Month: March 2026

DAKSHINA KANNADA HOME

*ಪಶು ವೈದ್ಯಕೀಯ ಕಾಲೇಜು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭಿಸಲು ಪ್ರಯತ್ನ : ಸಚಿವ ವೆಂಕಟೇಶ್*

ಮಂಗಳೂರು,.ಮಾ.04: ಕಡಬ ತಾಲೂಕು ಕೊೈಲದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪಶುವೈದ್ಯಕೀಯ ಕಾಲೇಜಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ತರಗತಿಗಳನ್ನು ಪ್ರಾರಂಭಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪಶುಸಂಗೋಪನೆ ಮತ್ತು ರೇಶ್ಮೆ ಸಚಿವ ಕೆ. ವೆಂಕಟೇಶ್ ಹೇಳಿದ್ದಾರೆ. ಅವರು ಮಂಗಳವಾರ ಕೊೈಲ ಪಶುವೈದ್ಯಕೀಯ ಕಾಲೇಜು ಹಾಗೂ ಜಾನುವಾರು ತಳಿ ಸಂವರ್ಧನಾ ಮತ್ತು ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಇಲಾಖಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಕೊೈಲ ಪಶುವೈದ್ಯಕೀಯ ಕಾಲೇಜು ಕಟ್ಟಡಕ್ಕೆ 2016ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸಿದ್ದು, ಪ್ರಸ್ತುತ […]

DAKSHINA KANNADA HOME LATEST NEWS

“ಉಳ್ಳಾಲ ಮಸೀದಿ ಹತ್ತಿರ ಬಾಂಬ್‌ ಬ್ಲಾಸ್ಟ್‌ ಮಾಡ್ತೀನಿ” ಎಂದವನ ಹೆಡೆಮುರಿ ಕಟ್ಟಿದ ಪೊಲೀಸರು

ಮಂಗಳೂರು: ಉಳ್ಳಾಲ ಮಸೀದಿ ಹತ್ತಿರ ಬಾಂಬ್‌ ಬ್ಲಾಸ್ಟ್‌ ಮಾಡ್ತೀನಿ ಎಂದು ಪ್ರಚೋದನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್‌ ಮಾಡಿದ್ದವನನ್ನು ಮಂಗಳೂರು ನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಯನ್ನು ಶಂಕರ್ ಮಸ್ತಪ್ಪ ಮೊಗೆರ್ (35) ಎಂದು ಗುರುತಿಸಲಾಗಿದೆ. ಈತ ಉತ್ತರ ಕನ್ನಡ ಮೂಲದ ಭಟ್ಕಳದವ ಎಂದು ಮಾಹಿತಿ ದೊರೆತಿದೆ. ಇನ್‌ಸ್ಟಾಗ್ರಾಂನ ಪೋಸ್ಟ್‌ಗೆ “Support madi bro Ullal masjid hathira bomb blast madthini” ಎಂಬುದಾಗಿ ಇನ್‌ಸ್ಟಾಗ್ರಾಂನಲ್ಲಿ ಕಮೆಂಟ್‌ ಮಾಡಿದ್ದ. ಈ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ಅಲರ್ಟ್‌ […]

DAKSHINA KANNADA HOME LATEST NEWS

RSSನ ಹಿರಿಯ ಕಾರ್ಯಕರ್ತ ಎಂ. ಸತೀಶ್ ಪ್ರಭು ನಿಧನ

ಮಂಗಳೂರು: ದಕ್ಷಿಣ ಕನ್ನಡದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಮತ್ತು ಬಿಜೆಪಿ ಮುಖಂಡರಾಗಿದ್ದ ಸತೀಶ್ ಪ್ರಭು ಅವರು ಇಂದು ನಿಧನ ಹೊಂದಿದ್ದಾರೆ. ಬೆಳಗ್ಗೆ ಏಕಾಏಕಿ ಬ್ರೈನ್‌ ಹ್ಯಾಮರೇಜ್ ಗೆ ಒಳಗಾಗಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ ವೇಳೆಗೆ ನಿಧನ ಹೊಂದಿದ್ದಾರೆ. ಸತೀಶ್ ಪ್ರಭು ಅವರು ಪ್ರಸ್ತುತ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವಕ್ತಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಂಗಳೂರಿನ ಕಾರ್‌ ಸ್ಟ್ರೀಟ್ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿಯಾಗಿದ್ದರು. ಸಂಘನಿಕೇತನದಲ್ಲಿ ಕೇಶವ […]

DAKSHINA KANNADA

*ಡಿಸೆಂಬರ್ ನಲ್ಲಿ ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಲೋಕಾರ್ಪಣೆ: ಐಕಳ ಹರೀಶ್ ಶೆಟ್ಟಿ*

ಮಂಗಳೂರು: ನಿರಂತರ ಸಮಾಜ ಕಾರ್ಯಗಳಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ತೊಡಗಿಸಿಕೊಂಡಿದೆ. ಮುಲ್ಕಿಯಲ್ಲಿ ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಕೆಲಸ ತ್ವರಿತವಾಗಿ ನಡೆಯುತ್ತಿದೆ. ಮಹಾದಾನಿ ಡಾ ಕನ್ಯಾನ ಸದಾಶಿವ ಶೆಟ್ಟಿಯವರ ಆಶಯ, ಆಶೀರ್ವಾದಿಂದ ಸಂಕೀರ್ಣದ ಕೆಲಸ ಪ್ರಗತಿಯಲ್ಲಿದೆ. ಸಂಕೀರ್ಣದಲ್ಲಿ ಶ್ರೀಮತಿ ಶಶಿರೇಖಾ ಆನಂದ ಶೆಟ್ಟಿ ಅವರ ಹೆಸರಿನಲ್ಲಿ ವೇದಿಕೆ ಇದೆ. ಇದರ ಜೊತೆಗೆ ಕಿರು ಸಭಾಂಗಣ, ಧರ್ಮಚಾವಡಿ, ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಯೂ ಇದೆ. ಡಿಸೆಂಬರ್ ತಿಂಗಳಲ್ಲಿ “ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ” […]

DAKSHINA KANNADA HOME

*ಗಲ್ಫ್ ಯುದ್ಧ : ನೆರವು ಪಡೆಯಲು ದ.ಕ ಜಿಲ್ಲಾಡಳಿತ ಸೂಚನೆ*

ಮಂಗಳೂರು, ಮಾ.02: ಮಧ್ಯ ಪ್ರಾಚ್ಯ ಹಾಗೂ ಗಲ್ಫ್ ದೇಶಗಳಲ್ಲಿ ನಡೆಯುವ ಯುದ್ದದ ಕಾರಣ ಅಪಾರ ಪ್ರಮಾಣದ ಸಾವು ನೋವು ಸಂಭವಿಸಿದೆ. ಈ ದೇಶಗಳಲ್ಲಿ ಕರ್ನಾಟಕದ ಹಲವರು ಸಿಲುಕಿಕೊಂಡಿರುವ ಮಾಹಿತಿಯಿದೆ. ದಕ್ಷಿಣ ಕನ್ನಡ ಜಿಲ್ಲೆಯವರು ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿದ್ದರೆ ಈ ದೇಶಗಳಲ್ಲಿರುವ ಕಂಟ್ರೋಲ್ ರೂಂ ಗೆ ಅಥವಾ ದಕ್ಷಿಣ ಕನ್ನಡ ಜಿಲ್ಲೆಯ ಕಛೇರಿಯ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ ದೂರವಾಣಿ ಕರೆಮಾಡಿ ಮಾಹಿತಿ ನೀಡಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. ಭಾರತೀಯ ರಾಯಭಾರ ಕಛೇರಿಯ […]

HOME

*ಮಂಗಳೂರಿನ ಅಸ್ಮಿತ ಸ್ವಿಮ್ಮಿಂಗ್ ಲೀಗ್: ಉದ್ಘಾಟಿಸಿದ ದ್ರೋಣಾಚಾರ್ಯ ಪುರಸ್ಕೃತ ತರಬೇತುದಾರ ಶ್ರೀ ಪ್ರದೀಪ್ ಕುಮಾರ್*

ಮಂಗಳೂರು : ಮಹಿಳಾ ಕ್ರೀಡಾಪಟುಗಳು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು ಹಾಗೂ ಮಹಿಳೆಯರಿಂದ ಕ್ರೀಡಾ ರಂಗಕ್ಕೆ ಹೆಚ್ಚಿನ ಕೊಡುಗೆ ಸಿಗುವಂತಾಗಬೇಕು ಎಂದು ದ್ರೋಣಾಚಾರ್ಯ ಪುರಸ್ಕೃತ, ಈಜು ಕ್ರೀಡೆಯಲ್ಲಿ ಹಲವಾರು ಒಲಂಪಿಯನ್ ಈಜು ಪಟುಗಳನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದ ತರಬೇತುದಾರ ಶ್ರೀ ಪ್ರದೀಪ್ ಕುಮಾರ್ ಹೇಳಿದರು. ಅವರು ಮಾರ್ಚ್ ಒಂದರಂದು ಮಂಗಳೂರಿನ ಎಮ್ಮೆಕೆರೆಯ ಸ್ಮಾರ್ಟ್ ಸಿಟಿ ಈಜುಕೊಳದಲ್ಲಿ ಜರುಗಿದ ಅಸ್ಮಿತ 2026 ಈಜು ಸ್ಪರ್ಧೆಯ ಲೀಗ್ ನ್ನು ಉದ್ಘಾಟಿಸಿದರು. ಸ್ವಿಮ್ಮಿಂಗ್ ಫೆಡರೇಶನ್ ಆಫ್ ಇಂಡಿಯಾ ಹಾಗೂ ಖೇಲೋ ಇಂಡಿಯಾ ಜಂಟಿಯಾಗಿ […]

HOME

*ಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಜಿಲ್ಲೆ 317ಡಿ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬೃಹತ್ ಹೋರ್ಡಿಂಗ್ ಅನಾವರಣ*

ಮಂಗಳೂರು: ಮಹಿಳೆಯರ ಸಾಧನೆಗಳನ್ನು ಗೌರವಿಸುವ ಮತ್ತು ಲಿಂಗ ಸಮಾನತೆ ಹಾಗೂ ಮಹಿಳಾ ಸಬಲೀಕರಣವನ್ನು ಉತ್ತೇಜಿಸುವ ಉದ್ದೇಶದಿಂದ ಲಯನ್ಸ್ ಕ್ಲಬ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317ಡಿ ವತಿಯಿಂದ ನಗರದ ಪಿವಿಎಸ್ ಸರ್ಕಲ್‌ನಲ್ಲಿ ಬೃಹತ್ ಹೋರ್ಡಿಂಗ್ ಅನ್ನು ಅನಾವರಣಗೊಳಿಸಲಾಯಿತು. ಹೋರ್ಡಿಂಗ್ ಉದ್ಘಾಟಿಸಿ ಮಾತನಾಡಿದ ಲಯನ್ಸ್ ಜಿಲ್ಲಾ ಗವರ್ನರ್ ಕುಡ್ಪಿ ಅರವಿಂದ್ ಶೆಣೈ ಅವರು, “ಮಹಿಳೆಯರು ತಮ್ಮ ಪ್ರತಿಭೆ ಮತ್ತು ಸಂಕಲ್ಪದಿಂದ ಸಮಾಜದ ಪ್ರತಿಯೊಂದು ಕ್ಷೇತ್ರದಲ್ಲೂ ಮುನ್ನಡೆ ಸಾಧಿಸುತ್ತಿದ್ದಾರೆ. ಕುಟುಂಬದಿಂದ ರಾಷ್ಟ್ರದವರೆಗೆ ಅವರ ಪಾತ್ರ ಅನನ್ಯ. ಮಹಿಳೆಯರ ಈ ಮಹತ್ವದ ಕೊಡುಗೆಯನ್ನು ಗೌರವಿಸಲು […]

DAKSHINA KANNADA HOME LATEST NEWS

ನಾಳೆ ಚಂದ್ರಗ್ರಹಣ: ಧರ್ಮಸ್ಥಳದಲ್ಲಿ ಪೂಜಾ ಸಮಯ ಬದಲಾವಣೆ

ಧರ್ಮಸ್ಥಳ : ಮಾರ್ಚ್ 3ಕ್ಕೆ ಚಂದ್ರಗ್ರಹಣ ಸಂಭವಿಸುತ್ತಿದ್ದು, ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ಪೂಜಾ ಸಮಯ ಬದಲಾವಣೆ ಆಗಿದೆ. ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳ ದೇವರ ದರ್ಶನ ಸಮಯವನ್ನು ತಾತ್ಕಾಲಿಕವಾಗಿ ಬದಲಾಯಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿಯು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಮಾರ್ಚ್ 3 ರಂದು ಮಧ್ಯಾಹ್ನ 1:30ರವರೆಗೆ ಮಾತ್ರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿರುತ್ತದೆ. ರಕ್ತ ಚಂದ್ರಗ್ರಹಣದ ಅವಧಿ ಮುಗಿದ ನಂತರ, ಅಂದರೆ ರಾತ್ರಿ 7:30ರಿಂದ ಪುನಃ ದೇವರ ದರ್ಶನವನ್ನು ಪ್ರಾರಂಭಿಸಲಾಗುವುದು ಎಂದು […]

DAKSHINA KANNADA HOME LATEST NEWS

ಇಸ್ರೇಲ್-ಇರಾನ್ ಸಂಘರ್ಷ: ಮಂಗಳೂರು ವಿಮಾನ ಹಾರಾಟದಲ್ಲಿ ವ್ಯತ್ಯಯ

ಮಂಗಳೂರು: ಇಸ್ರೇಲ್ ಇರಾನ್ ಸಂಘರ್ಷದ ಹಿನ್ನೆಲೆ ಮಂಗಳೂರು ವಿಮಾನ ನಿಲ್ದಾಣದಿಂದ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ. ನಿಗದಿಯಾಗಿದ್ದ ಏರ್‌ ಇಂಡಿಯಾ, ಇಂಡಿಗೋ ವಿಮಾನಗಳ ಹಾರಾಟವನ್ನ ಹಠಾತ್‌ ರದ್ದುಗೊಳಿಸಲಾಗಿದೆ. ಪ್ರಮುಖವಾಗಿ ದುಬೈಗೆ ತೆರಳುವ ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ವಿದೇಶಕ್ಕೆ ಪ್ರಯಾಣ ಮಾಡುವ ಪ್ರಯಾಣಿಕರು ಆಯಾ ವಿಮಾನ ಸಂಸ್ಥೆಗಳು ಖಚಿತಪಡಿಸಿದ ಬಳಿಕವಷ್ಟೇ ವಿಮಾನ ನಿಲ್ದಾಣಕ್ಕೆ ಆಗಮಿಸಿ ಎಂದು ವಿಮಾನ ನಿಲ್ದಾಣ ಪ್ರಾಧಿಕಾರಿಗಳು ಮನವಿ ಮಾಡಿವೆ. ಮಂಗಳೂರು ಏರ್‌ಪೋರ್ಟ್‌ನಿಂದ ರದ್ದಾದ ವಿಮಾನಗಳು 9.25 ರ ಮಂಗಳೂರು – ಮಸ್ಕತ್ ಏರ್ […]

HOME INETRNATIONAL LATEST NEWS

ಜೆರುಸಲೆಮ್ ನಗರದ ಮೇಲೆ ಇರಾನ್‌ನಿಂದ ಕ್ಷಿಪಣಿ ದಾಳಿ

ಜೆರುಸಲೆಮ್: ಇರಾನ್‌ ನಿಂದ ಉಡಾಯಿಸಲಾದ ಕ್ಷಿಪಣಿಗಳು ಇಸ್ರೇಲ್‌ ಜೆರುಸಲೆಮ್ ನಗರದ ಮೇಲೆ ನೇರ ದಾಳಿ ನಡೆಸಿವೆ. ಇರಾನ್‌ನಿಂದ ಇಸ್ರೇಲ್ ಕಡೆಗೆ ಕ್ಷಿಪಣಿಗಳು ಹಾರಿಸಲ್ಪಟ್ಟಿರುವುದನ್ನು ಇಸ್ರೇಲ್ ಸೇನೆ ಪತ್ತೆಹಚ್ಚಿದ ಬಳಿಕ ಪಶ್ಚಿಮ ಜೆರುಸಲೆಮ್‌ ನಲ್ಲಿ ವಾಯುದಾಳಿ ಎಚ್ಚರಿಕಾ ಸೈರನ್‌ಗಳು ಮೊಳಗಿದವು. ಇದಾದ ನಂತರ ನಗರದಲ್ಲಿ ಜೋರಾಗಿ ಸರಣಿ ಸ್ಫೋಟಗಳ ಶಬ್ದ ಕೇಳಿಬಂದಿದೆ ಎಂದು ವರದಿಯಾಗಿದೆ. “ಸ್ವಲ್ಪ ಸಮಯದ ಹಿಂದೆ, ಇರಾನ್‌ ನಿಂದ ಇಸ್ರೇಲ್ ಕಡೆಗೆ ಉಡಾಯಿಸಲಾದ ಕ್ಷಿಪಣಿಗಳನ್ನು ನಾವು ಗುರುತಿಸಿದ್ದೇವೆ,” ಎಂದು ಇಸ್ರೇಲ್ ಸೇನೆ ಹೇಳಿಕೆಯಲ್ಲಿ ತಿಳಿಸಿದೆ. “ಅಪಾಯವನ್ನು […]