Month: November 2025

DAKSHINA KANNADA HOME LATEST NEWS

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

ಮಂಗಳೂರು, ನ.9;ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-28 ಸಾಲಿನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ ಹಾಗೂ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ ಮತ್ತು ಕೋಶಾಧಿಕಾರಿಯಾಗಿ ವಿಜಯ ಕೋಟ್ಯಾನ್ ಪಡು ಅವಿರೋಧ ವಾಗಿ ಆಯ್ಕೆ ಯಾಗಿದ್ದಾರೆ. ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಸಭಾಂಗ ಣದಲ್ಲಿ ಭಾನುವಾರ ನಡೆದ ಚುನಾವ ಣೆಯಲ್ಲಿ ಒಟ್ಟು 352 ,ಮಂದಿ ಮತದಾರರಲ್ಲಿ 331 ಮಂದಿ ಮತಚಲಾಯಿಸಿದ್ದರು‌. ಪುಷ್ಪರಾಜ್ 187 ಮತಗಳನ್ನು ಗಳಿಸಿದರೆ ಅವರ ಪ್ರತಿಸ್ಪರ್ಧಿ ಶ್ರವಣ್ ಕುಮಾರ್ […]

DAKSHINA KANNADA HOME LATEST NEWS

*ರಾಜ್ಯೋತ್ಸವ ಪ್ರಶಸ್ತಿಯಲ್ಲಿ ದೊರೆತ ರೂ. 5 ಲಕ್ಷವನ್ನು 5 ಮಾನವೀಯ ಸೇವಾ ಸಂಸ್ಥೆಗಳಿಗೆ ಘೋಷಿಸಿದ ಝಕರಿಯ ಜೋಕಟ್ಟೆ*

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯಲ್ಲಿ ದೊರೆತ ರೂ. 5 ಲಕ್ಷವನ್ನು ಮಾನವೀಯ ಸೇವೆಗೈಯ್ಯುವ 5 ಸಂಸ್ಥೆಗಳಿಗೆ ನೀಡುವುದಾಗಿ ಪ್ರಶಸ್ತಿ ಪುರಸ್ಕೃತ ಅನಿವಾಸಿ ಉದ್ಯಮಿ ಝಕರಿಯ ಜೋಕಟ್ಟೆ ಘೋಷಿಸಿದ್ದಾರೆ. ಮಂಗಳೂರಿನ ಸಾನಿಧ್ಯ ಮಾನಸಿಕ ವಿಕಲಚೇತನರ ವಸತಿ ಶಾಲೆ, ಸ್ನೇಹದೀಪ ಎಚ್ಐವಿ ಪೀಡಿತ ಮಕ್ಕಳ ಆಶ್ರಮ ಬೋಂದೆಲ್, ಸ್ನೇಹಾಲಯ ವ್ಯಸನ ವಿಮೋಚನಾ ಕೇಂದ್ರ ತಲಪಾಡಿ, ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ಲೇಡಿಗೋಶನ್ ಕಾರುಣ್ಯ ಯೋಜನೆ, ಕಾವಳಕಟ್ಟೆ ಹಿದಾಯ ಕಾಲನಿಯ ವಿಕಲಚೇತನ ಮಕ್ಕಳ ಕೇಂದ್ರಕ್ಕೆ ತಲಾ ರೂ. ಒಂದು ಲಕ್ಷ ನೀಡುವುದಾಗಿ ತಿಳಿಸಿದ್ದಾರೆ. […]

DAKSHINA KANNADA HOME

ಆನ್‌ಲೈನ್‌ ಟ್ರೇಡಿಂಗ್‌ನಲ್ಲಿ ಅಧಿಕ ಲಾಭಾಂಶದ ಆಮಿಷ: 32.06 ಲಕ್ಷರೂ. ವಂಚನೆ; ದೂರು

ಮಂಗಳೂರು, ನ. 3: ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹೆಚ್ಚು ಲಾಭಾಂಶ ದೊರೆಯುವುದಾಗಿ ನಂಬಿಸಿ 32.06 ಲಕ್ಷ ರೂ. ವಂಚಿಸಿರುವ ಬಗ್ಗೆ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಸೆ. 9ರಂದು ಫೇಸ್‌ಬುಕ್ ನೋಡುತ್ತಿರುವ ಸಂದರ್ಭದಲ್ಲಿ ಕಾವ್ಯಾ ಶೆಟ್ಟಿ ಹೆಸರಿನಲ್ಲಿ ಸ್ನೇಹದ ವಿನಂತಿ ಬಂದಿತ್ತು. ಅದಕ್ಕೆ ಒಪ್ಪಿಗೆ ನೀಡಿ ಅವರೊಂದಿಗೆ, ಸಂದೇಶಗಳ ವಿನಿಮಯ ನಡೆಸಿದ್ದರು ಆಕೆ ತಾನು ಮುಂಬಯಿನಲ್ಲಿ ಟ್ರೇಡಿಂಗ್ ಕೆಲಸ ಮಾಡಿಕೊಂಡಿದ್ದು.ಅದರಿಂದ ಹೆಚ್ಚಿನ ಲಾಭ ಬರುತ್ತದೆ ಎಂದು ನಂಬಿಸಿದ್ದಳು. ಇದರಿಂದ ಆಸಕ್ತನಾಗಿ ಟ್ರೇಡಿಂಗ್‌ನಲ್ಲಿ ಕೆಲಸ ಮಾಡಲು ಒಪ್ಪಿದ್ದಾರೆ. […]

COMMUNITY NEWS DAKSHINA KANNADA

ನ. 5: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರ ಪಟ್ಟಾಭಿಷೇಕ, ಅಧಿಕಾರ ಸ್ವೀಕಾರ

ಬೆಳ್ತಂಗಡಿ, ನ. 2: ಧರ್ಮಪ್ರಾಂತ್ಯದ ಧ’ ರ್ವಾಧ್ಯಕ್ಷರಾಗಿ ನಿಯೋಜಿತರಾದ ಅತೀ ವಂ। ಎರಡನೇ ಜೇಮ್ಸ್ ಪಟೇರಿಲ್ ಅವರ ಪಟ್ಟಾಭಿಷೇಕ ಹಾಗೂ ಅಧಿಕಾರ ಸ್ವೀಕಾರ ಸಮಾರಂಭ ನ. 5 ರಂದು ಸಂತ ಲಾರೆನ್ಸ್ ಕ್ಯಾಥೆಡ್ರಲ್‌ನಲ್ಲಿ ನಡೆಯಲಿದೆ. ಬೆಳ್ತಂಗಡಿ ಧರ್ಮಪ್ರಾಂತ್ಯದ ಮಾಧ್ಯಮ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿಫಾ| ಸುನೀಲ್ ಐಸಾಕ್ ಜ್ಞಾನ ನಿಲಯದಲ್ಲಿ ಸೋಮವಾರ ಮಾಧ್ಯಮಗಳಿಗೆ ಈ ವಿಷಯವನ್ನು ತಿಳಿಸಿ, ಸಿರೋ ಮಲಬಾರ್‌ಕಥೋಲಿಕರಿಗಾಗಿ ಆರಂಭಗೊಂಡ ಈ ಧರ್ಮಪ್ರಾಂತ್ಯದ ಮೊದಲ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರು ಪ್ರಸ್ತುತ ನಿವೃತ್ತಗೊಳ್ಳುತ್ತಿದ್ದಾರೆ. ಅವರ ಸ್ಥಾನಕ್ಕೆ ಬೆಳ್ತಂಗಡಿ […]

DAKSHINA KANNADA

*ನವೆಂಬರ್ 7 ಮತ್ತು 8ರಂದು ನಿಟ್ಟೆ ವಿಶ್ವವಿದ್ಯಾನಿಲಯದ 15ನೇ ವಾರ್ಷಿಕ ಘಟಿಕೋತ್ಸವ *

ಮಂಗಳೂರು. ನ 03: ನಿಟ್ಟೆ ವಿಶ್ವವಿದ್ಯಾನಿಲಯವು ತನ್ನ ಮಂಗಳೂರು ಹಾಗೂ ನಿಟ್ಟೆ ಕ್ಯಾಂಪಸ್‌ಗಳಲ್ಲಿ 15ನೇ ಘಟಿಕೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಎರಡೂ ಕಾರ್ಯಕ್ರಮಗಳಲ್ಲಿ ಈ ವರ್ಷ ವಿವಿಧ ನಿಕಾಯಗಳಿಂದ ಒಟ್ಟಾರೆಯಾಗಿ 1.999 ಪದವೀಧದರು (1353 + 646) ಪದವಿ ಸ್ವೀಕರಿಸುತ್ತಿದ್ದಾರೆ. ಮೊದಲ ಘಟಿಕೋತ್ಸವ ಕಾರ್ಯಕ್ರಮವು ನವೆಂಬರ್ 7 ರ ಶುಕ್ರವಾರ ಬೆಳಿಗ್ಗೆ 10:30 ರಂದು ಮಂಗಳೂರಿನ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ವೈದ್ಯಕೀಯ ಕಾಲೇಜಿನ (ಕ್ಷೇಮ), ನಿಟ್ಟೆ ಮೈದಾನದಲ್ಲಿ ನಡೆಯಲಿದೆ. ಎಂದು ಪ್ರೊ. ಡಾ. ಎಂ. ಎಸ್. ಮೂಡಿತ್ತಾಯ […]

COMMUNITY NEWS HOME LATEST NEWS

ಆತ್ಮಗಳ ಸದ್ಗತಿಗೆ ಕ್ರೈಸ್ತರಿಂದ ವಿಶೇಷ ಪ್ರಾರ್ಥನೆ

ಮಂಗಳೂರು, ನ. 2: ಎಲ್ಲ ಧರ್ಮಗಳಲ್ಲೂ ಕುಟುಂಬಸ್ಥರನ್ನು ಸ್ಮರಿಸುವ ಸಂಪ್ರದಾಯವಿದೆ. ಅಂತೆಯೇ ಕೆಥೋಲಿಕರು ಕೂಡ ವಿಶಿಷ್ಟವಾಗಿ ನೆನಪಿಸಿಕೊಳ್ಳುತ್ತಾರೆ. ನ. 2ರಂದು ಕೆಥೋಲಿಕ್ ಧರ್ಮಸಭೆಯಲ್ಲಿ ಮೃತಪಟ್ಟಿರುವ ಭಕ್ತ ವಿಶ್ವಾಸಿಗಳನ್ನು ಭಕ್ತಿ ಪೂರ್ವಕವಾಗಿ ಸ್ಮರಿಸಲಾಯಿತು.ಆಲ್ ಸೋಲ್ಸ್ ಡೇಯನ್ನು ದ.ಕ. ಹಾಗೂ ಉಡುಪಿ ಜಿಲ್ಲೆಯ ಎಲ್ಲ ಚರ್ಚ್‌ಗಳಲ್ಲಿ ವಿಶೇಷ ಬಲಿಪೂಜೆ ಹಾಗೂ ಸಮಾಧಿಯಲ್ಲಿ ಪ್ರಾರ್ಥನೆ ನಡೆಸುವ ಮೂಲಕ ಆಚರಿಸಲಾಯಿತು. ಮೃತಪಟ್ಟ ಸದಸ್ಯರ ನೆಚ್ಚಿನ ತಿನಿಸುಗಳನ್ನು ಮನೆಯಲ್ಲಿ ತಯಾರಿಸಿ ಕೆಲವು ಕುಟುಂಬದವರು ಮೃತರನ್ನು ಸ್ಥರಿಸಿದರು.ನಮ್ಮೊಂದಿಗಿದ್ದು ನಮ್ಮನ್ನು ಅಗಲಿದವರು ಅನೇಕರು ದೇವರ ವಾಕ್ಯದಂತೆ ನಡೆಯದೆ […]

COMMUNITY NEWS DAKSHINA KANNADA HOME

ನಾಗರಿಕ ಸೇವೆಗಳ ಕುರಿತ 2ನೇ ಹಂತದ ತರಬೇತಿ ಸೆಮಿನಾರ್ ” “ಪ್ರೇರಣ್ – ಕ್ಯಾಚ್ ದೆಮ್ ಯಂಗ್”ಯಶಸ್ವಿ

ಮಂಗಳೂರು. ನ 02: ಕ್ಯಾಥೋಲಿಕ್ ಸಭಾ ಎಪಿಸ್ಕೊಪಲ್ ಸಿಟಿ ವಾರಾಡೊ – ಮತ್ತು ಪ್ರೇರಣ್ ಡಿಯೋಸೆಸನ್ ಸಮಿತಿಯು, C.O.D.P ಮತ್ತು ಸೇಂಟ್ ಅಲೋಶಿಯಸ್ ಸಿವಿಲ್ ಸರ್ವೀಸಸ್ ಕಾಲೇಜು ವಿಭಾಗದ ಸಹಯೋಗದೊಂದಿಗೆ 2 ನೇ ಹಂತದ ನಾಗರಿಕ ಸೇವೆಗಳ ಸೆಮಿನಾರ್ “ಪ್ರೇರಣ್ ಕ್ಯಾಚ್ ದೆಮ್ ಯಂಗ್” ಅನ್ನು ಕ್ಯಾಥೋಲಿಕ್ ಸಮುದಾಯದ ಯುವಕರಿಗಾಗಿ ಆಯೋಜಿಸಲಾಗಿತ್ತು. ಮಂಗಳೂರಿನ ಎಂ.ಸಿ.ಸಿ ಬ್ಯಾಂಕ್ ಈ ವಿಚಾರ ಸಂಕಿರಣವನ್ನು ಪ್ರಾಯೋಜಿಸಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ನಗರದ ಬಜ್ಜೋಡಿಯಲ್ಲಿ ಇರುವ ಶಾಂತಿ ಕಿರಣ್ ಹಾಲ್ ನಲ್ಲಿ ಮಂಗಳೂರು ಡಿಯೋಸೆಸನ್ […]

DAKSHINA KANNADA HOME LATEST NEWS

*ವೆನ್ಲಾಕ್, ಲೇಡಿಗೋಷನ್ ಆಸ್ಪತ್ರೆ ಉನ್ನತೀರಣ* *ಎಂಫ್ರೆಂಡ್ಸ್‌ನ ಕಾರುಣ್ಯ ಯೋಜನೆ ಉದ್ಘಾಟಿಸಿದ ದಿನೇಶ್ ಗುಂಡೂರಾವ್ ಭರವಸೆ*

ಮಂಗಳೂರು ನ. 02: ಕ್ಯಾಥ್‌ಲ್ಯಾಬ್, ಡೇ ಕೇರ್ ಕಿಮೋಥೆರಪಿ ಸಹಿತ ಅತ್ಯಾಧುನಿಕ ಚಿಕಿತ್ಸೆ ನೀಡುತ್ತಿರುವ ವೆನ್ಲಾಕ್ ಮತ್ತು ಪ್ರತಿದಿನ 18-20 ಹೆರಿಗೆ ನಡೆಯುತ್ತಿರುವ ಲೇಡಿಗೋಷನ್ ಆಸ್ಪತ್ರೆಗಳು ರಾಜ್ಯಕ್ಕೆ ಮಾದರಿಯಾಗಿದ್ದು, ಇವೆರಡನ್ನೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರ ಜೊತೆಗಾರರಿಗೆ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಾತ್ರಿ ಊಟ ವಿತರಿಸುವ ವಿಸ್ತರಿತ ಕಾರುಣ್ಯ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. […]

DAKSHINA KANNADA HOME LATEST NEWS

*ಶ್ರೀ ಜೋಸಫ್ ಮಥಾಯಸ್ಗೆ ಸಮಾಜ ಸೇವೆಗೆ ಜಿಲ್ಲಾ ಮಟ್ಟದ ಪ್ರಶಸ್ತಿ*

ಮಂಗಳೂರು: ಶ್ರೀ ಜೋಸಫ್ ಮಥಾಯಸ್ ಸಮಾಜ ಸೇವೆ ಮತ್ತು ಕಲಾ ಕ್ಷೇತ್ರದ ಸೇವೆಗೆ ನೀಡಿರುವ ಕೊಡುಗೆ ಗುರುತಿಸಿ 2025-26ನೇ ಸಾಲಿನ ನೀಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶ್ರೀ ಜೋಸಫ್ ಮಥಾಯಸ್ ಶಿಬ್ರಿಕೆರೆ ಮಂಗಳೂರು (ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೆರಿಟ್ ಪ್ರೈಟ್ ಸ್ಟಿಸಂ. ಕಂ.ಎಲ್. ಎಲ್. ಸಿ )ರವರು ಕನ್ನಡ ಭಾಷೆ, ಸಂಸ್ಕೃತಿ ಕಲೆಗಳ ಬಗ್ಗೆ ಅಪಾರ ಕಾಳಜಿವುಳ್ಳವರು, ಕನ್ನಡ ಭಾಷೆ ಹಾಗೂ ಕಲೆಗಳ ಉಳಿವಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಕನ್ನಡ ಪರ ಸಂಘಟನೆಗಳಗೆ ಬೆನ್ನೆಲುಬಾಗಿ […]

DAKSHINA KANNADA HOME

ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ.ಕಂದಾಯ ಸಚಿವ ಕೃಷ್ಣಬೈರೇಗೌಡರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಸರಕಾರಿ ಜಾಗದಲ್ಲಿರುವ ಎಲ್ಲಾ ಧರ್ಮದ ಧಾರ್ಮಿಕ ಕೇಂದ್ರಗಳನ್ನು ಧಾರ್ಮಿಕ ಕೇಂದ್ರ ಅಥವಾ ದೇವರ ಹೆಸರಿನಲ್ಲಿ ಸಕ್ರಮೀಕರಣ ಮಾಡುವ ಬಗ್ಗೆ ಕಂದಾಯ ಸಚಿವರಾದ ಕೃಷ್ಣಬೈರೇಗೌಡರ ಜೊತೆ ಶಾಸಕ ಅಶೋಕ್ ರೈ ಶುಕ್ರವಾರ ಮಾತುಕತೆ ನಡೆಸಿದ್ದು , ಈ ವಿಚಾರದಲ್ಲಿ ಮೊದಲ ಹೆಜ್ಜೆ ಎಂಬಂತೆ ಆರು ಧಾರ್ಮಿಕ ಕೇಂದ್ರಗಳನ್ನು ಪ್ರಾಯೋಗಿಕವಾಗಿ ಸಕ್ರಮೀಕರಣ ಮಾಡುವುದಾಗಿ ಸಚಿವರು ಒಪ್ಪಿಕೊಂಡಿದ್ದು , ಇದಾದ ಬಳಿಕ ಎಲ್ಲಾ ಧಾರ್ಮಿಕ ಕೇಂದ್ರಗಳೂ ಸಕ್ರಮಗೊಳ್ಳಲಿದೆ. ಧಾರ್ಮಿಕ ಕೇಂದ್ರಗಳಾದ ದೇವಸ್ಥಾನ, ದೈವಸ್ಥಾನ , ಮಸೀದಿ, ಚರ್ಚ್, ಬಸದಿಗಳು ಸೇರಿದಂತೆ […]