Month: March 2026

DAKSHINA KANNADA HOME

*ರಾಜ್ಯಕ್ಕೆ ನಿರಾಸದಾಯಕ ಮತ್ತು ಪ್ರಗತಿ ಶೂನ್ಯ ಬಜೆಟ್’ : ಸಂಸದ ಕ್ಯಾ. ಬ್ರಿಜೇಶ್ ಚೌಟ*

ಮಂಗಳೂರು: ರಾಜ್ಯದಲ್ಲಿ 17 ಬಾರಿ ಬಜೆಟ್ ಮಂಡಿಸಿ ಅಪಾರ ಆರ್ಥಿಕ ಅನುಭವ ಹೊಂದಿರುವ ಸಿಎಂ ಸಿದ್ದರಾಮಯ್ಯನವರಿಂದ ಇಂತಹ ನಿರಾಸದಾಯಕ ಮತ್ತು ಪ್ರಗತಿ ಶೂನ್ಯ ಬಜೆಟ್ ನಿರೀಕ್ಷಿಸಿರಲಿಲ್ಲ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಇಂದು ಮಂಡಿಸಿರುವ ರಾಜ್ಯ ಬಜೆಟ್ ಕೇವಲ ಅಂಕಿ-ಅಂಶಗಳ ಕಸರತ್ತಾಗಿದ್ದು, ಇದು ರಾಜ್ಯದ ಜನತೆಯನ್ನು ಇನ್ನಷ್ಟು ಸಾಲದ ಸುಳಿಯಲ್ಲಿ ಸಿಲುಕಿಸುವುದರಲ್ಲಿ ಅನುಮಾನವಿಲ್ಲ. ರಾಜ್ಯದ ಒಟ್ಟು ಸಾಲವು ₹8.24 ಲಕ್ಷ ಕೋಟಿ ದಾಟುತ್ತಿರುವುದು ಆತಂಕಕಾರಿಯಾಗಿದ್ದು, ಇಂತಹ ‘ಆರ್ಥಿಕ ಪಾಂಡಿತ್ಯ’ಕ್ಕೆ ರಾಜ್ಯದ ಜನತೆ […]

DAKSHINA KANNADA HOME

*ಕರಾವಳಿ ಅಭಿವೃದ್ಧಿಗೆ ಮಹತ್ವ ನೀಡಿದ ರಾಜ್ಯ ಬಜೆಟ್: ಮಾಜಿ ಸಚಿವ ಬಿ. ರಮಾನಾಥ ರೈ*

ಮಂಗಳೂರು: ಕರ್ನಾಟಕ ಸರ್ಕಾರ ಮಂಡಿಸಿರುವ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಯ ಜೊತೆಗೆ ಕರಾವಳಿ ಭಾಗದ ಪ್ರಗತಿಗೆ ವಿಶೇಷ ಒತ್ತು ನೀಡಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ಪ್ರಶಂಸಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಇಂದಿನ ಬಜೆಟ್ ಜನಪರ ಮತ್ತು ಅಭಿವೃದ್ಧಿ ಪರವಾಗಿದೆ. ರೈತರು, ಮಹಿಳೆಯರು, ಯುವಕರು ಹಾಗೂ ಮಧ್ಯಮ ವರ್ಗದ ಜನರ ಆಶೋತ್ತರಗಳಿಗೆ ಪೂರಕವಾದ ಯೋಜನೆಗಳನ್ನು ಘೋಷಿಸಿರುವುದು ಸ್ವಾಗತಾರ್ಹ” ಎಂದಿದ್ದಾರೆ. ಕರಾವಳಿಗೆ ವಿಶೇಷ ಆದ್ಯತೆ: ಕರಾವಳಿ […]

COMMUNITY NEWS DAKSHINA KANNADA HOME LATEST NEWS

ವಿಶ್ವಶಾಂತಿಗಾಗಿ ಕ್ರೈಸ್ತರು ಮಾ.13ರಂದು ಉಪವಾಸ -ಪ್ರಾರ್ಥನೆ ಮಾಡಿ: ಮಂಗಳೂರು ಬಿಷಪ್‌ ಕರೆ

ಮಂಗಳೂರು: ಮಧ್ಯಪ್ರಾಚ್ಯ ಪ್ರದೇಶದಲ್ಲಿ ಇತ್ತೀಚಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ, ದೇಶದ ಕ್ರೈಸ್ತ ಸಮುದಾಯವು ಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಲು ಭಾರತದ ಬಿಷಪರ ಮಂಡಳಿ ಅಧ್ಯಕ್ಷ ಅ.ವಂ. ಫಿಲಿಫ್‌ ನೆರಿ ಕಾರ್ಡಿನಲ್‌ ಫೆರಾವೋ ಅವರು ಎಂದು ಕರೆ ನೀಡಿದ್ದು, ಅದರಂತೆ ಮಂಗಳೂರು ಕಥೊಲಿಕ ಧರ್ಮಪ್ರಾಂತ್ಯದಲ್ಲಿ ಮಾರ್ಚ್ 8 ರಂದು ಶಾಂತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಜೊತೆಗೆ  ಮಾರ್ಚ್ 8ರಿಂದ 14ರವರೆಗೆ ಪ್ರತಿದಿನವೂ ಶಾಂತಿಗಾಗಿ ವಿಶೇಷವಾಗಿ ಪವಿತ್ರ ಜಪಸರ ಪ್ರಾರ್ಥನೆ ಮಾಡುವಂತೆ  ಮಂಗಳೂರು ಧರ್ಮಪ್ರಾಂತ್ಯದ ಬಿಷಪ್‌ ಅ.ವಂ.ಡಾ. ಪೀಟರ್‌ ಪಾವ್ಲ್‌ ಸಲ್ಡಾನ […]

DAKSHINA KANNADA HOME LATEST NEWS STATE

Karnataka Budget: ಅಡಿಕೆ ಬೆಳೆಗಾರರಿಗೆ ಶುಭ ಸುದ್ದಿ ಕೊಟ್ಟ ಸಿದ್ದರಾಮಯ್ಯ

ಬೆಂಗಳೂರು:  2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ಘೋಷಣೆ ಮಾಡಲಾಗಿದೆ. ಅಡಿಕೆ ಬೆಳೆಗೆ ತೀವ್ರ ಹಾನಿ ಉಂಟುಮಾಡುತ್ತಿರುವ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳನ್ನು ನಿಯಂತ್ರಿಸುವ ಸಲುವಾಗಿ ಅಧ್ಯಯನ ಚಟುವಟಿಕೆಗಳಿಗೆ 10 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಸರ್ಕಾರ ಬಜೆಟ್​​ನಲ್ಲಿ ಘೋಷಿಸಿದೆ. ಬಜೆಟ್ ಭಾಷಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಡಿಕೆ ಬೆಳೆಯ ವಿವಿಧ ರೋಗಗಳು ಹಾಗೂ ತೆಂಗು ಬೆಳೆಗೆ ಕಾಣಿಸಿಕೊಳ್ಳುವ ಕಪ್ಪು ತಲೆ ಹುಳು ಮತ್ತು ಬಿಳಿ ನೊಣಗಳ […]

DAKSHINA KANNADA HOME LATEST NEWS STATE

Karnataka Budget: BPL ಕಾರ್ಡುದಾರರಿಗೆ ಇಂದಿರಾ ಆಹಾರ ಕಿಟ್- ಏನಿರುತ್ತೆ ಈ ಕಿಟ್‌ನಲ್ಲಿ?

ಬೆಂಗಳೂರು: ಕರ್ನಾಟಕ ಸರ್ಕಾರವು 2026ರ ಬಜೆಟ್‌ನಲ್ಲಿ ಬಿಪಿಎಲ್ ಕಾರ್ಡ್​​​ದಾರರಿಗೆ ಮಹತ್ವದ ಯೋಜನೆ ಘೋಷಿಸಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ ರಾಜ್ಯದ 4.54 ಕೋಟಿ ಬಡ ಫಲಾನುಭವಿಗಳಿಗೆ 5 ಕೆಜಿ ಹೆಚ್ಚುವರಿ ಅಕ್ಕಿಯನ್ನು ಯಶಸ್ವಿಯಾಗಿ ವಿತರಿಸಲಾಗುತ್ತಿತ್ತು. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆಗೆ 17,167 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಈಗ, ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ, ಪ್ರತಿ ತಿಂಗಳು ಪೌಷ್ಟಿಕಾಂಶಯುಳ್ಳ ಇಂದಿರಾ ಆಹಾರ ಕಿಟ್ ವಿತರಿಸಲು ಸರ್ಕಾರ ಉದ್ದೇಶಿಸಿದೆ. ಈ ಕಿಟ್‌ನಲ್ಲಿ ತೊಗರಿಬೇಳೆ, ಸಕ್ಕರೆ, ಉಪ್ಪು ಮತ್ತು […]

DAKSHINA KANNADA HOME LATEST NEWS STATE

Karnataka Budget Update: ದಕ್ಷಿಣಕನ್ನಡದ ಮಾಣಿ ಹಾಗೂ ಸಜಿಪನಡು ನೂತನ ಪೊಲೀಸ್ ಠಾಣೆ

ಮಂಗಳೂರು:  ಇಂದು ಸಿದ್ದರಾಮಯ್ಯ 17ನೇ ದಾಖಲೆಯ ಬಜೆಟ್ ಮಂಡನೆ ಮಾಡುತ್ತಿದ್ದು, ಒಳಾಡಳಿತ ಇಲಾಖೆಯಡಿ 12 ನೂತನ ಪೊಲೀಸ್‌ ಠಾಣೆ ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಅದರನ್ವಯ ದ.ಕ ಜಿಲ್ಲೆಗೆ ಎರಡು ಪೊಲೀಸ್‌ ಠಾಣೆ ದೊರಕಿದೆ.  ಉಳಿದಂತೆ ರಾಜ್ಯದಲ್ಲಿ ಹೊಸದಾಗಿ ಪ್ರಾರಂಭವಾಗಲಿರುವ ಪೊಲೀಸ್ ಠಾಣೆಗಳ ವಿವರ ಇಲ್ಲಿದೆ. 1 ದಕ್ಷಿಣ ಕನ್ನಡ ಮಾಣಿ ಪೊಲೀಸ್ ಠಾಣೆ 2 ದಕ್ಷಿಣ ಕನ್ನಡ ಸಜಿಪನಡು ಪೊಲೀಸ್ ಠಾಣೆ 3 ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ಸಂಚಾರ ಪೊಲೀಸ್ ಠಾಣೆ 4 ಬೆಳಗಾವಿ ಯರಗಟ್ಟಿ […]

DAKSHINA KANNADA

ನಗರದಲ್ಲಿ ಮೊದಲ ಪೆಟ್ ಡಯಾಲಿಸಿಸ್ ಸೌಲಭ್ಯ- ಕುಳಶೇಖರದ ಲಿಟಲ್ ಪಾಸ್ ವೆಟರಿನರಿ ಕ್ಲಿನಿಕ್‌ನಲ್ಲಿ ಆರಂಭ*

ಮಂಗಳೂರು: ಮಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಕುಪ್ರಾಣಿಗಳಿಗೆ ಅತ್ಯಾವಶ್ಯಕವಾದ ಚಿಕಿತ್ಸಾ ಸೌಲಭ್ಯವನ್ನು ಒದಗಿಸುವ ಮಹತ್ವದ ಹೆಜ್ಜೆಯಾಗಿ, ಕುಳಶೇಖರದಲ್ಲಿರುವ ಲಿಟಲ್ ಪಾಸ್ ವೆಟರಿನರಿ ಕ್ಲಿನಿಕ್ ನಲ್ಲಿ ಪೆಟ್ ಡಯಾಲಿಸಿಸ್ ಯಂತ್ರವನ್ನು ಅಧಿಕೃತವಾಗಿ ಆರಂಭಿಸಲಾಯಿತು. ಮೂತ್ರಪಿಂಡ ಸಂಬಂಧಿತ ತೊಂದರೆಗಳಿಂದ ಬಳಲುವ ಸಾಕುಪ್ರಾಣಿಗಳಿಗೆ ಇದು ಜೀವ ರಕ್ಷಕ ಚಿಕಿತ್ಸೆಯಾಗಿ ಪರಿಣಮಿಸುವ ನಿರೀಕ್ಷೆಯಿದೆ. ಈ ಡಯಾಲಿಸಿಸ್ ಘಟಕವನ್ನು ವಿನ್ಸೆಂಟ್ ಜೋಸೆಫ್ ನೀಲಿಯಾರ (ಶಾಜು) ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು, ವೈದ್ಯರು ಹಾಗೂ ರೋಟರಿ ಸಂಘದ ಸದಸ್ಯರು ಉಪಸ್ಥಿತರಿದ್ದರು. ಈ ಉಪಕ್ರಮವನ್ನು ಭಾಜಪ […]

DAKSHINA KANNADA HOME LATEST NEWS STATE

Karnataka Budget Update: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ

ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬಜೆಟ್ ಅಧಿವೇಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಹಾಗೂ ಅಡ್ಡಪರಿಣಾಮ ತಡೆಗಟ್ಟುವ ಹಿನ್ನೆಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದರು. ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ ಸಿ ಕೇಂದ್ರಗಳಲ್ಲಿ ಓರ್ವ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರ ನೇಮಕ ಮಾಡಲಾಗುವುದು ಎಂದು ಸಿದ್ದರಾಮಯ್ಯ ಪ್ರಕಟಿಸಿದರು.

DAKSHINA KANNADA HOME LATEST NEWS

ನಾಳೆ ದಕ್ಷಿಣ ಕನ್ನಡ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 7 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಮಾರ್ಚ್ 7 ಸಂಜೆ 5:45 – ಮಂಗಳೂರು ವಿಮಾನ ನಿಲ್ದಾಣ ಆಗಮನ, 6:30 – ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲು ಎಂಬಲ್ಲಿ 15ನೇ ಹೊನಲು ಬೆಳಕಿನ ಮೂಡೂರು ಪಡೂರು ಜೋಡುಕರೆ ಬಯಲು ಕಂಬಳ ಕಾರ್ಯಕ್ರಮ, ರಾತ್ರಿ 8.40- ಮುಖ್ಯಮಂತ್ರಿಗಳು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.

DAKSHINA KANNADA HOME LATEST NEWS

ಮಂಗಳೂರು: ಯುವತಿಯರಿಗೆ ಗಾಂಜಾ ಸಪ್ಲೈ ಮಾಡುತ್ತಿದ್ದ 6 ಪೆಡ್ಲರ್‌ಗಳ ಬಂಧನ

ಮಂಗಳೂರು: ನಗರದ ಪಾಂಡೇಶ್ವರ ಮತ್ತು ಬಂದರ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಆರು ಮಂದಿ ಡ್ರಗ್ಸ್ ಪೆಡ್ಲರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಪ್ರಸಕ್ತ ಪಾಂಡೇಶ್ವರದಲ್ಲಿ ವಾಸವಾಗಿರುವ ಸಯ್ಯದ್ ಅಫ್ರಿದಿ (26) ಮತ್ತು ಅಹ್ಮದ್ ಅಲಿ ಅರ್ಷಾನ್ (22) ಹಾಗೂ ನಗರದ ಬಲ್ಮಠದ ಮಕ್ಸೂದ್ ಸಾಗ್ (23), ಕೇರಳದ ಕೊಟ್ಟಾಯಂನ ಫೆಲಿಕ್ಸ್ ಪಿ.ಜೊಸೆಫ್ (20)ರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿ 53.87 ಗ್ರಾಂ ಎಂಡಿಎಂಎ, 103.02 ಗ್ರಾಂ ಹೈಡ್ರೋವಿಡ್ ಗಾಂಜ ಹಾಗೂ […]