*ಪಶು ವೈದ್ಯಕೀಯ ಕಾಲೇಜು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭಿಸಲು ಪ್ರಯತ್ನ : ಸಚಿವ ವೆಂಕಟೇಶ್*
ಮಂಗಳೂರು,.ಮಾ.04: ಕಡಬ ತಾಲೂಕು ಕೊೈಲದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪಶುವೈದ್ಯಕೀಯ ಕಾಲೇಜಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ತರಗತಿಗಳನ್ನು ಪ್ರಾರಂಭಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪಶುಸಂಗೋಪನೆ ಮತ್ತು ರೇಶ್ಮೆ ಸಚಿವ ಕೆ. ವೆಂಕಟೇಶ್ ಹೇಳಿದ್ದಾರೆ. ಅವರು ಮಂಗಳವಾರ ಕೊೈಲ ಪಶುವೈದ್ಯಕೀಯ ಕಾಲೇಜು ಹಾಗೂ ಜಾನುವಾರು ತಳಿ ಸಂವರ್ಧನಾ ಮತ್ತು ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಇಲಾಖಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಕೊೈಲ ಪಶುವೈದ್ಯಕೀಯ ಕಾಲೇಜು ಕಟ್ಟಡಕ್ಕೆ 2016ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸಿದ್ದು, ಪ್ರಸ್ತುತ […]











