಕ್ಕೆಂದು ಬಂದ ಬ್ರಿಟೀಷರು ಭಾರತೀಯರನ್ನು ಪರಸ್ಪರ ಎತ್ತಿಕಟ್ಟಿ ಭಾರತವನ್ನು ವಶಕ್ಕೆ ಪಡೆದರು. ಈಗಲೂ ಜಾತಿ-ಧರ್ಮದ ಹೆಸರಲ್ಲಿ ಭಾತೀಯರನ್ನು ಎತ್ತಿ ಕಟ್ಟುವವರು ಇದ್ದಾರೆ. ಇವರ ಬಗ್ಗೆ ಎಚ್ಚರವಿರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಜಿಲ್ಲಾಡಳಿತ ಮತ್ತು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ 201ನೇ ವರ್ಷದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. 1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಬ್ರಿಟೀಷರನ್ನು ಕಿತ್ತೂರು ಚನ್ನಮ್ಮ ಸೋಲಿಸಿದರು. ಬ್ರಿಟೀಷರನ್ನು ಸೋಲಿಸಿ ಕಿತ್ತೂರಿನ […]

DAKSHINA KANNADA HOME

*ಎಮ್.ಸಿ.ಸಿ.ಬ್ಯಾಂಕಿನ ಆಡಳಿತ ಕಛೇರಿ ಮಂಗಳೂರಿನಲ್ಲಿ ದೀಪಾವಳಿ ಆಚರಣೆ*

ಮಂಗಳೂರು : ಎಮ್.ಸಿ.ಸಿ.ಬ್ಯಾಂಕಿನ ಆಡಳಿತ ಕಛೇರಿ ಮಂಗಳೂರಿನಲ್ಲಿ ಸಂಭ್ರಮದಿಂದ ದೀಪಾವಳಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಮ್‌ಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ವಹಿಸಿದ್ದರು. ಸಮಾರಂಭದಲ್ಲಿ ಗೌರವಾನ್ವಿತ ಮುಖ್ಯ ಅತಿಥಿಗಳಾದ ಮಂಗಳೂರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಶ್ರೀ ಪ್ರತಾಪ್ ಸಿಂಗ್ ಥೋರಟ್ ಮತ್ತು ಮಂಗಳೂರು ನಗರ ಸಂಚಾರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ನಜ್ಮಾ ಫಾರೂಕ್ ಅವರು ಉಪಸ್ಥಿತರಿದ್ದರು. ಕತ್ತಲೆಯ ಮೇಲೆ ಬೆಳಕಿನ ಗೆಲುವು ಮತ್ತು ಒಳ್ಳೆಯತನದ ವಿಜಯವನ್ನು […]

DAKSHINA KANNADA HOME

ಪಟಾಕಿ ಕೈಯಲ್ಲೇ ಸಿಡಿದು ಎರಡು ಕೈ ಚೂರು 7ನೇ ತರಗತಿ ಗೌತಮ್ ಚಿಕಿತ್ಸಾ ವೆಚ್ಚ ಸಹಾಯಕ್ಕಾಗಿ ಸಹೃದಯರಲ್ಲಿ ಮನವಿ

ಮಾಣಿಲ ಗ್ರಾಮದ ಗುತ್ತಿನಬೈಲು ನಿವಾಸಿ ಜಯರಾಮರವರು ಮರದ ಕೆಲಸ ಮಾಡಿಕೊಂಡು ಜೀವನ ಸಾಗಿಸುತಿದ್ದು, ಇವರ ಮಗ ಗೌತಮ್ ಮಾಣಿಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮುರುವದಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತೀರೋದು, ಗೌತಮ್ ಎಂದಿನಂತೆ ಶಾಲೆ ಮುಗಿಸಿ ಸಂಜೆ ಮನೆಯಲ್ಲಿ ಮನೆಯೊಳಗಿದ್ದ ಹಳೆ ಪಟಾಕಿ ಮತ್ತು ಕಸಗಳನ್ನು ಬಿಸಾಡುವಾಗ ಆಕಸ್ಮಿಕವಾಗಿ ಬೆಂಕಿ ತಗಳಿ ಪಟಾಕಿ ಕೈಯಲ್ಲೇ ಸಿಡಿದು ಎರಡು ಕೈ ಚೂರು ಆಗಿದೆ. ಮಂಗಳೂರಿನ AJ ಹಾಸ್ಪಿಟಲ್ ನ ICU ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. AJ ಆಸ್ಪತ್ರೆಯ […]

DAKSHINA KANNADA HOME

ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್ ; ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ಸವರ ಮೇಲೆ ಪೊಲೀಸರು ಶೂಟೌಟ್ ಮಾಡಿ ಆರೋಪಿಗಳನ್ನು ಬಂದಿಸಿರುವ ಪೊಲೀಸರ ಕ್ರಮವನ್ನು ಶಾಸಕ ಅಶೋಕ್ ರೈ ಅಭಿನಂದಿಸಿದ್ದಾರೆ‌. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಶಾಸಕರು’ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಪೊಲೀಸರು ಕಡಿವಾಣ ಹಾಕುತ್ತಿದ್ದಾರೆ.‌ಸಮಾಜದಲ್ಲಿ ಸಂಘರ್ಷಕ್ಕೆ ಕಾರಣವಾಗುವ ಗೋಸಾಗಾಟ ಪ್ರಕರಣಕ್ಕೆ ಪೊಲೀಸರು ಅಲ್ಲಲ್ಲಿ ಬ್ರೇಕ್ ಹಾಕುತ್ತಿದ್ದಾರೆ‌ ಈ ನಡುವೆ ಇಲಾಖೆಯ ಕಣ್ಣು ತಪ್ಪಿಸಿ ಕೇರಳಕ್ಕೆ ಗೋವುಗಳ ಅಕ್ರಮ ಸಾಗಾಟ ಮಾಡುತ್ತಿದ್ದ ವರ ಮೇಲೆ ಪೊಲೀಸರು ಶೂಟೌಟ್ ಮಾಡಿ ಬಂದಿಸಿರುವುದು ಅಭಿನಂದನಾರ್ಹವಾಗಿದೆ ಮುಂದೆ […]

DAKSHINA KANNADA HOME

ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ ಆಸ್ಪತ್ರೆಗೆ ಭೇಟಿ‌ನೀಡಿದ ಶಾಸಕ ಅಶೋಕ್ ರೈ

ಪುತ್ತೂರು: ಅ. 20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ 2025 ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ ಪತಿಣಾಮ ಕೆಲವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನೇದಿದ್ದು, ಸೋಮವಾರ ರಾತ್ರಿ ಆಸ್ಪತ್ರೆಗೆ ಭೇಟಿ‌ನೀಡಿದ ಶಾಸಕ ಅಶೋಕ್ ರೈ ಅವರ ಅವರ ಆರೋಗ್ಯ ವಿಚಾರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಧ್ಯಾಹ್ನದ ವೇಳೆ ಉಡುಗೋರೆ ವಿತರಣೆ ವೇಳೆ ಜನಸಂದಣಿಯಿಂದ ಸುಮಾರು ಏಳೆಂಟು‌ಮಂದಿ‌ಅಸ್ವಸ್ಥರಾಗಿದ್ದರು.‌ಅಸ್ವಸ್ಥರಾದವನ್ನು ಕೂಡಲೇ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಸ್ವಸ್ಥರಾದವರು […]

COMMUNITY NEWS HOME

ಮೊಗರ್ನಾಡ್ ದೇವ ಮಾತಾ ಚರ್ಚ್ ನಲ್ಲಿ 250ನೇ ಮಹೋತ್ಸವ ಪವಿತ್ರ ಬಲಿ ಪೂಜೆ ಧರ್ಮಗುರುಗಳ, ಧಾರ್ಮಿಕ ಸಹೋದರ ಸಹೋದರಿಯರ ಸಮಾವೇಶ

ವಿಟ್ಲ: ಅ20 : ಬಂಟ್ವಾಳ ತಾಲೂಕಿನ ಮೊಗರ್ನಾಡ್ ದೇವ ಮಾತಾ ಚರ್ಚ್ ನಲ್ಲಿ 250ನೇ ಮಹೋತ್ಸವದ ಪ್ರಯುಕ್ತ ಪವಿತ್ರ ಬಲಿ ಪೂಜೆ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಿತು. ಮೊಗರ್ನಾಡ್‌ನ ದೇವ ಮಾತಾ ಚರ್ಚ್ ತನ್ನ 250ನೇ ಮಹೋತ್ಸವ (ಜ್ಯೂಬಿಲಿ) ಸಂತಸದ ಸಂದರ್ಭದಲ್ಲಿ ಧರ್ಮಗುರುಗಳು, ಧಾರ್ಮಿಕ ಸಹೋದರರು ಮತ್ತು ಸಹೋದರಿಯರು, ಮದುವೆಯಾಗಿ ಚರ್ಚ್‌ನಿಂದ ಹೊರಹೋಗಿರುವ ಮಹಿಳೆಯರು ಹಾಗೂ ಚರ್ಚ್‌ನಿಂದ ಹೊರಗೆ ವಾಸಿಸುತ್ತಿರುವ ಕುಟುಂಬಗಳನ್ನು ಗೌರವಿಸುವ ವಿಶೇಷ ಸಮಾರಂಭವನ್ನು ಆಯೋಜಿಸಿತ್ತು. ಫಾ. ಮ್ಯಾಕ್ಸಿಮ್ ಡಿಸಿಲ್ವಾ ಮತ್ತು ಇತರ ಧರ್ಮಗುರುಗಳು ಪವಿತ್ರ […]

DAKSHINA KANNADA HOME

ದೀಪಾವಳಿ ಸಂಭ್ರಮದಲ್ಲಿ ಜನಮನ ಗೆದ್ದ ‘ಅಶೋಕ ಜನಮನ’ – ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಂಸೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಉದ್ಯಮಿ ಅಶೋಕ್‌ ಕುಮಾ‌ರ್ ರೈ ನೇತೃತ್ವದ ‘ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್’ ವತಿಯಿಂದ ದೀಪಾವಳಿ ಸಂಭ್ರಮದ ಅಂಗವಾಗಿ ಅಕ್ಟೋಬರ್ 20ರಂದು ಸೋಮವಾರ ನಡೆದ ‘ಅಶೋಕ ಜನಮನ’ ವಸ್ತ್ರ ವಿತರಣಾ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಉದ್ಘಾಟಿಸಿದರು .ಅಶೋಕ್ ರೈಯವರು ಮಾಡುವ ಕೆಲಸ ಎಲ್ಲರಿಗೂ ಮಾದರಿ : “ಅನ್ನಭಾಗ್ಯ ಯೋಜನೆ ಮಾಡಿದ್ದು ಯಾರೂ ಹಸಿವಿನಿಂದ ಮಲಗಬಾರದು ಎಂಬ ಉದ್ದೇಶದಿಂದ. ದುಡ್ಡಿಲ್ಲ ಎನ್ನುತ್ತಿದ್ದರೂ ಸರ್ಕಾರ ಅಭಿವೃದ್ಧಿ ಕಾಮಗಾರಿ ನಿಲ್ಲಿಸಿಲ್ಲ. ಅಶೋಕ್‌ ರೈಯವರ ಕಾರ್ಯನಿಷ್ಠೆ, […]