Month: March 2026

DAKSHINA KANNADA HOME LATEST NEWS

ಮಂಗಳೂರು ಪೊಲೀಸರ ಹೆಸರಲ್ಲೇ ನಕಲಿ ವೆಬ್‌ಸೈಟ್….!

ಮಂಗಳೂರು: ಪೊಲೀಸ್ ಇಲಾಖೆಯ ಹೆಸರನ್ನೇ ಬಳಸಿಕೊಂಡು ಸೈಬರ್ ವಂಚಕರು ನಕಲಿ ವೆಬ್‌ಸೈಟ್ ಸೃಷ್ಟಿಸಿ ಆನ್‌ಲೈನ್ ಜೂಜಾಟ ನಡೆಸುತ್ತಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಈ ಸಂಬಂಧ ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು ನಗರದ ಸೈಬರ್ ಕ್ರೈಂ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರೇವಣ ಸಿದ್ದಪ್ಪ ಅವರು ನೀಡಿದ ದೂರಿನನ್ವಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ದಿನಾಂಕ 25-03-2026ರಂದು ಸಂಜೆ ಸೈಬರ್ ವಿಭಾಗದ ಅಧಿಕಾರಿಗಳು ಗೂಗಲ್ ಪರಿಶೀಲಿಸುತ್ತಿದ್ದಾಗ, ‘ಮಂಗಳೂರು ಸಿಟಿ ಪೊಲೀಸ್’ ಹೆಸರಿನಲ್ಲಿ ನಕಲಿ […]

COMMUNITY NEWS DAKSHINA KANNADA HOME

ರೊಸಾರಿಯೊ ಕ್ಯಾಥೆಡ್ರೆಲ್‌ನಲ್ಲಿ ಬಿಷಪ್‌ರಿಂದ ‘ಕ್ರಿಸಮ್ ಬಲಿಪೂಜೆ’

ಮಂಗಳೂರು: ಮುಂಬರುವ ಪವಿತ್ರ ವಾರದ ಆಚರಣೆಗಳಿಗೆ ಮುನ್ನುಡಿಯಾಗಿ ಮಂಗಳೂರು ಧರ್ಮಕ್ಷೇತ್ರದ ವಾರ್ಷಿಕ ‘ಕ್ರಿಸಮ್ ಬಲಿಪೂಜೆ’(ತೈಲ ಪವಿತ್ರಿಕರಿಸುವ ಪೂಜೆ) ಗುರುವಾರ ಸಂಜೆ ನಗರದ ರೊಸಾರಿಯೊ ಕ್ಯಾಥೆಡ್ರೆಲ್‌ನಲ್ಲಿ ಭಕ್ತಿಪೂರ್ವಕವಾಗಿ ನೆರವೇರಿತು.ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಪರಮ ಪೂಜ್ಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಈ ಪವಿತ್ರ ಬಲಿಪೂಜೆಯ ನೇತೃತ್ವ ವಹಿಸಿದ್ದರು. ಈ ಪ್ರಧಾನ ಧಾರ್ಮಿಕ ವಿಧಿಯಲ್ಲಿ, ಮುಂಬರುವ ವರ್ಷದಲ್ಲಿ ಧರ್ಮಕ್ಷೇತ್ರದಾದ್ಯಂತ ಎಲ್ಲಾ ಚರ್ಚ್‌ಗಳಲ್ಲಿ ವಿವಿಧ ಸಂಸ್ಕಾರಗಳನ್ನು ನೀಡಲು ಬಳಸುವ ಪವಿತ್ರ ತೈಲಗಳನ್ನು ಧರ್ಮಾಧ್ಯಕ್ಷರು ಆಶೀರ್ವದಿಸಿದರು. ಇದೇ ವೇಳೆ ಧರ್ಮಕ್ಷೇತ್ರದ ಎಲ್ಲಾ […]

DAKSHINA KANNADA

*ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಅಗತ್ಯ-ಮಮತಾ ಗಟ್ಟಿ*

ಮಂಗಳೂರು,ಮಾ.26;ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಅಗತ್ಯ,ಜಿಲ್ಲೆಯ ಮಹಿಳೆಯರು ತಮ್ಮ ಕುಟುಂಬದ ಆರ್ಥಿಕ ನಿರ್ವಹಣೆಯನ್ನು ಕಷ್ಟಪಟ್ಟು ಎಚ್ಚರಿಕೆ ಯಿಂದ ಮಾಡುತ್ತಾ ಬಂದಿದ್ದಾರೆ ಕರ್ನಾಟಕ ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ತಿಳಿಸಿದ್ದಾರೆ. ಅವರು ಮಹಿಳಾ ದಿನಾಚರಣೆಯ ಅಂಗವಾಗಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಕಛೇರಿ ಸಭಾಂಗಣ ಗುರುವಾರ ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್ ಮಂಗಳೂರುಇದರ ಸಂಯುಕ್ತ ಆಶ್ರಯ ದಲ್ಲಿಮಹಿಳಾ ದಿನಾಚರಣೆ ಮತ್ತುಮಹಿಳಾ […]

DAKSHINA KANNADA

*ಏ.4ಕ್ಕೆ ಗುರುಪುರ ಮೂಳೂರು- ಅಡ್ಡೂರು ಜೋಡುಕರೆ ಕಂಬಳ ಇನಾಯತ್ ಅಲಿ*

ಮಂಗಳೂರು: ಗುರುಪುರದ ಮಾಣಿಬೆಟ್ಟುವಿನಲ್ಲಿ ಏ.4ರ ಶನಿವಾರದಂದು 3ನೇ ವರ್ಷದ ಹೊನಲು ಬೆಳಕಿನ ಮೂಳೂರು-ಅಡ್ಡೂರು ಜೋಡುಕರೆ ಕಂಬಳವನ್ನು ವಿಜೃಂಭಣೆಯಿಂದ ಆಯೋಜಿಸಲಾಗಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಇನಾಯತ್ ಅಲಿ ತಿಳಿಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಕಂಬಳದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿ, ಕಂಬಳ ಅನ್ನುವಂತಹುದು ಕೇವಲ ಒಂದು ಕ್ರೀಡೆಯಲ್ಲ, ಇದು ಈ ನೆಲೆದ ಸಂಸ್ಕೃತಿ, ಅಸ್ಮಿತೆಯಾಗಿದೆ. ಗುರುಪುರ ಕಂಬಳೋತ್ಸವವನ್ನು ಜಾತಿ, ಮತ, ಪಕ್ಷ ಭೇದ ಮರೆತು ಎಲ್ಲರೂ ಒಂದಾಗಿ ಆಚರಿಸುವ ಮೂಲಕ ನಮ್ಮ ಪರಂಪರೆಯನ್ನು ಮುಂದಿನ […]

DAKSHINA KANNADA HOME

*ಮಂಗಳೂರು ಪಾಲ್ದನೆ ನೆಕ್ಕರೆ ಭಾಗದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಸೆರೆ*

ಮಂಗಳೂರು: ಕಳೆದ ಕೆಲವು ದಿನಗಳಿಂದ ಪಾಲ್ದನೆ ಸಮೀಪದ ನೆಕ್ಕರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿದ್ದ ಬೃಹತ್ ಗಾತ್ರದ ಚಿರತೆಯು ಅಂತಿಮವಾಗಿ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ. ನೆಕ್ಕರೆ ಮತ್ತು ಆಸುಪಾಸಿನ ಜನವಸತಿ ಪ್ರದೇಶಗಳಲ್ಲಿ ಚಿರತೆಯು ಕಾಣಿಸಿಕೊಳ್ಳುತ್ತಿದ್ದು, ಸ್ಥಳೀಯರು ಭಯಭೀತರಾಗಿದ್ದರು. ಈ ಬಗ್ಗೆ ಸಾರ್ವಜನಿಕರು ಸ್ಥಳೀಯ ಮಾಜಿ ಮೇಯರ್ ಹಾಗೂ ಮಾಜಿ ಕಾರ್ಪೊರೇಟರ್ ಭಾಸ್ಕರ್ ಕೆ. ಅವರಿಗೆ ಮಾಹಿತಿ ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಭಾಸ್ಕರ್ ಕೆ. ಅವರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ, ಸ್ಥಳ […]

DAKSHINA KANNADA HOME LATEST NEWS

ಉಪ್ಪಿನಂಗಡಿ: ಯುವತಿ ಸ್ನಾನದ ವೀಡಿಯೋ ವಾಟ್ಸ್‌ಆ್ಯಪ್‌ನಲ್ಲಿ ಹಂಚಿದ ಆರೋಪ- FIR

ಉಪ್ಪಿನಂಗಡಿ: ಪ್ರೀತಿಸುವುದಾಗಿ ಯುವತಿಯನ್ನು ನಂಬಿಸಿ ಆಕೆಯ ಸ್ನಾನ ಮಾಡುವ ಖಾಸಗಿ ವಿಡಿಯೊವನ್ನು ಚಿತ್ರೀಕರಿಸಿ ವಾಟ್ಸ್‌ ಆ್ಯಪ್‌ನಲ್ಲಿ ಹಂಚಿದ ಆರೋಪದ ಮೇಲೆ ಯುವಕ ಹಾಗೂ ಆತನ ತಂಗಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಇನ್‌ಸ್ಟಾಗ್ರಾಂಲ್ಲಿ ಆರು ತಿಂಗಳ ಹಿಂದೆ ಯುವಕನೊಬ್ಬ ಪರಿಚಯವಾಗಿದ್ದ. ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಪ್ರಸ್ತುತ ಊರಿನಲ್ಲಿದ್ದೇನೆ ಎಂಬುದಾಗಿ ಆತ ತಿಳಿಸಿದ್ದ. ನಾವು ಪರಸ್ಪರ ಪ್ರೀತಿಸಿದ್ದು, ಮದುವೆಯಾಗಲು ನಿರ್ಧರಿಸಿದ್ದೆವು. ಈ ಮಧ್ಯೆ ಆತ ಖಾಸಗಿ ವಿಡಿಯೊ ಕಳುಹಿಸುವಂತೆ ಅಥವಾ ನಗ್ನವಾಗಿ ವಿಡಿಯೊ […]

HOME

ಸಾಮಾಜಿಕ ಮಾಧ್ಯಮದಲ್ಲಿ ಕೋಮು ಪ್ರಚೋದನಕಾರಿ ಸಂದೇಶ: ಓರ್ವನ ಬಂಧನ

ಮಂಗಳೂರು: ಬಜಪೆಯಲ್ಲಿ 2025ರಲ್ಲಿ ಸುಹಾಸ್ ಶೆಟ್ಟಿ ಕೊಲೆ ನಡೆದ ಬಳಿಕ ಸಾಮಾಜಿಕ ಮಾಧ್ಯಮದಲ್ಲಿ ಕೋಮು ಪ್ರಚೋದನಕಾರಿ ಸಂದೇಶ ಹಂಚಿಕೊಂಡ ಆರೋಪಿ ಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಬುಧವಾರ ಹಾಜರು ಪಡಿಸಿದ್ದಾರೆ. ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಮೂಡುಬೆಳ್ಳೆ ಗ್ರಾಮದ ಪವನ್ ಆಚಾರ್ಯ (22) ಬಂಧಿತ ಆರೋಪಿ. ಆತ ಸಾಮಾಜಿಕ ಮಾಧ್ಯಮ ದಲ್ಲಿ ಕೋಮು ಪ್ರಚೋದಕ ಸಂದೇಶ ಹಂಚಿಕೊಂಡ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ 353 (1) (ಸಾರ್ವಜನಿಕ […]

DAKSHINA KANNADA

ವಿಟ್ಲ ಬೊಬ್ಬೆಕೇರಿ ರಸ್ತೆ ಕಾಂಕ್ರೀಟೀಕರಣಕ್ಕೆ ೬೦ ಲಕ್ಷ ರೂ. ಮಂಜೂರು: ಹಲವು ವರ್ಷಗಳ ಸಮಸ್ಯೆಗೆ ಶಾಸಕ ಅಶೋಕ್ ರೈ ಅವರಿಂದ ಮುಕ್ತಿ

ಪುತ್ತೂರು: ಬಂಟ್ವಾಳ ತಾಲೂಕು ವ್ಯಾಪ್ತಿಯ ಕಾಂಞಂ ಗಾಡು-ಕಡೂರು ರಾಜ್ಯ ಹೆದ್ದಾರಿಯ ಬೊಬ್ಬೆಕೇರಿ ಎಂಬಲ್ಲಿನ ರಸ್ತೆ ಸಮಸ್ಯೆಗೆ ಕೊನೆಗೂ ಶಾಶ್ವತ ಪರಿಹಾರ ದೊರೆತಿದೆ. ಇಲ್ಲಿನ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗಾಗಿ ೬೦ ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಸಾರ್ವಜನಿಕರ ದಶಕಗಳ ಬೇಡಿಕೆ ಈಡೇರಿದಂತಾಗಿದೆ. ಸಮಸ್ಯೆಯ ಹಿನ್ನೆಲೆ: ಅಂತರರಾಜ್ಯ ಸಂಪರ್ಕಿಸುವ ಪ್ರಮುಖ ಹೆದ್ದಾರಿಯ ಬೊಬ್ಬೆಕೇರಿಯಲ್ಲಿ ರಸ್ತೆ ಅತ್ಯಂತ ಕಿರಿದಾಗಿತ್ತು. ರಸ್ತೆಯ ಇಕ್ಕೆಲಗಳಲ್ಲಿ ಖಾಸಗಿ ಜಮೀನು ಇದ್ದ ಕಾರಣ ಅಗಲೀಕರಣ ಮಾಡಲು ಸಾಧ್ಯವಾಗಿರಲಿಲ್ಲ. ಸೂಕ್ತ ಚರಂಡಿ ವ್ಯವಸ್ಥೆಯೂ ಇಲ್ಲದ ಕಾರಣ ಮಳೆನೀರು ರಸ್ತೆಯಲ್ಲೇ […]

DAKSHINA KANNADA HOME

*ಮಂಗಳೂರು ಧರ್ಮಪ್ರಾಂತ್ಯದಲ್ಲಿ ಹೊಸ ‘ಕೊಂಕಣಿ ರೋಮಿ ಮಿಸಾ ಗ್ರಂಥ’ ಲೋಕಾರ್ಪಣೆ ಜೂನ್ 7ರಿಂದ ಅಧಿಕೃತ ಜಾರಿ*

ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದ ನೂತನವಾಗಿ ಅನುವಾದಗೊಂಡ ಮತ್ತು ಸಂಕಲನಗೊಂಡ ‘ಕೊಂಕಣಿ ರೋಮಿ ಮಿಸಾ ಗ್ರಂಥ’ವನ್ನು (Konkani Roman Missal) ಮಾರ್ಚ್ 25, ಬುಧವಾರದಂದು ಜೆಪ್ಪುವಿನ ಸೈಂಟ್ ಆಂಥೋನಿ ಆಶ್ರಮದಲ್ಲಿ ನಡೆದ ವಾರ್ಷಿಕ ಪಶುಪಾಲನಾ ಸಮಾಲೋಚನಾ ಸಭೆಯಲ್ಲಿ ಅಧಿಕೃತವಾಗಿ ಬಿಡುಗಡೆಗೊಳಿಸಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತೀ ವಂ| ಡಾ| ಪೀಟರ್ ಪೌಲ್ ಸಲ್ಡಾನ್ಹಾ ಅವರು ಈ ಪವಿತ್ರ ಗ್ರಂಥವನ್ನು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಹೊಸ ಮಿಸಾ ಗ್ರಂಥವು ಧರ್ಮಪ್ರಾಂತ್ಯದಲ್ಲಿ ಜೂನ್ 7, 2026ರಂದು ‘ಪವಿತ್ರ […]

HOME

*ಸೇಂಟ್ ಜೋಸೆಫ್ ವಿಶ್ವವಿದ್ಯಾಲಯ ದಲ್ಲಿ ಮಹಿಳಾ ಸಬಲೀಕರಣ ಕುರಿತು ಐಡಿಎಸ್ಇ ಅಧಿಕಾರಿ ನಾಜ್ನೀನ್ ಬಾನು ವಿಶೇಷ ಉಪನ್ಯಾಸ*

ಬೆಂಗಳೂರು, ಮಾರ್ಚ್ 25 : ನಗರದ ಪ್ರತಿಷ್ಠಿತ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಹಿಳಾ ಘಟಕವು, ಸಂಸ್ಥೆಯ ಇನ್ನೋವೇಶನ್ ಕೌನ್ಸಿಲ್ (IIC) ಸಹಯೋಗದೊಂದಿಗೆ ಇಂದು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ‘ಮಹಿಳಾ ಸಬಲೀಕರಣ’ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿತ್ತು. ಭಾರತೀಯ ರಕ್ಷಣಾ ಇಂಜಿನಿಯರಿಂಗ್ ಸೇವೆಯ (IDSE) ಪ್ರತಿಷ್ಠಿತ ಅಧಿಕಾರಿ ಶ್ರೀಮತಿ ನಾಜ್ನೀನ್ ಬಾನು ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ವಿಶ್ವವಿದ್ಯಾಲಯದ ಹಿರಿಯ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀಮತಿ ನಾಜ್ನೀನ್ ಬಾನು ಅವರು, ತಮ್ಮ ವೈಯಕ್ತಿಕ ಮತ್ತು […]