Month: January 2026

DAKSHINA KANNADA HOME LATEST NEWS

ಮಂಗಳೂರಿನ ಆಲ್ಬುಕರ್ಕ್‌ ಹೆಂಚಿನ ಕಾರ್ಖಾನೆಗೆ ಬೆಂಕಿ: ಅಪಾರ ನಷ್ಟ

ಮಂಗಳೂರು: ನಗರದ ಹೊಯ್ಗೆಬಜಾರ್‌ನಲ್ಲಿರುವ ಆಲ್ಬುಕರ್ಕ್‌ ಹೆಂಚಿನ ಕಾರ್ಖಾನೆಗೆ ಮಂಗಳವಾರ ಮುಂಜಾನೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಹೆಂಚುಗಳು ಹಾಗೂ ಇಟ್ಟಿಗೆಗಳು ಹಾನಿಗೊಳಗಾಗಿವೆ. ಕಟ್ಟಡವೂ ಭಾಗಶಃ ಸುಟ್ಟುಹೋಗಿದೆ. ತಕ್ಷಣವೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದವು. ಬೆಂಕಿ ಭಾರಿ ಪ್ರಮಾಣದಲ್ಲಿ ವ್ಯಾಪಿಸಿದ್ದರಿಂದ ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಎರಡು, ಕದ್ರಿ ಅಗ್ನಿಶಾಮಕ ಠಾಣೆ ಹಾಗೂ ಎಂಸಿಎಫ್‌ನ ತಲಾ ಒಂದು ಅಗ್ನಿಶಾಮಕ ವಾಹನ ಬಳಸಿ ಬೆಂಕಿಯನ್ನು ನಂದಿಸಲಾಯಿತು. ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂದು ಗೊತ್ತಾಗಿಲ್ಲ. ಕಾರ್ಖಾನೆಯಲ್ಲಿ ದಾಸ್ತಾನಿದ್ದ ಹೆಂಚುಗಳು ಹಾಗೂ […]

DAKSHINA KANNADA HOME LATEST NEWS

ಮಂಗಳೂರಿಗೆ ಮಾರಾಟ ಮಾಡಲು ಕೊಂಡೊಯ್ಯುತ್ತಿದ್ದ106 ಕಿಲೋ ಗಾಂಜಾ ಪುತ್ತೂರಲ್ಲಿ ವಶ

ಪುತ್ತೂರು: ಕಾರು ಹಾಗೂ ಗೂಡ್ಸ್‌ ವಾಹನದಲ್ಲಿ 106 ಕಿಲೋ ಗಾಂಜಾ ಸಾಗಾಟ ಮಾಡುತ್ತಿದ್ದುದನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಚಾರ್ಮಾಡಿ ಗ್ರಾಮದ ನಿವಾಸಿ ಅಬ್ದುಲ್ ಸಾದಿಕ್ (37) ಹಾಗೂ ಅದೇ ಗ್ರಾಮದ ರಫೀಕ್‌ ಪಿ(37) ಎಂದು ಗುರುತಿಸಲಾಗಿದೆ. ಘಟನೆ ವಿವರ ಜ.19 ರಂದು ಸಂಜೆ, ಒಂದು ಕಾರು ಮತ್ತು ಒಂದು ಅಶೋಕ್‌ ಲೈಲ್ಯಾಂಡ್‌ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವುದಾಗಿ ಪೊಲೀಸರಿಗೆ ಖಚಿತ ಮಾಹಿತಿ ದೊರೆಯುತ್ತದೆ. ಈ ಹಿನ್ನೆಲೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ […]

DAKSHINA KANNADA HOME

*ಹಾರಾಡಿ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿ ಪೋಷಕನಿಂದ ವಿದ್ಯಾರ್ಥಿ,ಶಿಕ್ಷಕ ಕಿರುಕುಳ, ಜೀವಬೆದರಿಕೆ: ನ್ಯಾಯಕ್ಕೆ ಆಗ್ರಹಿಸಿ ಶಾಸಕ ಅಶೋಕ್ ರೈ ಗೆ ಮನವಿ*

ಪುತ್ತೂರು: ಹಾರಾಡಿ ಸರಕಾರಿ ಹಿ ಪ್ರಾ ಶಾಲೆಯಲ್ಲಿನ ವಿದ್ಯಾರ್ಥಿಯ ಪೋಷಕನೋರ್ವ ಶಾಲೆಯ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಪೋಷಕರಿಗೆ ಕಿರುಕುಳ,ಜೀವ ಬೆದರಿಕೆ ಒಡ್ಡುತ್ತಿದ್ದು ಈ ಬಗ್ಗೆ ಶಿಕ್ಷಕ ಹಾಗೂ ಪೋಷಕರು ಶಾಸಕ ಅಶೋಕ್ ರೈ ಬಳಿ ದೂರು ನೀಡಿ ನ್ಯಾಯದ ಬೇಡಿಕೆ ಇಟ್ಟಿದ್ದಾರೆ. ಶಾಸಕರಿಗೆ ನೀಡಿದ ದೂರಿನಲ್ಲಿ ಇಂತಿದೆ “ನೀಲ್ ನಿಖಿಲ್ ಎಂಬ ವಿದ್ಯಾರ್ಥಿಯಾದ ನಾನು ಸ.ಮಾ.ಉ.ಹಿ.ಪ್ರ. ಶಾಲೆ ಹಾರಾಡಿ, ಪುತ್ತೂರು ಶಾಲೆಯ 7ನೇ ಬಿ ತರಗತಿಯಲ್ಲಿ ಕಲಿಯುತ್ತಿದ್ದೇನೆ. ನನ್ನ ತರಗತಿಯ ಇನ್ನೊಬ್ಬ ವಿದ್ಯಾರ್ಥಿ ಯಾದ ಯಶಸ್ ಕಾರಣವಿಲ್ಲದೆ […]

DAKSHINA KANNADA HOME LATEST NEWS

ಪುತ್ತೂರು: ತೆಂಗಿನ ಮರದಲ್ಲಿ ಕಾಳುಮೆಣಸು ಕೀಳುತ್ತಿದ್ದಾಗ ನೆಲಕ್ಕೆ ಬಿದ್ದು ನಿವೃತ್ತ ಶಿಕ್ಷಕ ಸಾವು

ಪುತ್ತೂರು: ತೆಂಗಿನ ಮರಕ್ಕೆ ಹಬ್ಬಿದ್ದ ಕಾಳುಮೆಣಸಿನ ಗಿಡದಿಂದ ಕಾಳು ಮೆಣಸು ಕೀಳುವ ವೇಳೆ ನಿವೃತ್ತ ಶಿಕ್ಷಕರೊಬ್ಬರು ಬಿದ್ದು ಸಾವನಪ್ಪಿದ ಘಟನೆ ಬೆಟ್ಟಂಪಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಬೆಟ್ಟಂಪಾಡಿ ಗ್ರಾಮದ ಗುಮ್ಮಟೆಗದ್ದೆ ನಿವಾಸಿ ನಾರಾಯಣ ನಾಯ್ಕ ಪೈಂತಿಮುಗೇರು ಎಂದು ಗುರುತಿಸಲಾಗಿದೆ. ಘಟನೆ ಜನವರಿ 19 ರಂದು ನಡೆದಿದೆ. ಬೆಳಗ್ಗೆ ತನ್ನ ಮನೆ ಮುಂಭಾಗದಲ್ಲಿದ್ದ ತೆಂಗಿನ ಮರದಲ್ಲಿ ಬೆಳೆದಿದ್ದ ಕಾಳು ಮೆಣಸನ್ನು ಅಲ್ಯೂಮಿನಿಯಂ ಏಣಿ ಏರಿ ಕೊಯ್ಯುತ್ತಿದ್ದಾಗ ಏಣಿ ಸಹಿತ ಅವರು ಮರದಿಂದ ಜಾರಿ ಬಿದ್ದಿದ್ದಾರೆ. ಘಟನೆಯಿಂದ ನಾರಾಯಣ ನಾಯ್ಕರವರಿಗೆ […]

DAKSHINA KANNADA HOME LATEST NEWS

ಲೇಖಕ ಪೆಟ್ರಿಕ್ ಕಾಮಿಲ್ ಮೊರಾಸ್‌ಗೆ 2026ನೇ ಸಾಲಿನ ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿ

ಮಂಗಳೂರು: 2026ನೇ ಸಾಲಿನ ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಕೊಂಕಣಿ ಲೇಖಕ ಪೆಟ್ರಿಕ್ ಕಾಮಿಲ್ ಮೊರಾಸ್ (ಎಮ್. ಪೆಟ್ರಿಕ್) ಇವರನ್ನು ಆಯ್ಕೆ ಮಾಡಲಾಗಿದೆ. ಲೇಖಕ ಪೆಟ್ರಿಕ್ ಕಾಮಿಲ್ ಮೊರಾಸ್ ಈ ಬಗ್ಗೆ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೊಂಕಣಿ ಲೇಖಕ್ ಸಂಘ್ ಕರ್ನಾಟಕ ಇದರ ಸಂಚಾಲಕ ರಿಚರ್ಡ್ ಮೊರಾಸ್ ಅವರು, ಈ ಪ್ರಶಸ್ತಿಯು ರುಪಾಯಿ 25000/- ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.  ಪ್ರಶಸ್ತಿ ಪ್ರದಾನ ಕಾರ್ಯಕ್ರಮ, ಫೆಬ್ರವರಿ 07, 2026ನೇ […]

DAKSHINA KANNADA HOME LATEST NEWS

ಡಿಜಿಪಿ ಕೆ.ರಾಮಚಂದ್ರರಾವ್ ರಾಸಲೀಲೆ ಪ್ರಕರಣ: ರಾಜ್ಯ ಸರ್ಕಾರದಿಂದ ಅಮಾನತು

ಬೆಂಗಳೂರು: ಕರ್ನಾಟಕದ ಡಿಜಿಪಿ ಕೆ.ರಾಮಚಂದ್ರರಾವ್ ಕಚೇರಿಯಲ್ಲಿ ರಾಸಲೀಲೆ ನಡೆಸಿದ್ದಾರೆ ಎನ್ನಲಾದ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಹಿರಿಯ ಅಧಿಕಾರಿಯನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಇಲಾಖೆಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ರಾಮಚಂದ್ರರಾವ್ ತನ್ನ ಕಚೇರಿಯ ಒಳಗಡೆ ಸಮವಸ್ತ್ರದಲ್ಲಿರುವಾಗ ನಡೆದಿರುವ ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಸೂಚನೆ […]

DAKSHINA KANNADA HOME LATEST NEWS

ಉಳ್ಳಾಲ: ಸಿಟಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನ ಕಳವು

ಮಂಗಳೂರು: ಸಿಟಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪ್ರಯಾಣಿಕರೋರ್ವರ 16 ಗ್ರಾಂ ತೂಕದ ಚಿನ್ನ ಕಳವಾದ ಬಗ್ಗೆ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ ಸ್ವರ್ಷ ಎಂಬುವವರು ಜ.17 ರಂದು ಉಳ್ಳಾಲ ತಾಲೂಕಿನ ಉಳ್ಳಾಲ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಇರುವ ಕೆಥೋಲಿಕ್ ಪ್ರಾಥಮಿಕ ಸಹಕಾರ ಸಂಘದಲ್ಲಿ ಲಾಕರ್ ನಲ್ಲಿ ಇಟ್ಟಿದ್ದ 2 ಚಿನ್ನದ ಸರವನ್ನು ಬಿಡಿಸಿಕೊಂಡು ಬ್ಯಾಗ್ ನಲ್ಲಿ ಹಾಕಿ ಬಂದಿದ್ದರು. ನಂತರ ಸುಮಾರು 12 ಗಂಟೆ ಸುಮಾರಿಗೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿಂದ […]

DAKSHINA KANNADA HOME LATEST NEWS

ಶೇರ್ ಮಾರ್ಕೆಟಿಂಗ್ ಹೆಸರಲ್ಲಿ ಮಂಗಳೂರ ವ್ಯಕ್ತಿಗೆ ರೂ. 1,38,20,060 ದೋಖಾ

ಮಂಗಳೂರು: ಆನ್ ಲೈನ್ ಶೇರು ಮಾರುಕಟ್ಟೆಯ ಬಗ್ಗೆ ವಾಟ್ಸಾಪ್ ಮೇಸೆಜ್ ಗಳನ್ನು ನಂಬಿ ವ್ಯಕ್ತಿಯೋರ್ವರು ರೂ 1,38,20,060/- ಹಣ ಕಳೆದುಕೊಂಡ ಬಗ್ಗೆ ಮಂಗಳೂರು ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ವಿವರ ಮಂಗಳೂರಿನ ವ್ಯಕ್ತಿಯೋರ್ವರ ಮೊಬೈಲಿಗೆ ರಿಶಿತಾ ಎಂಬ ಅಪರಿಚಿತ ವ್ಯಕ್ತಿ 9205298139 ನೇ ವಾಟ್ಸಾಫ್ ನಂಬ್ರದಿಂದ ಮಂಗಳೂರ ವ್ಯಕ್ತಿಯ ಕಂಪನಿಯ Carpets & Home decorative items ಬೇಕೆಂದು ವಾಟ್ಸಪ್ ಮೇಸೆಜ್ ಮಾಡಿದ್ದಾರೆ.  ಅದರಂತೆ ಈ ವ್ಯಕ್ತಿ ತನ್ನ ಕಂಪನಿಯ Carpets & Home […]

DAKSHINA KANNADA HOME LATEST NEWS

ಮುಲ್ಕಿ ಜೋಡಿ ಕೊಲೆ ಪ್ರಕರಣ: ಆರೋಪಿ ಅಲ್ಫೋನ್ಸ್ ಸಲ್ದಾನಗೆ ಜೀವಾವಧಿ ಶಿಕ್ಷೆ

ಮಂಗಳೂರು: ಮುಲ್ಕಿ ತಾಲೂಕಿಮ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ ನಡೆದ ಜೋಡಿಕೊಲೆ ಪ್ರಕರಣದ ಆರೋಪಿ ಅಲ್ಫೋನ್ಸ್ ಸಲ್ದಾನ ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ. ಘಟನೆ ವಿವರ ಮುಲ್ಕಿ ತಾಲೂಕು ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ  2020ರ ಏ.29 ರಂದು ಆರೋಪಿ ಆಲ್ಫೋನ್ಸ್ ಸಲ್ದಾಣನು ತನ್ನ ನೆರೆಕರೆ ಮನೆಯ ವಿನ್ಸಿ ಯಾನೆ ವಿನ್ಸೆಂಟ್ ಡಿ.ಸೋಜಾನನ್ನು ಮರದ ಗೆಲ್ಲು ಕಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ […]

DAKSHINA KANNADA HOME LATEST NEWS

ಶಿಕ್ಷೆ ಪ್ರಕಟವಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ಸುಲಿಗೆ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ವಾರಂಟ್ ಜಾರಿ ಸಿಬ್ಬಂದಿ ಬಂಧಿಸಿದ್ದಾರೆ. ತೊಕ್ಕೊಟ್ಟು ನಿವಾಸಿ ನವೀನ್ ಸಿಕ್ವೇರಾ (52)ಬಂಧಿತ ಆರೋಪಿ. 2011–12ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಸಂಖ್ಯೆ 195/2011, ಕಲಂ 392 ಐಪಿಸಿ ಅಡಿಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2015ರಲ್ಲಿ ಆರೋಪಿಗೆ ಮೂರು ವರ್ಷಗಳ ಕಠಿಣ ಸೆರೆವಾಸ ಮತ್ತು 5,000 ರೂ. […]