ಮಂಗಳೂರು, ಡಿಸೆಂಬರ್ 24 : ಮಂಗಳೂರು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿರುವ ಚರ್ಚ್ಗಳು, ತಡ ರಾತ್ರಿ ವಿಶೇಷ ಪ್ರಾರ್ಥನೆ, ಬಲಿಪೂಜೆ. ಆಕರ್ಷಣೀಯ ಗೋದಲಿಗಳು, ಅವುಗಳ ಸುತ್ತ ನಕ್ಷತ್ರಗಳ ಮಿಂಚು!

ಏಸು ಕ್ರಿಸ್ತರ ಜನ್ಮ ಸ್ಮರಣೆಯ ಕ್ರಿಸ್ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ಕರಾವಳಿಯಾದ್ಯಂತ ಬುಧವಾರ ರಾತ್ರಿ ಶ್ರದ್ಧಾಪೂರ್ವಕವಾಗಿ ಆಚರಿಸಿ ಸಂಭ್ರಮಿಸಿದರು.
ಮಧ್ಯರಾತ್ರಿ ವೇಳೆಯಲ್ಲಿ ಕ್ರಿಸ್ತ ಜನಿಸಿದ ಕ್ಷಣವನ್ನು ಸ್ಮರಿಸಿ ಚರ್ಚ್ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಸಂಪ್ರದಾಯವಿದ್ದು, ಸಹಸ್ರ ಸಂಖ್ಯೆಯಲ್ಲಿ ಕ್ರೈಸ್ತರು ಬಲಿಪೂಜೆಯಲ್ಲಿ ಭಾಗಿಗಳಾದರು.
ಕೆಥೆಡ್ರಲ್ನಲ್ಲಿ ಕ್ರಿಸ್ಮಸ್ ಹಬ್ಬದ ಬಲಿಪೂಜೆ ಅರ್ಪಿಸಿ ಕ್ರಿಸ್ತ
ಜನನದ ಮಹತ್ವ ಹಾಗೂ ಕ್ರಿಸ್ಮಸ್ ಸಂದೇಶ ನೀಡಿದರು.
ಬಂಟ್ವಾಳ ತಾಲೂಕಿನ ಪೆರುವಾಯಿ ಫಾತಿಮಾ ಮಾತೆ ಚರ್ಚಿನಲ್ಲಿ ಫಾದರ್ ಸೈಮನ್ ಡಿಸೋಜಾ ನೇತೃತ್ವದಲ್ಲಿ ಬಲಿ ಪೂಜೆ ನೆರವೇರಿತು. ಸಹಸ್ರ ಸಂಖ್ಯೆಯಲ್ಲಿ ಭಕ್ತರು ಬಲಿಪೂಜೆಯಲ್ಲಿ ಭಾಗವಹಿಸಿದರು.
ಕ್ರಿಸ್ಮಸ್ ಹಿನ್ನೆಲೆಯಲ್ಲಿ ವಿದೇಶ, ದೂರದೂರುಗಳಲ್ಲಿರುವ ಕ್ರೈಸ್ತ ಬಾಂಧವರು ಊರಿಗೆ ಮರಳಿದ್ದು ಕುಟುಂಬದೊಂದಿಗೆ ಸೇರಿ ಹಬ್ಬ ಆಚರಣೆಯಲ್ಲಿ ತೊಡಗಿಕೊಂಡರು. ಹಬ್ಬದ ಹಿನ್ನೆಲೆಯಲ್ಲಿ ಚರ್ಚ್ ಗಳಲ್ಲಿ ಎಂದಿಗಿಂತಲೂ ಹೆಚ್ಚಿನ ಜನಸ್ತೋಮವಿತ್ತು.