Month: October 2025

DAKSHINA KANNADA HOME

ಒಂದೂವರೆ ವರ್ಷದ ಮಗುವಿನ ಗಂಟಲಲ್ಲಿ ಸಿಲುಕಿದ್ದಕಾಡಿಗೆ ಕರಡಿಗೆ

ಪುತ್ತೂರು, ಅ. 14: ಮಗುವಿನ ಗಂಟಲಲ್ಲಿದ್ದ ಕಾಡಿಗೆ ಡಬ್ಬವನ್ನು ಇಎನ್‌ಟಿ ತಜ್ಞ ಡಾ। ರಾಮಮೋಹನ್ ಅವರು ಶಸ್ತ್ರಚಿಕಿತ್ಸೆಯಿಲ್ಲದೆ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ನೆಹರುನಗರ ನಿವಾಸಿಯಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ಮಂಜು ಹಾಗೂ ವಿಶಾಲಾಕ್ಷಿ ದಂಪತಿಯ ಒಂದೂವರೆ ವರ್ಷದ ಗಂಡು ಮಗು ಆರ್ಯನ್ ವರ್ಷದ ಹಿಂದೆ ಜುಲೈಯಲ್ಲಿ ಸಣ್ಣದಾದ ಕಾಡಿಗೆ ಡಬ್ಬವನ್ನು ನುಂಗಿತ್ತು. ಬೆಂಗಳೂರು ಸಹಿತ ಹಲವು ಕಡೆ ವೈದ್ಯರಿಗೆ ತೋರಿಸಿದರೂ ಮಗುವಿನ ಸಮಸ್ಯೆಗೆ ಯಾವುದೇ ಪರಿಹಾರ ದೊರಕಿರಲಿಲ್ಲ. ಪುತ್ತೂರಿನ ನೆಹರು ನಗರದಲ್ಲಿರುವ ತನ್ನ ಅಕ್ಕನ ಮನೆಗೆ ಬಂದಿದ್ದ […]

DAKSHINA KANNADA HOME

ಬಂಟ್ವಾಳ ತಾಲೂಕು ಕೃಷಿ ಇಲಾಖೆಯ ವತಿಯಿಂದ ನೈಸರ್ಗಿಕ ಕೃಷಿ ಅಭಿಯಾನ ತರಬೇತಿ

ವಿಟ್ಲ : ಬಂಟ್ವಾಳ ತಾಲೂಕು ಕೃಷಿ ಇಲಾಖೆಯ ವತಿಯಿಂದ ನೈಸರ್ಗಿಕ ಕೃಷಿ ಅಭಿಯಾನ ತರಬೇತಿ ಕಾರ್ಯಕ್ರಮವು ಅಳಿಕೆ ಗ್ರಾಮ ಪಂಚಾಯಿತಿನ ಸಭಾಭವನದಲ್ಲಿ ನಡೆಯಿತು. ಬಂಟ್ವಾಳ ತಾಲೂಕಿನ 5 ಗುಚ್ಛ ಗ್ರಾಮಗಳಲ್ಲಿ ಒಂದಾದ ಅಳಿಕೆ ಗುಚ್ಛದ ತರಬೇತಿ ಕಾರ್ಯಕ್ರಮದಲ್ಲಿ ಅಳಿಕೆ ಗ್ರಾಮ ಪಂಚಾಯತಿನ ಸದಸ್ಯ ಸದಾಶಿವ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಿಟ್ಲ ಕೃಷಿ ಇಲಾಖೆಯ ಕೃಷಿ ಅಧಿಕಾರಿ ನಂದನ್ ಶೆಣೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ,ಇಲಾಖಾ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದಂತಹ ಸುನಿತಾ ಉದಯ ಶೆಟ್ಟಿ […]

HOME STATE

*ಜಾತಿ ತಾರತಮ್ಯದ ಸಮಾಜದಲ್ಲಿ ಚಲನೆ ಇಲ್ಲ. ಚಲನೆ ಸಿಗಬೇಕಾದರೆ ವೈಜ್ಞಾನಿಕ ಮನೋಭಾವ ಮುಖ್ಯ: ಸಿ.ಎಂ ಕರೆ*

ಬೆಂಗಳೂರು ಅ 14: ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ರಾಮಾಯಣ ಬರಡದ ವಾಲ್ಮೀಕಿ ಬೇಡರ ಜಾತಿಯವರಾದರೆ, ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ಹೀಗಾಗಿ ವಿದ್ಯೆ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶಗಳು ಬೇಕು ಅಷ್ಟೆ. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಂಡರೆ ನಿಮ್ಮ‌ ಹಾಗೂ ಸಮಾಜದ ಪ್ರಗತಿ […]

DAKSHINA KANNADA

*ಶ್ರೀ ಬಾರ್ಕೂರು ಮಹಾಸಂಸ್ಥಾನ ಭಾರ್ಗವ ಬೀಡು* *ಬಂಟ ಸಂಸ್ಜೃತಿ ಪರಂಪರೆ ಅನಾವರಣ*

ಮಂಗಳೂರು: ಶ್ರೀ ಬಾರ್ಕೂರು ಮಹಾಸಂಸ್ಥಾನ ಭಾರ್ಗವ ಬೀಡು ಶ್ರೀ ಸಂಸ್ಥಾನದ ದಶಮ ಸಂಭ್ರಮದ ಸಂಕಲ್ಪ “ಬಂಟ ಸಂಸ್ಜೃತಿ ಪರಂಪರೆ ಅನಾವರಣ” ದಕ್ಷಿಣ ಕನ್ನಡ ಜಿಲ್ಲಾ ಮಹಾ ಮಂಡಲದ ಪದಗ್ರಹಣ ಸಮಾರಂಭ ಅಕ್ಟೋಬರ್ 19 ರಂದು ಭಾನುವಾರ ಸಂಜೆ 3 ಗಂಟೆಗೆ ಅಡ್ಯಾರ್ ಗಾರ್ಡನ್ ನಲ್ಲಿರುವ ವಿ.ಕೆ. ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಬಂಟ್ಸ್ ಹಾಸ್ಟೇಲ್ ನಲ್ಲಿರುವ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಬಿಡುಗಡೆ ಗೊಂಡಿತು. ಶ್ರೀ ಬಾರ್ಕೂರು ಮಹಾಸಂಸ್ಥಾನ ಟ್ರಸ್ಟ್ ನ ಕಾರ್ಯಾಧ್ಯಕ್ಷರಾದ […]

HOME STATE

*ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧ :ಪರಿಶೀಲನೆಗೆ ಸರ್ಕಾರದ ಮುಖ್ಯಕಾರ್ಯ ದರ್ಶಿಗಳಿಗೆ ಸೂಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ*

ಬಾಗಲಕೋಟೆ, ಅಕ್ಟೋಬರ್ 13: ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡುತ್ತಾ, ಅವರ ಆರೋಗ್ ಸುಧಾರಣೆ ಯಾಗುತ್ತಿದ್ದು, ಇನ್ನೆರಡು ದಿನದಲ್ಲಿ ಆಸ್ಪತ್ರೆಯಿಂದ ಮನೆಗೆ ತೆರಳಿಲಿದ್ದಾರೆ ಎಂದರು. ಸಚಿವ ಪ್ರಿಯಾಂಕ ಖರ್ಗೆಯವರು ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ […]

DAKSHINA KANNADA HOME

ಸುಬ್ರಹ್ಮಣ್ಯ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಶಾಸಕರ ಶಾಸಕ ಅಶೋಕ್ ರೈ ಸೂಚನೆ:

ಪುತ್ತೂರು: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಕಳೆದ 10 ವರ್ಷಗಳಿಂದ ಬೀದಿ ವ್ಯಾಪಾರ ಮಾಡುತ್ತಿದ್ದ ನಮ್ಮನ್ನು ಕಳೆದ ಒಂದು ವರ್ಷದ ಹಿಂದೆ ವ್ಯಾಪಾರ ಮಾಡದಂತೆ ತಡೆಯಲಾಗಿದ್ದು ಮರಳಿ ಅವಕಾಶ ಮಾಡಿಕೊಡುವಂತೆ ವ್ಯಾಪಾರಿಗಳು ಶಾಸಕ ಅಶೋಕ್ ರೈ ಗೆ ಮನವಿ ಮಾಡಿದ್ದಾರೆ.ಕಳೆದ 10 ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದ ನಮ್ಮನ್ನು ಏಕಾಏಕಿ ಎಬ್ಬಿಸಿದ್ದಾರೆಇದರಿಂದ ನಮ್ಮ ಜೀವನಕ್ಕೆ ತೊಂದರೆಯಾಗಿದೆ.‌ವಿವಿಧ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಶಾಸಕರಲ್ಲಿ ಅವಲತ್ತುಕೊಂಡರು. ಒಂದು ತಿಂಗಳೊಳಗೆ ಅವಕಾಶ ಕೊಡಿ ಶಾಸಕರ ಸೂಚನೆ: ಈ ಬಗ್ಗೆ ದೇವಸ್ಥಾನದ […]

HOME STATE

*ಪಂಚಾಯ್ತಿ ಹಬ್ಬಕ್ಕೆ ಸಜ್ಜು * ವರ್ಷಾರಂಭದಲ್ಲಿ ಲೋಕಲ್ ಫೈಟ್‌ ಗೆ ಅಣಿಯಾಗುತ್ತಿರುವ ಸರಕಾರ ಗ್ರಾಮ ಪಂಚಾಯಿತಿ ಎಲೆಕ್ಷನ್ ಮೂಲಕ ಸಾಲುಸಾಲು ಚುನಾವಣೆ ನಿರೀಕ್ಷೆ.

ಬೆಂಗಳೂರು : ಜನಪ್ರತಿನಿಧಿಗಳೇ ಇಲ್ಲದೆ ಒಂದು ಅವಧಿ ಪೂರೈಸು ತ್ತಿರುವ ರಾಜ್ಯದ ಬಹುತೇಕ ಸ್ಥಳೀಯ ಸಂಸ್ಥೆಗಳಿಗೆ ಮುಂದಿನ ವರ್ಷಾರಂಭದ ಬಳಿಕ ಚುನಾವಣೆ ಯೋಗ ಕೂಡಿಬರುವ ಭರವಸೆ ಮೂಡಿದೆ. ಮುಂದಿನ ವರ್ಷ ಸ್ಥಳೀಯ ಚುನಾವಣೆ ಹಬ್ಬದ ನಿರೀಕ್ಷೆಯಲ್ಲಿ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ತಯಾರಿ ಶುರು ವಾಗಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳು, 185 ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳಿಗೆ ಸರಣಿಯಾಗಿ ಚುನಾವಣೆ ಪರ್ವ ಆರಂಭವಾಗುವ ಸಾಧ್ಯತೆಗಳು ದಟ್ಟವಾಗಿವೆ. ಯಾವಾಗ ಚುನಾವಣೆ? 1). 8 ಡಿಸೆಂಬರ್ ಅಂತ್ಯ […]

HOME

ರಾತ್ರಿ ಮಲಗಿದ್ದ ಯುವತಿ ಸೌಮ್ಯ ಕ್ರಾಸ್ತಾ ನಿದ್ದೆಯಲ್ಲಿ ನಿಧನ

ಕಾಸರಗೋಡು: ನಿದ್ರಿಸಿದ್ದ ಯುವತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಉಳಿಯತ್ತಡ್ಕ ಬಳಿಯ ಗುವೆತ್ತಡ್ಕ ಜಿ.ಕೆ.ನಗರದ ವಿನ್ಸೆಂಟ್ ಕ್ರಾಸ್ತ ಎಂಬವರ ಪುತ್ರಿ ಸೌಮ್ಯ ಕ್ರಾಸ್ತ (25) ಮೃತ ಯುವತಿ. ಈಕೆ ನಿನ್ನೆ ರಾತ್ರಿ ಊಟ ಮಾಡಿ ನಿದ್ರಿಸಿದ್ದರು. ಇಂದು ಬೆಳಿಗ್ಗೆ ಏಳಲಿಲ್ಲವೆನ್ನಲಾಗಿದೆ. ಇದರಿಂದ ಮನೆಯವರು ಎಬ್ಬಿಸಲೆತ್ನಿಸಿದಾಗ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡು ಬಂದಿದ್ದು, ಕೂಡಲೇ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ತಲುಪಿಸಿದ್ದರು. ಆದರೆ ಅಷ್ಟರೊಳಗೆ ಯುವತಿ ಮೃತಪಟ್ಟಿರುವುದಾಗಿ ವೈದ್ಯರು ಸಂಬಂಧಿಕರಲ್ಲಿ ತಿಳಿಸಿದ್ದಾರೆ. ಬಳಿಕ ಮೃತದೇಹವನ್ನು ಜನರಲ್ ಆಸ್ಪತ್ರೆ ಶವಾಗಾರಕ್ಕೆ ತಲುಪಿಸಲಾಯಿತು. […]

DAKSHINA KANNADA

ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಫ್ರೆಶರ್ಸ್ ಡೇ, ಬ್ರಾಂಚ್ ಎಂಟ್ರಿ ವಿದ್ಯಾರ್ಥಿ ಕೌನ್ಸಿಲ್ ಉದ್ಘಾಟನೆ

ಮಂಗಳೂರು: ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಫ್ರೆಶರ್ಸ್ ಡೇ, ಬ್ರಾಂಚ್ ಎಂಟ್ರಿ ವಿದ್ಯಾರ್ಥಿ ಕೌನ್ಸಿಲ್ ಉದ್ಘಾಟನೆ ಗುರುವಾರ ಡಾ. ಪಿ. ದಯಾನಂದ ಪೈ- ಸತೀಶ್ ಪೈ ಅಡಿಟೋರಿಯಂನಲ್ಲಿ ನಡೆಯಿತು. ಕಾಲೇಜಿನ ಸಂಚಾಲಕ , ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಗೌರವ ಕಾರ್ಯದರ್ಶಿ ಎಂ. ರಂಗನಾಥ ಭಟ್ ಉದ್ಘಾಟನೆ ನೆರವೇರಿಸಿ ಯುವ ಸಮೂಹ ಉತ್ಸಾಹೀ, ಕ್ರಿಯಾಶೀಲ ಕಲಿಕೆಯ ಜತೆಗೆ ನಾಯಕತ್ವ ಗುಣಗಳೊಂದಿಗೆ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಬೆಳೆಯಬೇಕು ಎಂದರು.ಶುಭ ಹಾರೈಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ಡೀನ್ ಡಾ. ಪ್ರಿಯಾ ವಿ. ಫ್ರ್ಯಾಂಕ್ ಪದಾಧಿಕಾರಿಗಳಿಗೆ […]

DAKSHINA KANNADA HOME

ಬಡವರ ಸಂಕಷಷ್ಡದ ಬಗ್ಗೆ ನನಗೆ ಅರವಿದೆ: ಅಶೋಕ್ ರೈ

ಪುತ್ತೂರು: ನಾನು ಬಡತನದಲ್ಲೇ ಮೇಲೆ ಬಂದಿದ್ದೇನೆ, ಬಡತನದ ಸಂಕಷ್ಟ ಅನುಭವಿಸಿದ್ದೇನೆ ಇದಕ್ಕಾಗಿ ನಾನು ಸಂಪಾದಿಸಿದ ಹಣದಿಂದ ಒಂದಷ್ಟು ಬಡವರಿಗೆ ದಾನ ಮಾಡಲು ತೀರ್ಮಾನಿಸಿದ್ದು ಈ ಕಾರಣಕ್ಕೆ 13 ವರ್ಷದಿಂದ ದೀಪಾವಳಿಗೆ ವಸ್ತ್ರ ವಿತರಣೆ ಕಾರ್ಯಕ್ರಮ ಮಾಡುತ್ತಿದ್ದೇನೆ ಬಡವರ ಪ್ರೀತಿಯೊಂದೇ ಇದರ ಉದ್ದೇಶವಾಗಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅ. 20 ರಂದು ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ ಕಾರ್ಯಕ್ರಮಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ‌ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.ಇದು ನನ್ನ ಕಾರ್ಯಕ್ರಮವಲ್ಲ ಕ್ಷೇತ್ರದ […]