Month: May 2026

COMMUNITY NEWS

ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ನಾಲ್ವರು ಕಾರ್ಮೆಲೈಟ್ ಡೀಕನ್‌ಗಳಿಗೆ ಪವಿತ್ರ ಗುರುದೀಕ್ಷೆ

ಮಂಗಳೂರು, ಮೇ 15: ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ಮೇ 14 ನಡೆದ ಭವ್ಯ ಸಮಾರಂಭದಲ್ಲಿ ನಾಲ್ವರು ಡಿಸ್ಕಾಲ್ಡ್ ಕಾರ್ಮೆಲೈಟ್ ಡೀಕನ್‌ಗಳಿಗೆ ಪವಿತ್ರ ಗುರುದೀಕ್ಷೆ ನೀಡಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪೌಲ್ ಸಲ್ಡಾನ್ಹಾ ಅವರು ವಂ. ಆಲ್ವಿನ್ ಡಿಸೋಜಾ, ವಂ. ಲೋಯ್ ಜಾಕ್ಸನ್ ಕ್ರಾಸ್ತಾ, ವಂ. ಎಲ್ಸ್ಟನ್ ಮೊಂತೇರೊ ಮತ್ತು ವಂ. ಹಿಲರಿ ರೊಡ್ರಿಗಸ್ ಅವರಿಗೆ ಪವಿತ್ರ ದೀಕ್ಷೆ ಅನುಗ್ರಹಿಸಿದರು. ಈ ಸಂದರ್ಭದಲ್ಲಿ ಪ್ರವಚನ ನೀಡಿದ ಬಿಷಪ್ ಡಾ. ಪೀಟರ್ ಪೌಲ್ […]

DAKSHINA KANNADA HOME LATEST NEWS NATIONAL

Breaking: ಪೆಟ್ರೋಲ್ – ಡೀಸೆಲ್ ಬೆಲೆ ದರ ಪ್ರತಿ ಲೀಟರ್​ಗೆ 3 ರೂ. ಏರಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂಧನ ಮಿತ ಬಳಕೆ ಹಾಗೂ ಚಿನ್ನ ಖರೀದಿ ನಿಲ್ಲಿಸುವಂತೆ ಜನರಲ್ಲಿ ಮನವಿ ಮಾಡಿದ ಬೆನ್ನಲ್ಲೇ ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ದರ ಪ್ರತಿ ಲೀಟರ್​ಗೆ 3 ರೂ. ಏರಿಕೆಯಾಗಿದೆ. ಇಂಧನ ದರ ಏರಿಕೆ ಬಗ್ಗೆ ತೈಲ ಕಂಪನಿಗಳು ಶುಕ್ರವಾರ ಬೆಳಗ್ಗೆ ಘೋಷಣೆ ಮಾಡಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ. ರಾಜ್ಯದಲ್ಲಿ ಪೆಟ್ರೋಲ್ ದರ ಲೀಟರ್​​ಗೆ 3.27 ರೂಪಾಯಿ ಏರಿಕೆಯಾಗಿದ್ದು, ಡಿಸೇಲ್ ಬೆಲೆ ಲೀಟರ್​​ಗೆ 3.12 ರೂಪಾಯಿ ಏರಿಕೆಯಾಗಿದೆ. ಈ ಹಿಂದೆ ಪೆಟ್ರೋಲ್ ಬೆಲೆ 102.90 […]

DAKSHINA KANNADA HOME LATEST NEWS

ವಿಟ್ಲ ಸುತ್ತಮುತ್ತ ಹಾರಾಡಿದ 2 ಪ್ಯಾಸೆಂಜರ್ ವಿಮಾನ: ಸ್ಥಳೀಯರಲ್ಲಿ ಆತಂಕ

ವಿಟ್ಲ: ಬಂಟ್ವಾಳ ತಾಲೂಕಿನ ಕಲ್ಲಡ್ಕ, ವಿಟ್ಲ ಸೇರಿದಂತೆ ಹಲವೆಡೆ ಸಂಜೆಯ ವೇಳೆಗೆ ಎರಡು ವಿಮಾನಗಳು ಕೆಳಮಟ್ಟದಲ್ಲಿ ಹಾರಾಡುತ್ತಿದ್ದುದು ಸ್ಥಳೀಯರಿಗೆ ಕೌತುಕದ ಜೊತೆಗೆ ಆತಂಕ ಸೃಷ್ಟಿ ಮಾಡಿತ್ತು. ಸದ್ಯ ಈ ಬಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಿಂದ ಹೊರಟಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಮಂಗಳೂರಿನಾದ್ಯಂತ ಹವಾಮಾನ ವೈಪರಿತ್ಯದಿಂದ ಲ್ಯಾಂಡ್‌ ಆಗಿರಲಿಲ್ಲ. ಈ ಹಿನ್ನೆಲೆ ಬಂಟ್ವಾಳ, ಕಲ್ಲಡ್ಕ, ವಿಟ್ಲ ಆಸುಪಾಸಿನಲ್ಲಿ ಕಾಣಿಸಿಕೊಂಡಿತ್ತು. ಈ ಬಗ್ಗೆ ವಿಮಾನ ನಿಲ್ಧಾಣದ ಸಾರ್ವಜನಿಕ ಸಂಪರ್ಕಾಧಿಕಾರಿ ಸ್ಪಷ್ಟನೆ ನೀಡಿ ಎರಡೂ ವಿಮಾನಗಳು […]

HOME LATEST NEWS

ಎಂಸಿಸಿ ಬ್ಯಾಂಕಿನಲ್ಲಿ 114ನೇ ಸಂಸ್ಥಾಪಕರ ದಿನಾಚರಣೆ

ಮಂಗಳೂರು: ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 114ನೇ ಸಂಸ್ಥಾಪಕರ ದಿನಾಚರಣೆಯನ್ನು ಆಡಳಿತ ಕಚೇರಿ ಆವರಣದಲ್ಲಿ ಭವ್ಯವಾಗಿ ಆಚರಿಸಿತು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಸಂಸ್ಥಾಪಕರಾದ ದಿವಂಗತ ಶ್ರೀ ಪಿ.ಎಫ್.ಎಕ್ಸ್. ಸಾಲ್ದಾನ್ಹ ಅವರ ದೂರದೃಷ್ಟಿಯ ಸೇವೆಯನ್ನು ಸ್ಮರಿಸಲಾಯಿತು ಹಾಗೂ ಸಹಕಾರಿ ಕ್ಷೇತ್ರದಲ್ಲಿ ಬ್ಯಾಂಕ್ ಸಾಧಿಸಿರುವ ನಿರಂತರ ಪ್ರಗತಿ ಹಾಗೂ ಸ್ಥೈರ್ಯವನ್ನು ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ರತ್ನ ಶ್ರೀ ಅನಿಲ್ ಲೋಬೊ ವಹಿಸಿದ್ದರು. ಸೇಂಟ್ ಅಲೋಶಿಯಸ್ (ಡೀಮ್ಡ್ ಟು ಬಿ ಯುನಿವರ್ಸಿಟಿ), ಮಂಗಳೂರು ಇದರ ಉಪಕುಲಪತಿ ರೆವ್. ಡಾ. ಪ್ರವೀಣ್ ಮಾರ್ಟಿಸ್ […]

HOME LATEST NEWS

2025ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್‌ಗೆ ನಾಳೆ ಅಭಿನಂದನಾ ಸಮಾರಂಭ

ಮಂಗಳೂರು: ಮಂಗಳೂರಿನ ಖ್ಯಾತ ಕೊಂಕಣಿ ಸಾಹಿತಿ / ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ 2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇದು ಅವರ ಪ್ರಶಂಸಿತ ಸಾಹಿತ್ಯ ವಿಮರ್ಶೆ ಕೃತಿಯಾದ ಕೊಂಕಣಿ ಕಾವ್ಯೆಂ: ರುಪಾಂ ಆನಿ ರೂಪಕಾಂ (2021) ಪುಸ್ತಕಕ್ಕೆ ನೀಡಲಾಗಿದೆ. ಸಾಹಿತ್ಯ ಅಕಾಡೆಮಿ ಪ್ರಶಸ್ತಿಯು ಭಾರತ ಸರಕಾರ ಸಾಹಿತ್ಯಕ್ಕಾಗಿ ನೀಡುವ ದೇಶದ ಅತ್ಯುನ್ನತ ಪ್ರಶಸ್ತಿಯಾಗಿದ್ದು, ಪ್ರತೀ ವರ್ಷ 22 ಅನುಸೂಚಿತ ಭಾಷೆಗಳ ಜೊತೆಗೆ ಇಂಗ್ಲಿಷ್ ಮತ್ತು ರಾಜಸ್ಥಾನಿ ಹೀಗೆ 24 ಭಾಷೆಗಳ […]

HOME

ಪೆರುವಾಯಿ ಫಾತಿಮಾ ಮಾತೆಯ ದೇವಾಲಯದಲ್ಲಿ ವಾರ್ಷಿಕ ಹಬ್ಬ

ವಿಟ್ಲ : ಬಂಟ್ವಾಳ ತಾಲೂಕಿನ ವಿಟ್ಲದ ಪೆರುವಾಯಿ ಫಾತಿಮಾ ಮಾತೆಯ ದೇವಾಲಯದಲ್ಲಿ ಇಂದು (ಮೇ.13) ವಾರ್ಷಿಕ ಹಬ್ಬ ನಡೆಯಿತು. ಹಬ್ಬದ ದಿವ್ಯಬಲಿಪೂಜೆಯನ್ನು ನೂತನ ಧರ್ಮಗುರು ಹಾಗೂ ಮಂಗಳೂರಿನ ಬಿಜೈ ಚರ್ಚ್‌ನ ಸಹಾಯಕ ಧರ್ಮಗುರುಗಳಾದ ವಂದನೀಯ ಜೀವನ್‌ ಡಿಸೋಜಾ ಇವರು ನೆರವೇರಿಸಿದರು.ಈ ವೇಳೆ ನಡೆದ ಧಾರ್ಮಿಕ ಪ್ರವಚನದಲ್ಲಿ, ಕನ್ಯಾ ಮೇರಿ ಮಾತೆಯು 1917 ರ ಮೇ 13ರಂದು ಪೋರ್ಚುಗಲ್‌ನ ಫಾತಿಮಾ ಎಂಬಲ್ಲಿ ಲೂಸಿಯಾ, ಫ್ರಾನ್ಸಿಸ್ಕೋ ಮತ್ತು ಜೆಸಿಂತಾ ಎಂಬ ಮೂವರು ಮಕ್ಕಳಿಗೆ ಕುರಿಗಳನ್ನು ಮೇಯಿಸುತ್ತಿದ್ದಾಗ ಕನ್ಯಾ ಮೇರಿ ಕಾಣಿಸಿಕೊಂಡರು. […]

LATEST NEWS

ಜೆ.ಎಫ್. ಅಸೋಸಿಯೇಷನ್ ಬಜಾಲ್ ವತಿಯಿಂದ ರಕ್ತದಾನ ಶಿಬಿರ

ಮಂಗಳೂರು: ಜೆ.ಎಫ್. ಅಸೋಸಿಯೇಷನ್ (ರಿ.) ಬಜಾಲ್ ನಂತೂರ್ ಮಂಗಳೂರು ಇದರ ವತಿಯಿಂದ, ಯೇನಪೋಯ ಬ್ಲಡ್ ಬ್ಯಾಂಕ್ ಹಾಗೂ ಮಂಗಳೂರು ಬ್ಲಡ್ ಡೋನರ್ಸ್ ಸಹಯೋಗ ದೊಂದಿಗೆ ಬಜಾಲ್‌ನ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ (ಮರ್ಹೂಮ್ ಬಿ. ಪಕ್ರುದ್ದೀನ್ ವೇದಿಕೆ) ಬೃಹತ್ ರಕ್ತದಾನ ಶಿಬಿರವು ಭಾನುವಾರ ನಡೆಯಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯರಾದ ಅಬ್ದುಲ್ ರವೂಫ್ ಅವರು, “ರಕ್ತದಾನ ಮಾಡುವುದು ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯ ಕರ್ತವ್ಯವಾಗಿದೆ. ರಕ್ತದಾನದ ಮೂಲಕ ರೋಗಿಗಳ ಮತ್ತು ಗಾಯಗೊಂಡವರ […]

DAKSHINA KANNADA HOME LATEST NEWS

ಕಡಬ: ಸ್ನಾನಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ಮುಳುಗಿ ಸಾವು

ಕಡಬ: ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿನ ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿನಿ ಅರ್ಪಿತಾ ಅವರ ತಂದೆ ಹರೀಶ್ ಪಿ.ಕೆ ಅವರು ಕಡಬ ಪೊಲೀಸ್ ಠಾಣೆ ಗೆ ದೂರು ನೀಡಿದ್ದಾರೆ. ದೂರಿನ ಪ್ರಕಾರ, ಮೇ 8ರಂದು ಮಧ್ಯಾಹ್ನ ಅರ್ಪಿತಾ (15), ಸುನೀತಾ (21), ಅಕ್ಷತಾ ಹಾಗೂ ನೆಟ್ಟಣ ನಿವಾಸಿ ಶ್ರೇಯಾ ಸೇರಿದಂತೆ ಕೆಲವರು ಕೊಲ್ಯದಕಟ್ಟದ ಗುಂಡ್ಯ ಹೊಳೆಗೆ ಸ್ನಾನಕ್ಕೆ ತೆರಳಿದ್ದರು. ಸಂಜೆ ಸುಮಾರು 4.30ರ […]

LATEST NEWS

ಎಸೆಸೆಲ್ಸಿ, ಪಿಯುಸಿ ಸಾಧಕರಿಗೆ ಸನ್ಮಾನ ಹಾಗೂ ಶೈಕ್ಷಣಿಕ ಮಾರ್ಗದರ್ಶನ

ಉಪ್ಪಿನಂಗಡಿ: ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದ ಪ್ರಮುಖ ಘಟ್ಟಗಳಾದ ಎಸೆಸೆಲ್ಸಿ ಮತ್ತು ಪಿಯುಸಿ ನಂತರ ಸರಿಯಾದ ಹಾದಿ ಆಯ್ಕೆ ಮಾಡಿಕೊಳ್ಳುವುದು ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮುಖ್ಯ ಎಂದು ಇಂಡಿಯನ್ ಸ್ಕೂಲ್ ಅಧ್ಯಕ್ಷರಾದ ಎಚ್.ಯೂಸುಫ್ ಹಾಜಿ ತಿಳಿಸಿದರು. ಉಬಾರ್ ಸ್ಪೋರ್ಟಿಂಗ್ ಕ್ಲಬ್ ಉಪ್ಪಿನಂಗಡಿ ಇದರ ವತಿಯಿಂದ ಎಸೆಸೆಲ್ಸಿ ಮತ್ತು ಪಿಯುಸಿ ನಂತರ ಮುಂದೇನು ಎಂಬ ಕಾರ್ಯಕ್ರಮ ಮತ್ತು ಉಪ್ಪಿನಂಗಡಿ ಪರಿಸರದ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮವು […]

LATEST NEWS

ಪ್ರತಿಯೊಬ್ಬ ಮಹಿಳೆಯೂ ಸ್ವಾವಲಂಬಿಯಾಗಿ ಬದುಕುವಂತಾಗ ಬೇಕು ಉದ್ದೇಶದೊಂದಿಗೆ ವಿಜಯ ರೂರಲ್‌ ಡೆವಲಪ್ಮೆಂಟ್‌ ಫೌಂಡೇಶನ್‌ ಕಾರ್ಯಾಚರಣೆ : ರಾಜೇಶ್‌ ಖನ್ನಾ

ಮಂಗಳೂರು: ಪ್ರತಿಯೊಬ್ಬ ಮಹಿಳೆಯೂ ಸ್ವಾವಲಂಬಿಯಾಗಿ ಬದುಕುವಂತಾಗಬೇಕು ಎಂಬ ಆಶಯದೊಂದಿಗೆ ಕಾರ್ಯಾಚರಿಸುತ್ತಿರುವ ವಿಆರ್‌ ಡಿಎಫ್‌ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಕಳೆದ 36 ವರ್ಷಗಳಿಂದ ಯಶಸ್ವಿ ಹೆಜ್ಜೆಗಳನ್ನು ಇಡುತ್ತಾ ಬಂದಿದೆ. ಇದೀಗ ಶಿವಮೊಗ್ಗ ಹಾಗೂ ಹಾಸನ ವಿಸ್ತರಣೆಗೆ ಮುಂದಾಗಿದೆ. ಗ್ರಾಮೀಣ ಮಟ್ಟದಿಂದಲೇ ಅಭಿವೃದ್ಧಿ ಕಾರ್ಯಗಳು, ಜ್ಞಾನ ವೃದ್ಧಿ ಹಾಗೂ ಸಮಾಜ ಸೇವೆಯ ಕೆಲಸಗಳಾಗಬೇಕು ಅನ್ನುವ ಉದ್ದೇಶದೊಂದಿಗೆ ಕಾರ್ಯಾಚರಿಸುತ್ತಿದೆ ಎಂದು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಪ್ರಧಾನ ವ್ಯವಸ್ಥಾಪಕ ರಾಜೇಶ್‌ ಖನ್ನಾ ತಿಳಿಸಿದರು. ಅವರು ಬ್ಯಾಂಕ್ ಆಫ್ […]