DAKSHINA KANNADAHOMELATEST NEWS

ವಾಟ್ಸಪ್‌ ಸ್ಟೇಟಸ್‌ನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ: ಓರ್ವನ ವಿರುದ್ಧ FIR

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಸಂದೇಶ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಓರ್ವನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ರಕ್ಷಿತ್‌ ಶೆಟ್ಟಿ ಎಂದು ಗುರುತಿಸಲಾಗಿದೆ.

ಪ್ರಕರಣದ ವಿವರ

ರಕ್ಷಿತ್‌ ಶೆಟ್ಟಿ ಎಂಬಾತನು ತನ್ನ ವಾಟ್ಸಪ್‌ ಸ್ಟೇಟಸ್‌ ನಲ್ಲಿ ಧರ್ಮ‌ಧರ್ಮಗಳ ನಡುವೆ ವೈಮನಸ್ಯ ಉಂಟಾಗುವಂತೆ ಹಾಗೂ ಭೀತಿಯನ್ನು ಹುಟ್ಟಿಸುವಂತಹ ಸಂದೇಶವನ್ನು ಹಾಕಿದ್ದು, ಈ  ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 69/2025, ಕಲಂ:353(1)(ಬಿ), 353(2) ಬಿಎನ್‌ ಎಸ್ 2023 ರಂತೆ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Share News