ಬೆಳ್ತಂಗಡಿ : ಮಾಜಿ ಶಾಸಕ ಕೆ ವಸಂತ ಬಂಗೇರ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಬಾರ್ಯ ಮತ್ತು ತೆಕ್ಕಾರು ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿ, ಜಯಕೀರ್ತಿ ಹೆಚ್ ಬಿ. ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರಯಲ್ಲಿ ಜೂ. 15 ರಂದು ನಿಧನರಾಗಿದ್ದಾರೆ.

ಕೆಲ ದಿನಗಳ ಹಿಂದೆ ಅನಾರೋಗ್ಯವೆಂದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಮೃತರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ.ತಾಲೂಕಿನ ವಿವಿಧ ಗ್ರಾಮಪಂಚಾಯತುಗಳಲ್ಲಿ ಕಾರ್ಯನಿರ್ವಹಿಸಿದ್ದ ಇವರು ಮಾಜಿ ಶಾಸಕ ಕೆ ವಸಂತ ಬಂಗೇರ ಅವರ ಆಪ್ತಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

