ಬೆಂಗಳೂರು: ‘ತೂಗುಸೇತುವೆಗಳ ಸರದಾರ’ ಎಂದೇ ಖ್ಯಾತರಾಗಿದ್ದ, ಪದ್ಮಶ್ರೀ ಪುರಸ್ಕøತ ಡಾ. ಗಿರೀಶ್ ಭಾರದ್ವಾಜ್ ಅವರ ನಿಧನಕ್ಕೆ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.


ಭಾರದ್ವಾಜ್ ಅವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ತಮ್ಮ ಅಪಾರ ತಾಂತ್ರಿಕ ಜ್ಞಾನ ಮತ್ತು ಜನಪರ ಕಾಳಜಿಯಿಂದ ನೂರಾರು ತೂಗುಸೇತುವೆಗಳನ್ನು ನಿರ್ಮಿಸಿದ್ದರು. ಗ್ರಾಮೀಣ ಪ್ರದೇಶದ ಲಕ್ಷಾಂತರ ಜನರ ಬದುಕಿಗೆ ಆಸರೆಯಾಗಿದ್ದ ಅವರ ಸಾಧನೆ ಮತ್ತು ಸರಳತೆ ಎಂದಿಗೂ ಮರೆಯಲಾಗದು. ಕನ್ನಡ ನಾಡಿನ ಈ ಸಾಧಕ ದೇಶ ವಿದೇಶದಲ್ಲಿ ಹೆಸರು ಮಾಡಿದ್ದರು ಎಂದು ತಿಳಿಸಿದ್ದಾರೆ.
ಭಾರದ್ವಾಜ್ ಅವರ ಆತ್ಮಕ್ಕೆ ದೇವರು ಸದ್ಗತಿಯನ್ನು ಕರುಣಿಸಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.


