Month: December 2025

COMMUNITY NEWS DAKSHINA KANNADA HOME

*ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ಮಕ್ಕಳ ಆಶೀರ್ವಾದದೊಂದಿಗೆ ‘ಹೋಲಿ ಇನ್ನೋಸೆಂಟ್ಸ್’ ಹಬ್ಬದ ಆಚರಣೆ*

ಮಂಗಳೂರಿನ ಬಿಕರ್ನಕಟ್ಟೆಯ ಕಾರ್ಮೆಲ್ ಹಿಲ್‌ನಲ್ಲಿರುವ ಬಾಲ ಯೇಸುವಿನ ಪುಣ್ಯಕ್ಷೇತ್ರವು, ಕ್ರಿಸ್ಮಸ್ ಹಬ್ಬದ ಮೂರನೇ ದಿನದಂದು ಆಚರಿಸಲಾಗುವ ‘ಹೋಲಿ ಇನ್ನೋಸೆಂಟ್ಸ್’ (ಪವಿತ್ರ ಮುಗ್ಧರ ಹಬ್ಬ) ದಿನದಂದು ಮಕ್ಕಳ ಮೇಲೆ, ವಿಶೇಷವಾಗಿ ಶಿಶುಗಳ ಮೇಲೆ ದೇವರ ಆಶೀರ್ವಾದವನ್ನು ಕೋರುವ ತನ್ನ ಸುದೀರ್ಘ ಸಂಪ್ರದಾಯವನ್ನು ಆಚರಿಸಿತು. ಯಹೂದಿಗಳ ರಾಜನಾಗಿ ಜನಿಸಿದ ಯೇಸುವಿನ ಬಗ್ಗೆ ಭಯಗೊಂಡ ರಾಜ ಹೆರೋದನಿಂದ ಹತ್ಯೆಗೀಡಾದ ಮುಗ್ಧ ಶಿಶು ಹುತಾತ್ಮರ ಸ್ಮರಣಾರ್ಥವಾಗಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಮಕ್ಕಳಂಬ ಉಡುಗೊರೆಗಾಗಿ ಸಲ್ಲಿಸಲಾದ ವಿಶೇಷ ಪ್ರಾರ್ಥನೆಗಳಲ್ಲಿ ಪಾಲ್ಗೊಳ್ಳಲು ಪೋಷಕರು ತಮ್ಮ ಪುಟ್ಟ […]

DAKSHINA KANNADA HOME

*ಸಂಸದ ಕ್ಯಾ. ಚೌಟ ಅವರ ಬ್ಯಾಕ್‌ ಟು ಊರು ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ*

ಮಂಗಳೂರು: ಗ್ರಾಮೀಣ ಸೊಗಡಿನ ಕಂಬಳವನ್ನು ನಗರಕ್ಕೆ ಪರಿಚಯಿಸಿದಂತೆ, ಜಗತ್ತಿನಾದ್ಯಂತ ಹರಡಿರುವ ಮಂಗಳೂರಿನ ಪ್ರತಿಭೆಗಳು ತಾಯ್ನಾಡಿಗೆ ಕೊಡುಗೆ ನೀಡಲು ಇಲ್ಲಿ ಉದ್ಯಮ ಸ್ಥಾಪಿಸುವಂತೆ ಹುರಿದುಂಬಿಸುವ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ‘ಬ್ಯಾಕ್ ಟು ಊರು’ ಪರಿಕಲ್ಪನೆ ಅತ್ಯಂತ ವಿಭಿನ್ನ ಹಾಗೂ ಶ್ಲಾಘನೀಯವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಹೇಳಿದ್ದಾರೆ. ಬಂಗ್ರಕೂಳೂರಿನ ಗೋಲ್ಡ್‌ಪಿಂಚ್‌ ಸಿಟಿಯ ರಾಮ-ಲಕ್ಷ್ಮಣ ಜೋಡುಕರೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ನೇತೃತ್ವದಲ್ಲಿ ನಡೆದ ನವ ವರ್ಷದ ನವವಿಧದ 9ನೇ ವರ್ಷದ […]

COMMUNITY NEWS DAKSHINA KANNADA HOME

*ರೊಸಾರಿಯೊ ಕೆಥೆಡ್ರಲ್‌ನಲ್ಲಿ ‘ಭರವಸೆಯ ಜುಬಿಲಿ ವರ್ಷ–2025’ ಸಮಾರೋಪ

ಮಂಗಳೂರು ಧರ್ಮಕ್ಷೇತ್ರದ ‘ಭರವಸೆಯ ಜುಬಿಲಿ ವರ್ಷ–2025’ ರ ಸಮಾರೋಪ ಸಮಾರಂಭವು ಇಂದು ಡಿಸೆಂಬರ್ 28ರಂದು ರವಿವಾರ ಮಂಗಳೂರಿನ ಅವರ್ ಲೇಡಿ ಆಫ್ ಹೋಲಿ ರೊಸಾರಿಯೊ ಕೆಥೆಡ್ರಲ್‌ನಲ್ಲಿ ಭಕ್ತಿಭಾವದಿಂದ ನೆರವೇರಿತು. ಪವಿತ್ರ ಕುಟುಂಬದ ಹಬ್ಬದ ದಿನದಂದೇ ಜುಬಿಲಿ ವರ್ಷದ ಸಮಾರೋಪ ವಿಧಿಗಳು ನಡೆದಿದ್ದು ವಿಶೇಷವಾಗಿತ್ತು. ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಜುಬಿಲಿ ವರ್ಷದ ಸಮಾರೋಪದ ದಿವ್ಯ ಬಲಿಪೂಜೆಯನ್ನು ನೆರವೇರಿಸಿದರು. ಧರ್ಮಕ್ಷೇತ್ರದ ಶ್ರೇಷ್ಠಗುರು ಅತೀ ವಂದನೀಯ ಮೊನ್ಸಿಂಜ್ಞೊರ್ ಮ್ಯಾಕ್ಸಿಮ್ […]

COMMUNITY NEWS DAKSHINA KANNADA HOME

*ಕ್ರಿಸ್ಮಸ್ ಹಬ್ಬದ ವೇಳೆ ಕ್ರೈಸ್ತ ಸಂಪ್ರದಾಯದ ಮೇಲೆ ನಡೆದ ದಾಳಿಗಳು ಖಂಡನೀಯ – ಸಮುದಾಯದ ಭದ್ರತೆಗೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಮಂಗಳೂರು ಧರ್ಮಕ್ಷೇತ್ರ ಆಗ್ರಹಿಸಿದೆ*

ಮಂಗಳೂರು,ಡಿ 26:ಕ್ರಿಸ್ಮಸ್ ಹಬ್ಬವನ್ನು ಗುರಿಯಾಗಿಸಿಕೊಂಡು ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಕ್ರೈಸ್ತ ಸಮುದಾಯದ ಮೇಲೆ ನಡೆಯುತ್ತಿರುವ ಹಲ್ಲೆಗಳು ಖಂಡನೀಯವಾಗಿದ್ದು, ಸಂಬಂಧಪಟ್ಟ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಮುದಾಯದ ಭದ್ರತೆಗೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರು ಧರ್ಮಕ್ಷೇತ್ರ ಆಗ್ರಹಿಸಿದೆ .ಕೇರಳದ ಪಾಲಕ್ಕಾಡ್‌ನಲ್ಲಿ ಕ್ರಿಸ್ಮಸ್ ಕ್ಯಾರಲ್ಸ್ ತಂಡದ ಮೇಲೆ ಮತಾಂಧರು ಹಲ್ಲೆ ನಡೆಸಿರುವ ಘಟನೆ ಖಂಡನೀಯವಾಗಿದೆ. ಇನ್ನೂ ಕೆಲವೆಡೆ ಕ್ರಿಸ್ಮಸ್ ಸಂಬಂಧಿತ ವಸ್ತುಗಳನ್ನು ಮಾರಾಟ ಮಾಡುತ್ತಿದ್ದವರನ್ನು ತಡೆದು ಹಿಂಸೆಗೆ ಒಳಪಡಿಸಿರುವ ಘಟನೆಗಳು ವರದಿಯಾಗಿವೆ. ನವದೆಹಲಿಯಲ್ಲಿ ಸಾಂತಾಕ್ಲಾಸ್ […]

COMMUNITY NEWS HOME LATEST NEWS

*ಕರಾವಳಿಯಲ್ಲಿ ಶ್ರದ್ಧಾ ಭಕ್ತಿಯಿಂದ ಕ್ರಿಸ್ಮಸ್ ಆಚರಣೆ*

ಮಂಗಳೂರು, ಡಿಸೆಂಬರ್ 24 : ಮಂಗಳೂರು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿರುವ ಚರ್ಚ್‌ಗಳು, ತಡ ರಾತ್ರಿ ವಿಶೇಷ ಪ್ರಾರ್ಥನೆ, ಬಲಿಪೂಜೆ. ಆಕರ್ಷಣೀಯ ಗೋದಲಿಗಳು, ಅವುಗಳ ಸುತ್ತ ನಕ್ಷತ್ರಗಳ ಮಿಂಚು! ಏಸು ಕ್ರಿಸ್ತರ ಜನ್ಮ ಸ್ಮರಣೆಯ ಕ್ರಿಸ್ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ಕರಾವಳಿಯಾದ್ಯಂತ ಬುಧವಾರ ರಾತ್ರಿ ಶ್ರದ್ಧಾಪೂರ್ವಕವಾಗಿ ಆಚರಿಸಿ ಸಂಭ್ರಮಿಸಿದರು. ಮಧ್ಯರಾತ್ರಿ ವೇಳೆಯಲ್ಲಿ ಕ್ರಿಸ್ತ ಜನಿಸಿದ ಕ್ಷಣವನ್ನು ಸ್ಮರಿಸಿ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಸಂಪ್ರದಾಯವಿದ್ದು, ಸಹಸ್ರ ಸಂಖ್ಯೆಯಲ್ಲಿ ಕ್ರೈಸ್ತರು ಬಲಿಪೂಜೆಯಲ್ಲಿ ಭಾಗಿಗಳಾದರು. ದ.ಕ. ಜಿಲ್ಲೆಯ ಮಂಗಳೂರು ಧರ್ಮಪ್ರಾಂತಕ್ಕೆ ಒಳಗೊಂಡ […]

COMMUNITY NEWS DAKSHINA KANNADA HOME

ಕ್ರಿಸ್‌ಮಸ್‌ – ಸತ್ಯದ ಬೆಳಕು, ಪಾರದರ್ಶಕತೆಯ ದಾರಿ ಮತ್ತು ನೈತಿಕ ಬದುಕಿಗೆ ಕರೆ: ಡಾ|ಪೀಟರ್‌ ಪಾವ್ಲ್ ಸಲ್ಡಾನ್ಹಾ

ಮಂಗಳೂರು, ಡಿ.23 : 2025ನೇ ಜ್ಯೂಬಿಲಿ ವರ್ಷದ ಕ್ರಿಸ್‌ಮಸ್‌ ಹಬ್ಬದ ಸಂದರ್ಭದಲ್ಲಿ ಮಂಗಳೂರು ಕಥೊಲಿಕ್ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್‌ ಪಾವ್ಲ್ ಸಲ್ಡಾನ್ಹಾ ಅವರು ಸಮಾಜಕ್ಕೆ ಸತ್ಯ, ಪಾರದರ್ಶಕತೆ ಮತ್ತು ನೈತಿಕ ಜೀವನದ ಮಹತ್ವವನ್ನು ಸಾರುವ ಪ್ರೇರಣಾದಾಯಕ ಸಂದೇಶ ನೀಡಿದರು. ಮಂಗಳೂರಿನ ಕೊಡಿಯಾಲ್ ಬೈಲ್‌ನ ಬಿಷಪ್ ಹೌಸ್‌ನಲ್ಲಿ ಡಿ. 23ರಂದು ಆಯೋಜಿಸಲಾದ ಪತ್ರಕರ್ತರು ಹಾಗೂ ಮಾಧ್ಯಮ ಪ್ರತಿನಿಧಿಗಳ ಸ್ನೇಹಕೂಟದಲ್ಲಿ ಅವರು ತಮ್ಮ ಕ್ರಿಸ್‌ಮಸ್‌ ಸಂದೇಶವನ್ನು ಹಂಚಿಕೊಂಡರು. ‘ಯೇಸು ಕ್ರಿಸ್ತರು ಲೋಕಕ್ಕೆ ತಂದ ಪ್ರೀತಿ, ಶಾಂತಿ […]

COMMUNITY NEWS DAKSHINA KANNADA HOME

*ಮಂಗಳೂರು ಧರ್ಮಕ್ಷೇತ್ರದ ಬಿಷಪ್ ರಿಂದ ಸಂತ ಅಂತೋನಿ ಆಶ್ರಮದಲ್ಲಿ ವಿನೂತನ ‘ಡಿಜಿಟಲ್ ಗೋದಲಿ’ ಲೋಕಾರ್ಪಣೆ*

ಮಂಗಳೂರು ಧರ್ಮಕ್ಷೇತ್ರದ ಬಿಷಪ್ ರಿಂದ ಸಂತ ಅಂತೋನಿ ಆಶ್ರಮದಲ್ಲಿ ವಿನೂತನ ‘ಡಿಜಿಟಲ್ ಗೋದಲಿ’ ಲೋಕಾರ್ಪಣೆ ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಅತೀ ವಂದನೀಯ ಡಾ. ಪೀಟ‌ರ್ ಪಾವ್ಕ್ ಸಲ್ದಾನ್ಹಾ ಅವರು ಜೆಪ್ಪುವಿನ ಸಂತ ಅಂತೋನಿ ಆಶ್ರಮದ ನಿವಾಸಿಗಳೊಂದಿಗೆ ಕ್ರಿಸ್‌ಮಸ್‌ ಸಂಭ್ರಮವನ್ನು ಆಚರಿಸಿದರು. ಸಾಂಪ್ರದಾಯಿಕ ಭಕ್ತಿ ಮತ್ತು ಆಧುನಿಕ ತಂತ್ರಜ್ಞಾನವನ್ನು ಸಮ್ಮಿಳಿತಗೊಳಿಸಿದ ವಿಶಿಷ್ಟ ‘ಡಿಜಿಟಲ್ ಕ್ರಿಬ್’ (ಗೋದಲಿ) ಉದ್ಘಾಟನೆಯು ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಆಶ್ರಮದ ಪ್ರವೇಶ ದ್ವಾರದಲ್ಲಿ ಬಿಷಪ್ ಅವರು ಭವ್ಯವಾದ ಕ್ರಿಸ್‌ಮಸ್‌ ಗೋದಲಿಯನ್ನು ಆಶೀರ್ವದಿಸುವುದರೊಂದಿಗೆ ಕಾರ್ಯಕ್ರಮ ಆರಂಭವಾಯಿತು. […]

COMMUNITY NEWS DAKSHINA KANNADA HOME LATEST NEWS

*ಕ್ರಿಸ್ಮಸ್ ಸಂಭ್ರಮಾಚರಣೆಗೆ ನಾಡು ಸಜ್ಜು ಎಲ್ಲೆಲ್ಲೂ ಗೋದಲಿ, ನಕ್ಷತ್ರ, ಕ್ಯಾರಲ್ ಗಾಯನ*

ಮಂಗಳೂರು, ಡಿ.23: ಕ್ರಿಸ್ತ ಜನನದ ಸಂಭ್ರಮಕ್ಕೆ ಕೊನೇ ಹಂತದ ತಯಾರಿಗಳು ನಡೆಯುತ್ತಿವೆ. ಎಲ್ಲೆಲ್ಲೂ ಕ್ರಿಸ್ಮಸ್ ನ ಕಳೆ ಕಟ್ಟಿದೆ. ಕ್ರೈಸ್ತರು ವಿವಿಧ ರೀತಿಯ ತಯಾರಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಇದರಲ್ಲಿ ಗೋದಲಿ ಪ್ರಮುಖವಾಗಿದೆ. ಕರಾವಳಿಯಾದ್ಯಂತ ಕಳೆದ ಒಂದೆರಡು ವಾರದಿಂದ ಗೋದಲಿ ನಿರ್ಮಾಣ ಕೆಲಸ ಆರಂಭಗೊಂಡಿದ್ದು, ಅಂತಿಮ ತಯಾರಿಯಲ್ಲಿ ಕ್ರೈಸ್ತರಿದ್ದಾರೆ. ದೇವರ ಯೋಜನೆಯಂತೆ ದೇವ ಕುವರ ಯೇಸು ಕ್ರಿಸ್ತರು ಸರಳವಾಗಿ ಗೋದಲಿಯಲ್ಲಿ ಜನಿಸಿದರು. ಆ ಮೂಲಕ ಜಗತ್ತಿಗೆ ಶಾಂತಿದೂತನ ಆಗಮನವಾಯಿತು. ಜಗತ್ತಿನಲ್ಲಿ ಹೊಸ ಶಕೆಯೊಂದು ಶುರುವಾಯಿತು ಎಂಬುವುದು ಪವಿತ್ರ ಬೈಬಲ್ […]

DAKSHINA KANNADA HOME

*ಮಂಗಳೂರು ಪಾಲಿಕೆಯ ಫ್ಲೆಕ್ಸ್ ನಿಯಮಗಳು ಕೇವಲ ದೇವಸ್ಥಾನ, ದೈವಸ್ಥಾನ ಗಳಿಗೆ ಮಾತ್ರ ಅನ್ವಯವಾಗುತ್ತಿದ್ದು ಕಾಂಗ್ರೆಸ್ಸಿಗರು ದೇವರಿಗಿಂತ ದೊಡ್ಡವರಾ? ಶಾಸಕ ವೇದವ್ಯಾಸ ಕಾಮತ್

ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕದ್ರಿಪಾರ್ಕ್, ಲೇಡಿಹಿಲ್, ಸೇರಿದಂತೆ ಬಹುತೇಕ ಭಾಗದಲ್ಲಿ ಪಾಲಿಕೆಯ ಅಧಿಕಾರಿಗಳು ಗೂಡಂಗಡಿಗಳನ್ನು ತೆರವುಗೊಳಿಸಿದ್ದು ಕಾಂಗ್ರೆಸ್ ನಾಯಕರು ಸೂಚಿಸಿರುವ ಕಡೆಗಳಲ್ಲಿ ಮಾತ್ರ ನಿರ್ಧಾಕ್ಷಿಣ್ಯ ಕ್ರಮಕೈಗೊಂಡು ಕೆಲವರಿಗೆ ಮಾತ್ರ ಅನ್ಯಾಯ ಮಾಡುತ್ತಿರುವುದು ಎಷ್ಟು ಸರಿ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ತೆರವುಗೊಳಿಸಲೇಬೇಕಾದ ಅನಿವಾರ್ಯತೆಯಿದ್ದರೆ ಎಲ್ಲವನ್ನೂ ತೆರವುಗೊಳಿಸಬೇಕು. ಅದು ಬಿಟ್ಟು ದುಡಿದು ತಿನ್ನುವ ಬಡ ವ್ಯಾಪಾರಿಗಳ ಮಧ್ಯೆಯೂ ಯಾಕೆ ಇಂತಹ ತಾರತಮ್ಯ? ಪಾಲಿಕೆಯಲ್ಲಿ ಬಿಜೆಪಿ ಆಡಳಿತವಿದ್ದಾಗ ಇಂತಹ ಅನ್ಯಾಯಗಳಿಗೆ ಆಸ್ಪದವಿರಲಿಲ್ಲ. ಇದೀಗ […]

HOME LATEST NEWS STATE

*ಮೋಜು ಮಸ್ತಿಗಾಗಿ ಲವರ್ ಜತೆ ಸೇರಿ ಸ್ನೇಹಿತೆಯರಿಗೆ ಪಂಗನಾಮ ಹಾಕಿದ ಮಿತ್ರದ್ರೋಹಿ ಯುವತಿ*

ಚಿಕ್ಕಬಳ್ಳಾಪುರ, ಡಿಸೆಂಬರ್ 22: ಕಿಲಾಡಿ ಪ್ರೇಮಿಗಳ ಜೋಡಿಯೊಂದು ಮೋಜು ಮಸ್ತಿ ಮಾಡಲು ಪರಿಚಯಸ್ಥ ಸ್ನೇಹಿತೆಯರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ, ಅವರಿಂದ ಲಕ್ಷಾಂತರ ರೂ ಹಣ ಪಡೆದು, ಕೆಲಸನ ಕೊಡದೆ, ವಾಪಸ್ ಹಣ ಕೂಡ ಕೊಡದೆ ಪಂಗನಾಮ ಹಾಕಿರುವಂತಹ ಘಟನೆವೊಂದು ಚಿಕ್ಕಬಳ್ಳಾಪುರ ತಾಲೂಕಿನ ಅಂಕಣಗುಂದಿ ಗ್ರಾಮದಲ್ಲಿ ನಡೆದಿದೆ. ಬಾಯ್ ಫ್ರೆಂಡ್ ಜೊತೆ ಸೇರಿ ಸ್ನೇಹಿತೆಯರಿಗೆ ಪಂಗನಾಮ ಚಿಕ್ಕಬಳ್ಳಾಪುರ ತಾಲೂಕಿನ ಅಂಕಣಗುಂದಿ ಗ್ರಾಮದ ನಿವಾಸಿ ಅನುಷಾ ಮತ್ತು ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ನಿವಾಸಿಯಾಗಿರುವ ಆಕೆಯ ಬಾಯ್ ಫ್ರೆಂಡ್ ಅರುಣ್ ಜೊತೆ […]