Month: February 2026

HOME LATEST NEWS NATIONAL

ತನ್ನ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಅಣ್ಣಾಮಲೈ….!

ಚೆನ್ನೈ : ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ, ಆರು ವಿಧಾನಸಭಾ ಕ್ಷೇತ್ರಗಳಿಗೆ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಅವರನ್ನು ಉಸ್ತುವಾರಿಯನ್ನಾಗಿ ನೇಮಿಸಲಾಗಿತ್ತು. ಆದರೆ ತನ್ನ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ, ಆರು ವಿಧಾನಸಭಾ ಕ್ಷೇತ್ರಗಳಿಗೆ ಅಣ್ಣಾಮಲೈ ಅವರನ್ನು ಉಸ್ತುವಾರಿಯನ್ನಾಗಿ ನೇಮಿಸಲಾಗಿತ್ತು. ಬರೀ, ಆರು ವಿಧಾನಸಭಾ ಕ್ಷೇತ್ರಗಳಿಗೆ ತಮ್ಮನ್ನು ಸೀಮಿತಗೊಳಿಸಿರುವುದು ಅವರ ಬೇಸರಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಆದರೆ, ತಂದೆ ಕೊಯಂಬತ್ತೂರಿನಲ್ಲಿ ಇದ್ದಾರೆ, ಅವರ ಆರೋಗ್ಯ ಸರಿಯಿಲ್ಲ. ಓಡಾಡಲು ಕಷ್ಟವಾಗುತ್ತದೆ ಎನ್ನುವ […]

HOME LATEST NEWS NATIONAL

ಬಾಲಿವುಡ್‌ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್‌ ನಿರ್ದೇಶಕ ಹಾಗೂ ಚಿತ್ರ ನಿರ್ಮಾಪಕ ರೋಹಿತ್ ಶೆಟ್ಟಿ ಅವರ ನಿವಾಸದ ಹೊರಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ಮುಂಬೈನ ಜುಹುವಿನಲ್ಲಿರುವ  ಈ ಘಟನೆ ಶನಿವಾರ ರಾತ್ರಿ ನಡೆದಿದೆ. ಐದು ಸುತ್ತು ಗುಂಡು ಹಾರಿಸಲಾಗಿದೆ. ಈ ದಾಳಿಯಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ಪೊಲೀಸರು ಧೃಡಪಡಿಸಿದ್ದಾರೆ. ಸದ್ಯ ಈ  ಪ್ರಕರಣದಲ್ಲಿ ನಾಲ್ಕು ಜನರನ್ನು ಬಂಧಿಸಿದ್ದಾರೆ. ಬಂಧಿತರು ಪುಣೆಯ ನಿವಾಸಿಗಳಾಗಿದ್ದಾರೆ. ಈ ದಾಳಿಯ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸಂಪರ್ಕ ಇರಬಹುದೆಂಬ ಶಂಕೆ ವ್ಯಕ್ತವಾಗಿದೆ. ಘಟನೆ ಬಳಿಕ ರೋಹಿತ್ […]

DAKSHINA KANNADA HOME LATEST NEWS STATE

ಆಂಟಿ ಜೊತೆ ಜ್ಯೋತಿಷಿ ಕಮಲಾಕರ ಭಟ್ ಅಕ್ರಮ ಸಂಬಂಧ- ಗಲಾಟೆ: ಓರ್ವನ ಮರ್ಡರ್‌

ಕಾರವಾರ: ಸಿದ್ದಾಪುರ ತಾಲ್ಲೂಕಿನ ಅವರಗೊಪ್ಪ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಯೋತಿಷಿ ಕಮಲಾಕರ ಭಟ್, ಸುಚಿತ್ರಾ ನಾಯ್ಕ ಸೇರಿ ಏಳು ಮಂದಿಯನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜ್ಯೋತಿಷಿ ಕಮಲಾಕರ ಭಟ್, ಸುಚಿತ್ರಾ ನಾಯ್ಕ ಮೃತ ವ್ಯಕ್ತಿಯನ್ನು ವಸಂತ ನಾಯ್ಕ (43) ಎಂದು ಗುರುತಿಸಲಾಗಿದೆ. ಘಟನೆ ವಿವರ ದೃಶ್ಯವಾಹಿನಿಗಳಲ್ಲಿ ಜ್ಯೋತಿಷ್ಯ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ಸಿದ್ದಾಪುರ ತಾಲ್ಲೂಕು ಹೆಮ್ಮನಬೈಲ್ ಗ್ರಾಮದ, ಸದ್ಯ ಶಿವಮೊಗ್ಗದಲ್ಲಿ ವಾಸವಿರುವ ಕಮಲಾಕರ ಭಟ್, ಆತನ ಮನೆಯಲ್ಲಿ ವಾಸವಿದ್ದ ಸುಚಿತ್ರಾ ನಾಯ್ಕ, ಸುಚಿತ್ರಾಳ ತಂದೆ […]

HOME LATEST NEWS

ಮಂಜೇಶ್ವರ: ಅಪ್ಪನಿಂದಲೇ ಮಗಳ ಕೊಲೆ ಪ್ರಕರಣ- ಮತ್ತೋರ್ವ ಸಾವು

ಮಂಜೇಶ್ವರ: ತಾಲೂಕಿನ ತೂಮಿನಾಡು ಹಿಲ್ ಟಾಪ್ ಎಂಬಲ್ಲಿ ಸೋಮವಾರ ಸಂಜೆ ನಡೆದ ಕೌಟುಂಬಿಕ ಕಲಹದಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೇರಿದೆ. ಇರಿತಕ್ಕೆ ಒಳಗಾಗಿ ಮಾರಣಾಂತಿಕ ಗಾಯಗೊಂಡಿದ್ದ ಶೇಕುಂಞಿ ಎಂಬವರು ಮಂಗಳವಾರ ಬೆಳಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ಮಗಳ ಜೊತೆ ಆರೋಪಿ ಫಾರೂಕ್‌ ಶೇಕುಂಞಿ ಅವರ ಪತ್ನಿಯ ಅಕ್ಕನ ಮಗಳು ಜುಮೈಲಾ (17) ಸೋಮವಾರ ಸಂಜೆ ಮೃತ ಪಟ್ಟಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶೇಕುಂಞಿ ಇದೀಗ ಕೊನೆಯುಸಿರೆಳೆದಿದ್ದಾರೆ. ಜುಮೈಲಾ ಅವರ ತಂದೆ ಉಮರ್ ಫಾರೂಕ್ ಕೊಲೆ ಆರೋಪಿಯಾಗಿದ್ದು, ಆತನನ್ನು […]

DAKSHINA KANNADA HOME LATEST NEWS

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

ಬೆಳ್ತಂಗಡಿ: ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಜಾರಿಯಾಗಿದ್ದ ಜಾಮೀನು ರಹಿತ ವಾರೆಂಟ್ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಬಂಟ್ವಾಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ದ್ವೇಷ ಭಾಷಣ ಮಾಡಿದ ಆರೋಪದಡಿ ಬೆಳ್ತಂಗಡಿ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ, ಮಹೇಶ್ ಶೆಟ್ಟಿ ತಿಮರೋಡಿ ಅವರು ನ್ಯಾಯಾಲಯಕ್ಕೆ ಹಾಜರಾಗದೇ ಇದ್ದ ಹಿನ್ನೆಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಬಂಟ್ವಾಳ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ […]

HOME INETRNATIONAL

UAE ಸೇರಿ ಗಲ್ಫ್‌ ರಾಷ್ಟ್ರಗಳ ಭಾರತೀಯರಿಗೆ ಟಿಕೆಟ್‌ ಆಫರ್‌ ಘೋಷಿಸಿದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌

ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಭಾರತ ನಡುವಿನ ವಿಮಾನ ಪ್ರಯಾಣ 2026ರಲ್ಲಿ ಇನ್ನಷ್ಟು ಕೈಗೆಟುವಂತಿದೆ. ಟಾಟಾ ಗ್ರೂಪ್‌ನ ಏರ್ ಇಂಡಿಯಾ ಎಕ್ಸ್‌ಪ್ರೆಸ್, ‘ಎಕ್ಸ್‌ಪ್ರೆಸ್ ಮೋರ್ ಸೇಲ್’ ಎಂಬ ಭಾರೀ ಟಿಕೆಟ್ ಮಾರಾಟವನ್ನು ಆರಂಭಿಸಿದೆ. ಈ ಮಾರಾಟದ ಅಡಿಯಲ್ಲಿ ಯುಎಇ–ಭಾರತ ಮಾರ್ಗಗಳಿಗೆ ಒಂದು ದಿಕ್ಕಿನ ಮೂಲ ದರ ಕೇವಲ AED 320 (ಸುಮಾರು Dh350) ರಿಂದ ಲಭ್ಯವಿದ್ದು, ಲಕ್ಷಾಂತರ ವಲಸಿಗರು, ಕುಟುಂಬಗಳು ಹಾಗೂ ಬಜೆಟ್ ಪ್ರವಾಸಿಗರಿಗೆ ಮಹತ್ತರ ಲಾಭವನ್ನು ನೀಡಲಿದೆ ಎಂದು ನಿರೀಕ್ಷಿಸಲಾಗಿದೆ. ಏರ್ ಇಂಡಿಯಾ […]

DAKSHINA KANNADA HOME

*ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ*

ಮಂಗಳೂರು: “ಜಯಕಿರಣ ಫಿಲಂಸ್ ಲಾಂಛನದಲ್ಲಿ , ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಹಾಗೂ ಕೆ. ಸೂರಜ್ ಶೆಟ್ಟಿ ನಿರ್ದೇಶನದಲ್ಲಿ ಅದ್ಭುತವಾಗಿ ಸಿದ್ಧಗೊಂಡಿರುವ ನಾನ್‌ ವೆಜ್ ತುಳು ಸಿನಿಮಾ ಫೆಬ್ರವರಿ 6 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ, ಈ ಸಿನಿಮಾವನ್ನು ಎಲ್ಲ ಮಲ್ಟಿಪ್ಲೆಕ್ಸ್‌ನಲ್ಲೂ ಕೇವಲ 99 ರೂ.ಗೆ ನೋಡಬಹುದಾಗಿದೆ. ದುಬಾರಿ ಟಿಕೆಟ್‌ ಕೊಟ್ಟು ಸಿನಿಮಾ ನೋಡಲು ಸಾಧ್ಯವಾಗದವರು ಇಂಥದ್ದೊಂದು ಸುಂದರ ಹಾಗೂ ಅತ್ಯುತ್ತಮ ಸಿನಿಮಾವನ್ನು ನೋಡದೆ ಇರಬಾರದು ಎಂಬ ಉದ್ದೇಶದಿಂದ ಕೇವಲ 99 ರೂ. ಟಿಕೆಟ್‌ ನಿಗದಿಪಡಿಸಿದ್ದು, ಇದು ತುಳುಚಿತ್ರರಂಗದಲ್ಲಿ […]

DAKSHINA KANNADA HOME LATEST NEWS

ಎಲ್ಲಾ ಅಂಗಡಿಗಳ ನಾಮಫಲಕಗಳಲ್ಲಿ ಕನ್ನಡ ಹೆಸರು ಕಡ್ಡಾಯ: ದ.ಕ.ಜಿಲ್ಲಾಧಿಕಾರಿ

ಮಂಗಳೂರು: ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು, ಹೊಟೇಲ್ ಸಹಿತ ವಾಣಿಜ್ಯ ಸಂಸ್ಥೆಗಳ ನಾಮಪಲಕಗಳಲ್ಲಿ ಹೆಸರುಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ನಮೂದಿಸಬೇಕು ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್‌ವಿ ಸೂಚಿಸಿದ್ದಾರೆ. ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ದ.ಕ.ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಪಂಗಳು ವಾಣಿಜ್ಯ ಸಂಸ್ಥೆಗಳಿಗೆ ಟ್ರೇಡ್ ಲೈಸೆನ್ಸ್ ಮಂಜೂರು ಮಾಡುವಾಗಲೇ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಎಂಬ ಷರತ್ತು ವಿಧಿಸಿ ಮಂಜೂರು ಮಾಡಬೇಕು. ಈ ಬಗ್ಗೆ ಆಗ್ಗಿಂದಾಗೆ […]

HOME LATEST NEWS STATE

ಪೊಲೀಸ್‌ ಕೆಲಸಕ್ಕಿಂತ ಎಗ್‌ರೈಸ್‌ ಮಾರಿಕೊಂಡು ಬದುಕುವುದು ಉತ್ತಮ: ಪೇದೆ ಪೋಸ್ಟರ್‌ ವೈರಲ್‌

ಬೆಂಗಳೂರು: ಪೊಲೀಸ್‌ ಕೆಲಸಕ್ಕಿಂತ ಎಗ್‌ರೈಸ್‌ ಮಾರಿಕೊಂಡು ಬದುಕುವುದು ಉತ್ತಮ ಎಂದು ವಾಟ್ಸ್‌ಆ್ಯಪ್‌ ಸ್ಟೇಟಸ್ ಹಾಕಿದ್ದ ಪೊಲೀಸ್ ಪೇದೆ ಬ್ರಹ್ಮಾನಂದ ಎಂಬುವರ ಪೋಸ್ಟ್‌ ಚರ್ಚೆಗೆ ಕಾರಣವಾಗಿದೆ. ಇದು ಪೊಲೀಸ್ ಇಲಾಖೆಯ ಕೆಲಸದ ಒತ್ತಡ ಮತ್ತು ರಜೆ ರಹಿತ ದುಡಿಮೆಯ ಬಗ್ಗೆ ಕೆಲವು ಸಿಬ್ಬಂದಿ ಅಸಮಾಧಾನಗೊಂಡಿದ್ದಾರೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಹನುಮಸಾಗರ ಪೊಲೀಸ್ ಠಾಣೆಯ ಪೇದೆ ಬ್ರಹ್ಮಾನಂದ ಎಂಬುವರು, ‘365 ದಿನವೂ ಡ್ಯೂಟಿ, ಒಂದು ದಿನವೂ ರಜೆ ಇಲ್ಲ. ಪೊಲೀಸ್ ಕರ್ತವ್ಯಕ್ಕೆ ಬರುವ ಮುನ್ನ ನೂರು ಬಾರಿ ಯೋಚಿಸಿ, ಬೇರೆ ಇಲಾಖೆಗೆ […]

DAKSHINA KANNADA HOME LATEST NEWS STATE

ಚಾರ್ಮಾಡಿ ಅರಣ್ಯದಲ್ಲಿ ಭಾರೀ ಪ್ರಮಾಣದ ಬೆಂಕಿ- ಹುಲ್ಲುಗಾವಲು ಭಸ್ಮ

ಬೆಳ್ತಂಗಡಿ: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಪಶ್ಚಿಮ ಘಟ್ಟದ ಸೂಕ್ಷ್ಮ ಹುಲ್ಲುಗಾವಲು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ದಕ್ಷಿಣ ಕನ್ನಡ-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿಘಾಟ್​ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಗಾಳಿ ವೇಗವಾಗಿ ಬೀಸುತ್ತಿರುವುದರಿಂದ ಜ್ವಾಲೆ ಹೆಚ್ಚುತ್ತಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಮತ್ತು ಅರಣ್ಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗುತ್ತಿದೆ.