canaratvnews

ಬಜಾಲ್ ಪವಿತ್ರ ಆತ್ಮರ ದೇವಾಲಯದ ವಾರ್ಷಿಕ ಮಹೋತ್ಸವ

ಮಂಗಳೂರು: ಮೇ 24: ಬಜಾಲ್ ಪವಿತ್ರ ಆತ್ಮರ ದೇವಾಲಯದ ವಾರ್ಷಿಕ ಮಹೋತ್ಸವವನ್ನು ಮೇ 24ರಂದು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.

ಬೆಳಗ್ಗೆ 8 ಗಂಟೆಗೆ ನಡೆದ ಪವಿತ್ರ ದಿವ್ಯ ಬಲಿಪೂಜೆಯ ನೇತೃತ್ವವನ್ನು ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷರಾದ ಅತಿ ವಂದನೀಯ ಡಾ. ಅಲೋಷಿಯಸ್ ಪಾವ್ಲ್ ಡಿಸೋಜರವರು ಪ್ರಧಾನ ಗುರುಗಳಾಗಿ ವಹಿಸಿದ್ದರು. ದೇವಾಲಯದ ಪ್ರಧಾನ ಧರ್ಮಗುರುಗಳಾದ ವಂದನೀಯ ಬೊನವೆಂಚರ್ ನಜ್ರೆತ್ ಅವರು ಉಪಸ್ಥಿತರಿದ್ದು, ಭಕ್ತಾದಿಗಳಿಗೆ ಹಿತವಚನ ಹಾಗೂ ಪ್ರವಚನ ನೀಡಿದರು. ಹಬ್ಬದ ಆಚರಣೆಗೆ ಸಹಕರಿಸಿದ ಎಲ್ಲಾ ಪ್ರಾಯೋಜಕರಿಗೆ ಮೊಂಬತ್ತಿ ನೀಡಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಧರ್ಮಾಧ್ಯಕ್ಷರಾಗಿ (ಬಿಷಪ್) 30 ವರ್ಷಗಳ ಸುದೀರ್ಘ ಸೇವೆ ಪೂರ್ಣಗೊಳಿಸಿದ ಅತಿ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡೀಸೋಜ ಅವರನ್ನು ಬಜಾಲ್ ಚರ್ಚ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಮಹೋತ್ಸವದಲ್ಲಿ ನೂರಾರು ಭಕ್ತಾದಿಗಳು ಪಾಲ್ಗೊಂಡು ಹಬ್ಬದ ಸಂಭ್ರಮವನ್ನು ಹೆಚ್ಚಿಸಿದರು.

Share News
Exit mobile version