ಮಂಗಳೂರು : ಕೆನರಾ ಹೈ ಸ್ಕೂಲ್ ಅಸೋಸಿಯೇಷನ್, ಮಂಗಳೂರು, ಕೆನರಾ ಸಾಂಸ್ಕೃತಿಕ ಅಕಾಡೆಮಿಯ ಪ್ರಾಯೋಜಕತ್ವದಲ್ಲಿ, ಗೋಕುಲಾಷ್ಟಮಿ-2025 ಪ್ರಯುಕ್ತ ಮುದ್ದು ಕೃಷ್ಣ ವೇಷ ಸ್ಪರ್ಧೆವನ್ನು ಭವ್ಯವಾಗಿ ಆಯೋಜಿಸಲಾಯಿತು. ಭಾರತೀಯ ಪರಂಪರೆ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ವಿದ್ಯಾರ್ಥಿ ಹಾಗೂ ಯುವ ಸಮುದಾಯದಲ್ಲಿ ಬೆಳೆಸುವ ಉದ್ದೇಶದಿಂದ ಈ ವಿಶೇಷ ಕಾರ್ಯಕ್ರಮವನ್ನು ನಡೆಸಲಾಯಿತು.
ಒಟ್ಟು ಐದು ವಿಭಾಗಗಳ ಈ ಸ್ಪರ್ಧೆಯಲ್ಲಿ ವಿದುಷಿ ಭಾವನ ವಿಷ್ಣುಮೂರ್ತಿ, ದೀಪಕ್ ಕುಮಾರ್ ಕಿನ್ನಿಮುಲ್ಕಿ, ಪುನೀತ್ ರಾಜ್, ಭಾರ್ಗವಿ ನಾಯಕ್, ನೂತನ್ ಕಾಮತ್ ಹಾಗೂ ರಾಹುಲ್ ಆರ್ ಶ್ರೀಯಾನ್ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು. ಪ್ರತಿ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನಗಳನ್ನು ಪಡೆದುಕೊಂಡವರಿಗೆ ಕ್ರಮವಾಗಿ ₹10,000, ₹5,000 ಮತ್ತು ₹3,000 ನಗದು ಬಹುಮಾನಗಳೊಂದಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಘಟಕರ ಪರವಾಗಿ ಡಿ. ವಾಸುದೇವ ಕಾಮತ್ ಮಾತನಾಡಿ, “ಮಕ್ಕಳಲ್ಲಿ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಬೆಳೆಸುವ ಪ್ರಯತ್ನದಲ್ಲಿ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಮಹತ್ತರ ಪಾತ್ರ ವಹಿಸುತ್ತವೆ” ಎಂದು ಅಭಿಪ್ರಾಯಪಟ್ಟರು.
ಸಂಪೂರ್ಣ ಕಾರ್ಯಕ್ರಮದ ಯಶಸ್ವಿಗೆ ಪಾತ್ರರಾದ ಸಂಘಟಕರು, ಸ್ಪರ್ದಾಳುಗಳು ಹಾಗೂ ಪೋಷಕರು ಮತ್ತು ತೀರ್ಪುಗಾರರು ಅಭಿನಂದ ನಾರ್ಹರಾಗಿದ್ದಾರೆ.
ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಗೋಕುಲಾಷ್ಟಮಿ
