ಬೆಂಗಳೂರು: ಸ್ಯಾಂಡವುಡ್ ನಟಿ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಸಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ರಮ್ಯಾ ಅವರು ಇತ್ತೀಚೆಗೆ ಸುಪ್ರೀಂ ಕೋರ್ಟ್ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯುವಾಗ ‘ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗೋ ಭರವಸೆ ಇದೆ’ ಎಂದಿದ್ದರು. ಇದು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣ ಆಗಿತ್ತು. ದರ್ಶನ್ ಫ್ಯಾನ್ಸ್ ರಮ್ಯಾ ಅವರ ಸೋಶಿಯಲ್ ಮೀಡಿಯಾ ಪೋಸ್ಟ್ಗಳ ಕಮೆಂಟ್ ಬಾಕ್ಸ್ನಲ್ಲಿ ಅಶ್ಲೀಲ ಕಮೆಂಟ್ಗಳನ್ನು ಮಾಡಿದ್ದರು.
ಇದನ್ನು ಸಹಿಸಿಕೊಳ್ಳದ ರಮ್ಯಾ ಅವರು ಹೋಗಿ ಸೈಬರ್ ಠಾಣೆಗೆ ದೂರು ದಾಖಲು ಮಾಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ ಸಿಸಿಬಿ ಸೈಬರ್ ಪೊಲೀಸರು ಬಳ್ಳಾರಿ ಮೂಲದ ಓರ್ವ, ಚಿತ್ರದುರ್ಗ ಮೂಲದ ಓರ್ವನನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗೆ ಶೋಧ ನಡೆಸುತ್ತಿದ್ದಾರೆ.