ಮಂಗಳೂರು, ಮಾರ್ಚ್ 05: ಪಕ್ಷದ ಸಿದ್ಧಾಂತ ಮತ್ತು ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ನಮ್ಮ ಹಿರಿಯರು ಹಾಕಿಕೊಟ್ಟ ದಾರಿಯಲ್ಲಿ, ಶಿಸ್ತು ಮತ್ತು ರಾಷ್ಟ್ರಭಕ್ತಿಯೊಂದಿಗೆ ಸಾಗಲು ‘ಪ್ರಶಿಕ್ಷಣ ವರ್ಗ’ವು ಭದ್ರ ಬುನಾದಿಯಾಗಲಿದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತಿಳಿಸಿದರು.


ಮಹಾಭಿಯಾನದ ರಾಜ್ಯ ಸಹ ಸಂಚಾಲಕ ವಿಕಾಸ್ ಪುತ್ತೂರು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಅರ್ವಾರ್ ಅವರು ಪ್ರಶಿಕ್ಷಣದ ಕುರಿತು ಮಾಹಿತಿ ನೀಡಿದರು.

