Month: April 2026

LATEST NEWS

*ದಲಿತ್ ಸೇವಾ ಸಮಿತಿಯ ಹೋರಾಟದ ಫಲ: ಕಳಂಜದ ಬಡ ಕುಟುಂಬಕ್ಕೆ ಸೂರು – ಬಿ.ಕೆ. ಸೇಸಪ್ಪ ಬೆದ್ರಕಾಡು ಅವರಿಗೆ ಗೌರವಾರ್ಪಣೆ*

ಸುಳ್ಯ:ಏಪ್ರಿಲ್.6: ಅರಣ್ಯ ಇಲಾಖೆಯ ಜಾಗದಲ್ಲಿದ್ದು ಕೊಂಡು ಮೂಲಭೂತ ಸೌಕರ್ಯಗಳಿಂದ ವಂಚಿತ ರಾಗಿದ್ದ ಬಡ ಕುಟುಂಬವೊಂದಕ್ಕೆ ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿಯ ಹೋರಾಟದ ಫಲವಾಗಿ ಇಂದು ಸುಸಜ್ಜಿತ ಮನೆಯ ಕನಸು ನನಸಾಗಿದೆ. ಸುಳ್ಯ ತಾಲೂಕಿನ ಕಳಂಜ ಗ್ರಾಮದ ಕೋಟೆ ಮುಂಡುಗಾರ್ ನಿವಾಸಿಗಳಾದ ಕೃಷ್ಣ ನಾಯ್ಕ್ ಮತ್ತು ಅನುರಾಧ ದಂಪತಿಗಳು ಕಳೆದ ಹಲವಾರು ವರ್ಷಗಳಿಂದ ಅರಣ್ಯ ಇಲಾಖೆಯ ವ್ಯಾಪ್ತಿಯ ಜಾಗದಲ್ಲಿ ವಾಸವಿದ್ದರು. ಇವರಿಗೆ ಯಾವುದೇ ಮೂಲಭೂತ ಸೌಕರ್ಯಗಳಿರಲಿಲ್ಲ ಹಾಗೂ ಮನೆ ನಿರ್ಮಿಸಲು ಅಡೆತಡೆಗಳಿದ್ದವು. ಈ ಬಗ್ಗೆ ಕುಟುಂಬವು […]

LATEST NEWS

*ಮೊಂಟೆಪದವು ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ವಿಶೇಷ ಶಿಬಿರಕ್ಕೆ ಚಾಲನೆ*

ಮಂಗಳೂರು:ಏಪ್ರಿಲ್ 06: ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ನಡುಪದವಿನ ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆ.ಪಿ.ಎಸ್.), ಮೊಂಟೆಪದವಿನಲ್ಲಿ 2025-26ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ ನೀಡಲಾಯಿತು. “ನನ್ನ ಭಾರತಕ್ಕಾಗಿ ಯುವ ಜನತೆ, ಡಿಜಿಟಲ್ ಸಾಕ್ಷರತೆಗಾಗಿ ಯುವ ಜನತೆ” ಎಂಬ ಧ್ಯೇಯವಾಕ್ಯದೊಂದಿಗೆ ಹಮ್ಮಿಕೊಳ್ಳಲಾದ ಈ ಶಿಬಿರವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್. ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಶೇಷಪ್ಪ ಕೆ. ಅಮೀನ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, […]

LATEST NEWS

*ಮಹಿಳೆ ವಿದ್ಯಾವಂತಳಾದರೆ ಇಡೀ ಸಮಾಜಕ್ಕೇ ಬೆಳಕು: ಕೆ.ಎನ್. ಗಂಗಾಧರ ಆಳ್ವ*

ಮಂಗಳೂರು: “ಒಬ್ಬ ಮಹಿಳೆ ಶಿಕ್ಷಣ ಪಡೆದರೆ ಇಡೀ ಕುಟುಂಬ ಹಾಗೂ ಇಡೀ ಸಮಾಜವನ್ನೇ ವಿದ್ಯಾವಂತರನ್ನಾಗಿ ಮಾಡಲು ಸಾಧ್ಯ. ಕಲಿತ ವಿದ್ಯೆಗೆ ಕೊನೆಯಿಲ್ಲ, ಅದು ನಮ್ಮನ್ನು ಸದಾ ಸಂತೋಷದಿಂದ ಇರುವಂತೆ ಮಾಡುತ್ತದೆ,” ಎಂದು ಬಂಟ್ವಾಳದ ಎಸ್.ವಿ.ಎಸ್. ಟೆಂಪಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ಎನ್. ಗಂಗಾಧರ ಆಳ್ವ ಅವರು ಅಭಿಪ್ರಾಯಪಟ್ಟರು. ಅಮೃತ ಪ್ರಕಾಶ ಪತ್ರಿಕೆ ಹಾಗೂ ಬಲ್ಮಠದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಜಂಟಿ ಆಶ್ರಯದಲ್ಲಿ ಏಪ್ರಿಲ್ 6 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆದ ‘118ನೇ ಸಾಹಿತ್ಯ […]

LATEST NEWS

*ಜಪ್ಪಿನಮೊಗರು: ಶ್ರೀ ವೈದ್ಯನಾಥ ಆಟೋ ಪಾರ್ಕ್‌ನ ನೂತನ ಮೇಲ್ಛಾವಣಿ ಹಾಗೂ ಇಂಟರ್‌ಲಾಕ್ ಉದ್ಘಾಟಿಸಿದ ಶಾಸಕ ವೇದವ್ಯಾಸ ಕಾಮತ್*

ಮಂಗಳೂರು, ಏ.06: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 54ನೇ ಜಪ್ಪಿನಮೊಗರು ವಾರ್ಡಿನ ಶ್ರೀ ವೈದ್ಯನಾಥ ಆಟೋ ಪಾರ್ಕ್‌ಗೆ ನೂತನವಾಗಿ ಅಳವಡಿಸಲಾದ ಮೇಲ್ಛಾವಣಿ ಹಾಗೂ ಇಂಟರ್‌ ಲಾಕ್ ವ್ಯವಸ್ಥೆಯನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಇತ್ತೀಚೆಗೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕರು, “ಆಟೋ ಚಾಲಕರು ಸಮಾಜದ ಶ್ರಮಿಕ ವರ್ಗದ ಕೊಂಡಿಯಾಗಿದ್ದಾರೆ. ಪ್ರಯಾಣಿಕರ ಸೇವೆಯ ಜೊತೆಗೆ ತಮ್ಮ ವಾಹನಗಳ ಬಗ್ಗೆಯೂ ಅವರು ಅಪಾರ ಕಾಳಜಿ ಹೊಂದಿರುತ್ತಾರೆ. ಪ್ರಸ್ತುತ ವಿಪರೀತ ಬಿಸಿಲಿನ ವಾತಾವರಣವಿರುವುದ ರಿಂದ, […]

HOME LATEST NEWS UDUPI

*ಗ್ಯಾಸ್ ಓಟಿಪಿಯಿಂದ ಬದುಕಿತು ಬಡಜೀವ: 3 ದಿನ ಬಳಿಕ ಬಾವಿಯೊಳಗಿಂದ ಪವಾಡ ಸದೃಶರಾಗಿ ಬದುಕಿ ಬಂದ ವೃದ್ಧ*

ಉಡುಪಿ, ಏಪ್ರಿಲ್ 06: ‘ಮುಳುಗುವವನಿಗೆ ಹುಲ್ಲು ಕಡ್ಡಿ ಕೂಡ ಆಸರೆ’ ಎನ್ನುವಂತೆ ಅದೊಂದು ಗ್ಯಾಸ್ ಸಿಲಿಂಡರ್ ಓಟಿಪಿಯಿಂದ ವೃದ್ಧ ಜೀವವೊಂದು ದೊಡ್ಡ ಅಪಾಯದಿಂದ ಬದುಕಿಬಂದಿದೆ. ಆಯತಪ್ಪಿ ಬಾವಿಗೆ ಬಿದ್ದಿದ್ದ ವ್ಯಕ್ತಿಯನ್ನು ಗ್ಯಾಸ್ ಸಿಲಿಂಡರ್ ಓಟಿಪಿಯಿಂದ ರಕ್ಷಣೆ ಮಾಡಲಾಗಿದೆ. ಆ ಮೂಲಕ ಅಪರೂಪದ ಘಟನೆಗೆ ಉಡುಪಿ ಜಿಲ್ಲೆ ಸಾಕ್ಷಿ ಆಗಿದೆ. ಸದ್ಯ ರಕ್ಷಣೆಗೊಳಗಾದ ವೃದ್ಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿ ನಗರದ ಕೊಡವೂರು ವಾರ್ಡ್ ಕಂಬ್ಳಕಟ್ಟದಲ್ಲಿ ನಿರ್ಜನ ಪ್ರದೇಶದ ಮನೆಯಲ್ಲಿ ಶೀನಿವಾಸ್ ಆಚಾರ್ಯ(62) ಎಂಬುವವರು ಒಬ್ಬಂಟಿಯಾಗಿ ವಾಸಿಸುತ್ತಿದ್ದಾರೆ. ಇತ್ತೀಚೆಗೆ […]

LATEST NEWS

*2026 _31ನೇ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ ಪೂರ್ವ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ*

ಬೆಂಗಳೂರು:06 ಏಪ್ರಿಲ್ 2026: ರಾಜ್ಯದ ಸುಮಾರು 5,900ಕ್ಕೂ ಹೆಚ್ಚು ಗ್ರಾಮ ಪಂಚಾಯತ್‌ಗಳ ಐದು ವರ್ಷಗಳ ಅಧಿಕಾರಾವಧಿಯು 2025ರ ಡಿಸೆಂಬರ್ ಮತ್ತು 2026ರ ಜನವರಿಯಲ್ಲಿ ಮುಕ್ತಾಯ ಗೊಳ್ಳುತ್ತಿ ರುವ ಹಿನ್ನೆಲೆಯಲ್ಲಿ, 2026-31ನೇ ಸಾಲಿನ ಸಾರ್ವತ್ರಿಕ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆಗಳನ್ನು ಆರಂಭಿಸಿದೆ. ಈ ಕುರಿತು ಪಂಚಾಯತ್ ರಾಜ್ ಇಲಾಖೆಯ ಉಪ ಕಾರ್ಯದರ್ಶಿಗಳು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ (DC) ಪತ್ರ ಬರೆದಿದ್ದು, ಚುನಾವಣಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ಪ್ರಮುಖ ಅಂಶಗಳು ಮತದಾನ ವಿಧಾನ: ಈ ಬಾರಿ ಪಾರದರ್ಶಕತೆ ಕಾಯ್ದುಕೊಳ್ಳುವ […]

LATEST NEWS

*ಪೆರುವಾಯಿಯಲ್ಲಿ ಅಭಯ ಸಂಜೀವಿನಿ ಒಕ್ಕೂಟದ ಮಹಿಳೆಯರ ಹೊಲಿಗೆ ತರಬೇತಿ ಸಮಾರೋಪ*

ವಿಟ್ಲ:ಪೆರುವಾಯಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಏಪ್ರಿಲ್ 04ರಂದು ಸ್ವಸಹಾಯ ಸಂಘದ ಸದಸ್ಯರಿಗಾಗಿ ಆಯೋಜಿಸಲಾಗಿದ್ದ 60 ದಿನಗಳ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ), ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ್, ಪೆರುವಾಯಿ ಗ್ರಾಮ ಪಂಚಾಯತ್ ಹಾಗೂ ಅಭಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ) ಸಂಯುಕ್ತವಾಗಿ ಹಮ್ಮಿಕೊಂಡಿದ್ದವು. ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯನಿರ್ವಾಹಕ ಅಧಿಕಾರಿ ಜ್ಯೋತಿರಾಜ್ ಮಾತನಾಡಿ, “ತರಬೇತಿ ಪಡೆದ ಮಹಿಳೆಯರು ಕೇವಲ […]

LATEST NEWS

*ಬಂಟರ ಮಾತೃ ಸಂಘದಿಂದ ರವೀಂದ್ರನಾಥ ಶೆಟ್ಟಿ ಅವರಿಗೆ ಶ್ರದ್ದಾಂಜಲಿ*

ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ ಅಧಿಕಾರಿ ಮುಂಡ್ಕೂರು ದೊಡ್ಡಮನೆ ರವೀಂದ್ರನಾಥ ಶೆಟ್ಟಿ ಅವರಿಗೆ ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಬಂಟ್ಸ್ ಹಾಸ್ಟೇಲ್ ಶ್ರೀಮತಿ ಗೀತಾ ಎಸ್ ಎಂ ಶೆಟ್ಟಿ ಸಭಾಂಗಣದಲ್ಲಿ ಶೃದ್ದಾಂಜಲಿ ಸಭೆ ಜರಗಿತು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ.ಅಜಿತ್ ಕುಮಾರ್ ರೈ ಮಾಲಾಡಿ ಅವರು ಮಾತನಾಡಿ, ರವೀಂದ್ರನಾಥ ಶೆಟ್ಟಿ ಅವರ ಅಗಲುವಿಕೆ ಸಮಾಜಕ್ಕೆ […]

LATEST NEWS

*ಮಂಗಳೂರು ಮಿಲಾಗ್ರೆಸ್ ಚರ್ಚ್‌ನಲ್ಲಿ ಈಸ್ಟರ್ ಹಬ್ಬದ ಸಡಗರ*

ಮಂಗಳೂರಿನ ಐತಿಹಾಸಿಕ ಮಿಲಾಗ್ರೆಸ್ ಚರ್ಚ್‌ನಲ್ಲಿ ಯೇಸು ಕ್ರಿಸ್ತರ ಪುನರುತ್ಥಾನದ ಹಬ್ಬವಾದ ‘ಈಸ್ಟರ್’ ಅನ್ನು ಅತ್ಯಂತ ಭಕ್ತಿ ಮತ್ತು ಸಡಗರದಿಂದ ಆಚರಿಸಲಾಯಿತು. ನಲವತ್ತು ದಿನಗಳ ಉಪವಾಸ ಮತ್ತು ಪ್ರಾಯಶ್ಚಿತ್ತದ ನಂತರ, ಕ್ರೈಸ್ತ ಬಾಂಧವರು ಹಬ್ಬದ ಉತ್ಸಾಹದೊಂದಿಗೆ ಚರ್ಚ್‌ಗೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿದರು. ಪವಿತ್ರ ಬಲಿಪೂಜೆಯನ್ನು ವಂದನೀಯ ಪೂಜ್ಯ ಬೊನಾವೆಂಚರ್ ನಜರೆತ್ ಅವರು ನೆರವೇರಿಸಿದರು. ವಂದನೀಯ ಪೂಜ್ಯ ಮ್ಯಾಕ್ಸಿಮ್ ರೊಸಾರಿಯೊ ಅವರು ಈ ಸಂದರ್ಭದಲ್ಲಿ ಪ್ರಬೋಧನೆ ನೀಡಿ, ಈಸ್ಟರ್ ಹಬ್ಬದ ಮಹತ್ವವನ್ನು ವಿವರಿಸಿದರು. ವಂದನೀಯ ಪೂಜ್ಯ ಉದಯ್ ಫೆರ್ನಾಂಡಿಸ್ ಅವರು […]

DAKSHINA KANNADA HOME LATEST NEWS

ಕರಾವಳಿ ಚರ್ಚ್‌ಗಳಲ್ಲಿ ಪಾಸ್ಕ ಹಬ್ಬದ ಸಂಭ್ರಮಾಚರಣೆ

ಮಂಗಳೂರು: ಕ್ರೈಸ್ತರು ಶನಿವಾರ ರಾತ್ರಿ ಈಸ್ಟರ್ ಈವ್ ಆಚರಿಸಿದ್ದು, ರವಿವಾರ ಯೇಸು ಕ್ರಿಸ್ತರ ಪುನರುತ್ಥಾನ ಸ್ಮರಣೆಯ ಈಸ್ಟರ್ ಹಬ್ಬವನ್ನು ಭಕ್ತಿ, ಶ್ರದ್ಧೆ ಹಾಗೂ ಸಡಗರದಿಂದ ಆಚರಿಸುತ್ತಿದ್ದಾರೆ. ಶನಿವಾರ ರಾತ್ರಿ ಚರ್ಚ್‌ಗಳಲ್ಲಿ ಈಸ್ಟರ್ ಜಾಗರಣೆಯ ಬಲಿಪೂಜೆಗಳು ನಡೆಯಿತು. ಸಂಜೆ ವಿಶೇಷ ಪ್ರಾರ್ಥನಾ ವಿಧಿಯೊಂದಿಗೆ ಬಲಿಪೂಜೆಗಳು ಆರಂಭಗೊಂಡವು. ಸಂಜೆಯ ವೇಳೆ ಜಗತ್ತಿಗೆ ಬೆಳಕಾದ ಕ್ರಿಸ್ತರ ಬೆಳಕು(ಬೆಂಕಿ) ಆಶೀರ್ವಚನ ಮಾಡುವ ಮೂಲಕ ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ ವ್ಯಕ್ತಿಗಳಾಗುವಂತೆ ಸಂದೇಶ ಸಾರಲಾಯಿತು. ಬೆಂಕಿ ಆಶೀರ್ವಚನ, ಮೆರವಣಿಗೆ, ಪಾಸ್ಕಾ ಗಾಯನ ನಡೆಯಿತು. ಹಳೆ ಹಾಗೂ […]