*ರಾಜ್ಯಕ್ಕೆ ನಿರಾಸದಾಯಕ ಮತ್ತು ಪ್ರಗತಿ ಶೂನ್ಯ ಬಜೆಟ್’ : ಸಂಸದ ಕ್ಯಾ. ಬ್ರಿಜೇಶ್ ಚೌಟ*
ಮಂಗಳೂರು: ರಾಜ್ಯದಲ್ಲಿ 17 ಬಾರಿ ಬಜೆಟ್ ಮಂಡಿಸಿ ಅಪಾರ ಆರ್ಥಿಕ ಅನುಭವ ಹೊಂದಿರುವ ಸಿಎಂ ಸಿದ್ದರಾಮಯ್ಯನವರಿಂದ ಇಂತಹ ನಿರಾಸದಾಯಕ ಮತ್ತು ಪ್ರಗತಿ ಶೂನ್ಯ ಬಜೆಟ್ ನಿರೀಕ್ಷಿಸಿರಲಿಲ್ಲ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಇಂದು ಮಂಡಿಸಿರುವ ರಾಜ್ಯ ಬಜೆಟ್ ಕೇವಲ ಅಂಕಿ-ಅಂಶಗಳ ಕಸರತ್ತಾಗಿದ್ದು, ಇದು ರಾಜ್ಯದ ಜನತೆಯನ್ನು ಇನ್ನಷ್ಟು ಸಾಲದ ಸುಳಿಯಲ್ಲಿ ಸಿಲುಕಿಸುವುದರಲ್ಲಿ ಅನುಮಾನವಿಲ್ಲ. ರಾಜ್ಯದ ಒಟ್ಟು ಸಾಲವು ₹8.24 ಲಕ್ಷ ಕೋಟಿ ದಾಟುತ್ತಿರುವುದು ಆತಂಕಕಾರಿಯಾಗಿದ್ದು, ಇಂತಹ ‘ಆರ್ಥಿಕ ಪಾಂಡಿತ್ಯ’ಕ್ಕೆ ರಾಜ್ಯದ ಜನತೆ […]









