Month: February 2026

DAKSHINA KANNADA HOME LATEST NEWS

ಉಪ್ಪಿನಂಗಡಿ: 20ರ ಹರೆಯದ ಯುವತಿ ನಾಪತ್ತೆ

ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮಜಿಕುಡೇಲು ಎಂಬಲ್ಲಿನ ನಿವಾಸಿ ಸುಪ್ರೀತಾ(20) ಎಂಬಾಕೆ ಮಂಗಳವಾರ ನಸುಕಿನಿಂದ ನಾಪತ್ತೆಯಾಗಿರುವ ಬಗ್ಗೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿವಂಗತ ಶೀನಪ್ಪ ಎಂಬವರ ಮಗಳಾಗಿರುವ ಈಕೆ ಸೋಮವಾರ ರಾತ್ರಿ ಎಂದಿನಂತೆ ಮಲಗಿದ್ದವಳು ಮಂಗಳವಾರ ನಸುಕಿನ ವೇಳೆ ಕಾಣಿಸದೇ ಇದ್ದು, ಮೊಬೈಲ್ ಫೋನ್ ಕರೆಯೂ ಸ್ವೀಕರಿಸಿರಲಿಲ್ಲ. ಬಳಿಕ ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಆಕೆಯ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಹತ್ತನೇ ತರಗತಿಯ […]

DAKSHINA KANNADA HOME LATEST NEWS

ಮಂಗಳೂರು: ನಂತೂರಿನಲ್ಲಿ ಯುವತಿ ಹೊಟ್ಟೆ ಮೇಲೆ ಹರಿದ ಸಿಟಿ ಬಸ್ಸು

ಮಂಗಳೂರು: ಸಿಟಿ ಬಸ್‌ಗಳ ಅವಸರದ ವೇಗಕ್ಕೆ ಮತ್ತೊಂದು ಜೀವವೊಂದು ನಿನ್ನೆ ಬಲಿಯಾಗಿದೆ. ನಂತೂರು ಬಸ್ ಸ್ಟಾಪ್ ಬಳಿ ಸ್ಕೂಟರಿಗೆ ಹಿಂದಿನಿಂದ ಗುದ್ದಿದ ಪರಿಣಾಮ ಸಹ ಸವಾರೆಯೊಬ್ಬರ ಹೊಟ್ಟೆಯ ಮೇಲೆ ಬಸ್ಸು ಚಲಿಸಿದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ನಗರದ ಬಳ್ಳಾಲ್‌ಭಾಗ್‌ ನಿವಾಸಿ ದೀಪ್ತಿ (26) ಎಂದು ಗುರುತಿಸಲಾಗಿದೆ. ಘಟನೆ ವಿವರ ನಿನ್ನೆ ರಾತ್ರಿ ಸಮಯ ಸುಮಾರು 7-45 ಗಂಟೆಗೆ ನಂತೂರು ಬಸ್ಟ್ಯಾಂಡ್ ಬಳಿ ಬಲ್ಲಾಳ್ ಭಾಗ್ ಕಡೆಯಿಂದ ವಾಮಂಜೂರು ಕಡೆಗೆ KA- 19HT-8178 ನಂಬರ್‌ನ ಸ್ಕೂಟರ್‌ನಲ್ಲಿ […]

HOME NATIONAL

*ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾದ ಮಂಡನೆ*

ನವದೆಹಲಿ, ಫೆಬ್ರವರಿ 4: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಇಂದು ಸುಪ್ರೀಂ ಕೋರ್ಟ್ ನಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾದ ಮಂಡಿಸಿದ್ದಾರೆ. ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ತಮ್ಮ ರಾಜ್ಯವನ್ನು ಗುರಿಯಾಗಿಸಿಕೊಂಡು ಉದ್ದೇಶಪೂರ್ವಕವಾಗಿ ಎಸ್ಐಆರ್ ನೆಪದಲ್ಲಿ ಒತ್ತಡ ಹೇರಲಾಗುತ್ತಿದೆ ದೀದಿ ಹೇಳಿದ್ದಾರೆ. ಹೀಗೆ ಹಾಲಿ ಮುಖ್ಯಮಂತ್ರಿಯೊಬ್ಬರು ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡನೆ ಮಾಡಿದ ಅಪರೂಪದ ಘಟನೆ ಇಂದು ನಡೆಯಿತು. ಎಸ್ಐಆರ್ ಪ್ರಕ್ರಿಯೆಯ ಒತ್ತಡದಿಂದಾಗಿ 150ಕ್ಕೂ ಹೆಚ್ಚು ಜನರು […]

DAKSHINA KANNADA HOME LATEST NEWS

ಪುತ್ತೂರು: ಕಂಟೈನರ್ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿ

ಪುತ್ತೂರು: ಗೇರು ಬೀಜ ಸಾಗಣೆ ಕಂಟೈನರ್ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಪುತ್ತೂರು ತಾಲ್ಲೂಕಿನ ಮಾಡ್ನೂರು ಗ್ರಾಮದ ಕಾವು ಬುಶ್ರಾ ವಿದ್ಯಾಸಂಸ್ಥೆಯ ಎದುರು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಮತ್ತು ಕ್ಲೀನಿರ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ‍ಪಡೆಯುತ್ತಿದ್ದಾರೆ. ಪುತ್ತೂರು ಕಡೆಯಿಂದ ಮೈಸೂರು ಕಡೆಗೆ ಗೇರು ಬೀಜದ ಮೂಟೆಗಳನ್ನು ಒಯ್ಯುತ್ತಿದ್ದ ಲಾರಿಯು ಪಿಕಪ್ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸುವ ಯತ್ನದಲ್ಲಿ ಹತೋಟಿ ಕಳೆದುಕೊಂಡು ಹೆದ್ದಾರಿ ಬದಿಯ ವಿದ್ಯುತ್ ಕಂಬಕ್ಕೆ […]

DAKSHINA KANNADA HOME

*ಫೆಬ್ರವರಿ 12 ರೈತ ಕಾರ್ಮಿಕರ ನೇತೃತ್ವದಲ್ಲಿ ಅಖಿಲ ಭಾರತ ಮಹಾಮುಷ್ಕರ*

ಮಂಗಳೂರು ಫೆಬ್ರವರಿ 4: ಕೇಂದ್ರ ಸರಕಾರ 29 ಪ್ರಮುಖ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿರುವುದರ ವಿರುದ್ಧ, ಕಾರ್ಮಿಕ ವಿರೋಧಿ ಕಾರ್ಪೊರೇಟ್ ಪರ 4 ಕಾರ್ಮಿಕ ಸಂಹಿತೆಗಳ ವಿರುದ್ಧ, ರೈತ .ವಿರೋಧಿ ಬೀಜ ಮಸೂದೆ, ವಿದ್ಯುತ್ ಮಸೂದೆ ವಿರುದ್ಧ .ಹಾಗೂ ಉದ್ಯೋಗ ಖಾತ್ರಿ ಯೋಜನೆಗೆ ತಂದ ತಿದ್ದುಪಡಿ . ಶೇಖರ್ವಿರೋಧಿಸಿ ರೈತ ಕಾರ್ಮಿಕರ ನೇತೃತ್ವದಲ್ಲಿ ಫೆಬ್ರವರಿ 12ರಂದು ಅಖಿಲ ಭಾರತ ಮಹಾಮುಷ್ಕರ ನಡೆಯಲಿದೆ. ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್‌ಕುಮಾರ್ ಬಜಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ ಕೇಂದ್ರ ಸರಕಾರ ಭಾರತದ […]

HOME LATEST NEWS STATE

ತಾಯಿ ಎದೆಹಾಲು ಗಂಟಲಲ್ಲಿ ಸಿಲುಕಿ 50 ದಿನದ ಮಗು ಕೊನೆಯುಸಿರು…!

ಕಾಸರಗೋಡು: ತಾಯಿಯ ಎದೆಹಾಲು ಗಂಟಲಲ್ಲಿ ಸಿಲುಕಿ ಮಗುವೊಂದು ಮೃತಪಟ್ಟ ಘಟನೆ ಕಾಸರಗೋಡಿನ ಮೊಗ್ರಾಲ್ ಪೇರಾಲ್‌ನಲ್ಲಿ ನಡೆದಿದೆ. ಮೊಗ್ರಾಲ್ ಪೇರಾಲ್ ಮಡಿಮೊಗರು ನಿವಾಸಿ ಮುಹಮ್ಮದ್ ರಾಹಿದ್-ಮರಿಯಮ್ಮತ್ ಸಾಬಿರಾ ದಂಪತಿ ಪುತ್ರ, 50 ದಿನಗಳ ಲಸಿನ್ ಇಮಾತ್ ಮೃತಪಟ್ಟವ. ಸೋಮವಾರ ರಾತ್ರಿ ಮನೆಯಲ್ಲಿ ಈ ಘಟನೆ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಮಗುವನ್ನು ತಕ್ಷಣ ನಗರದ ಸರ್ಕಾರಿ ಜನರಲ್ ಆಸ್ಪತ್ರೆಗೆ ಸಾಗಿಸಿದರೂ, ಅಷ್ಟರಲ್ಲಿ ಕೊನೆಯುಸಿರೆಳೆದಿದೆ. ಒಂದೇ ರೀತಿಯ ಘಟನೆಯ ಪರಿಣಾಮ 2 ದಿನಗಳಲ್ಲಿ ಇಬ್ಬರು ಮಕ್ಕಳು ಬಲಿಯಾಗಿದ್ದಾರೆ. ಭಾನುವಾರ ರಾತ್ರಿ ಬೇಕಲ […]

DAKSHINA KANNADA

*ಡಾ ಮಾಲತಿ ಶೆಟ್ಟಿ ಮಾಣೂರು ರಿಗೆ ನೋಬೆಲ್ ಕನ್ನಡಿಗ ರಾಜ್ಯ ಪ್ರಶಸ್ತಿ ಪ್ರದಾನ*   

ಬೆಂಗಳೂರು : ಮಾಲತಿ ಶೆಟ್ಟಿ ಮಾಣೂರುರಿನ ಒರಿಯಂಟಲ್ ಫೌಂಡೇಶನ್ ರಿಜಿಸ್ಟರ್ ವತಿಯಿಂದ ನಡೆದ 2026 ಸಾಲಿನ ಪ್ರತಿಷ್ಠಿತ *ನೋಬೆಲ್ ಕನ್ನಡಿಗ* ರಾಜ್ಯ ಪ್ರಶಸ್ತಿಯನ್ನು ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆಯಾಗಿದ್ದು . ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಚಾಮರಾಜಪೇಟೆ, ಕೃಷ್ಣರಾಜ ಪರಿಷತ್ ಮಂದಿರದಲ್ಲಿ ನಡೆಯಿತು ಜ್ಯೋತಿಷ್ಯ ರತ್ನ ಡಾ. ಕುಮಾರ ವಶಿಷ್ಠ ಆಶೀರ್ವಚನ ನೀಡಿದರು. ಧಾರ್ಮಿಕ ಚಿಂತಕ […]

DAKSHINA KANNADA

*ಫಾದರ್ ಮುಲ್ಲರ್ ಒಂಕಾಲಜಿ ಸೆಂಟರ್ ವತಿಯಿಂದ ವಿಶ್ವ ಕ್ಯಾನ್ಸರ್ ದಿನದ ಆಚರಣೆ*

ಮಂಗಳೂರು: ಫೆಬ್ರವರಿ 4 ರಂದು ವಿಶ್ವಾದ್ಯಂತ ಆಚರಿಸಲಾಗುವ ‘ವಿಶ್ವ ಕ್ಯಾನ್ಸರ್ ದಿನ’ದ ಅಂಗವಾಗಿ, ನಗರದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ಆಸ್ಪತ್ರೆಯ (FMMCH) ಫಾದರ್ ಮುಲ್ಲರ್ ಒಂಕಾಲಜಿ ಸೆಂಟರ್ ವತಿಯಿಂದ ಅರ್ಥಪೂರ್ಣ ಜಾಗೃತಿ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವು ಆಶಾ ಕಿರಣ್ ಬ್ಲಾಕ್‌ನ ಮುಂಭಾಗದಲ್ಲಿ ನಡೆಯಿತು. 2026ರ ವಿಶ್ವ ಕ್ಯಾನ್ಸರ್ ದಿನದ ಧ್ಯೇಯವಾಕ್ಯವಾದ “ಯುನೈಟೆಡ್ ಬೈ ಯುನಿಕ್” (United by Unique) ಅಡಿಯಲ್ಲಿ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಫಾದರ್ ಮುಲ್ಲರ್ ಚಾರಿಟಬಲ್ ಸಂಸ್ಥೆಗಳ ನಿರ್ದೇಶಕರಾದ […]

DAKSHINA KANNADA HOME LATEST NEWS

ಬೆಳ್ತಂಗಡಿ: ನಕಲಿ ಚಿನ್ನ ಅಡವಿಟ್ಟು ಸಾಲ ಪಡೆಯಲು ಬಂದ ಇಬ್ಬರು ಅಂದರ್‌

ಬೆಳ್ತಂಗಡಿ: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘ ಮಡಂತ್ಯಾರು ಶಾಖೆಯಲ್ಲಿ ನಕಲಿ ಚಿನ್ನ ಅಡವಿರಿಸಿ ಸಾಲ ಪಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ಪ್ರಮೋದ್ ಪಿ. (50) ಹಾಗೂ ಉಳಿ ಗ್ರಾಮದ ಅಬ್ದುಲ್ ನಝೀರ್ (43) ಬಂಧಿತರು. ಪ್ರಕರಣದ ವಿವರ; ದಿನಾಂಕ: 02.02.2026 ರಂದು ಬೆಳ್ತಂಗಡಿ ತಾಲೂಕು ಪಾರೆಂಕಿ ಗ್ರಾಮದ ಮಡಂತ್ಯಾರು ಶಾಖೆಯಲ್ಲಿ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘದಲ್ಲಿ ಬೆಳಿಗ್ಗೆ 2 ಗ್ರಾಹಕರು ಬಂದು […]

DAKSHINA KANNADA HOME

*ರಸ್ತೆ ಸುರಕ್ಷತಾ ಮಾಸಾಚರಣೆ*

ಮಂಗಳೂರು ಫೆ.3: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರಿಗೆ ಇಲಾಖೆ, ಪೆÇಲೀಸ್ ಇಲಾಖೆ, ಸಾರಿಗೆ ಇಲಾಖೆ ಹಾಗೂ ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಇವರ ಸಂಯುಕ್ತಾಶ್ರಯದಲ್ಲಿ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಮಂಗಳವಾರ ನಡೆಯಿತು. ನಗರದ ಪುರಭವನದಿಂದ ಸ್ಟೇಟ್‍ಬ್ಯಾಂಕ್‍ವರೆಗೆ ನಡೆದ ರಸ್ತೆ ಸುರಕ್ಷತಾ ಜಾಥಾಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನೀಸಾ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರಗೇಂದ್ರ […]