ಮಂಗಳೂರು, ಅ. 02 : ಸ್ವಾತಂತ್ರ ಹೋರಾಟದಲ್ಲಿ ಮಹಾತ್ಮ ಗಾಂಧೀಜಿಯವರ ಪಾತ್ರ ಸ್ಮರಣೀಯ. ಯುವಜನತೆ ಗಾಂಧೀಜಿಯವರ ಸಂದೇಶವನ್ನು ಅರ್ಥೈಸಿಕೊಂಡು ಅವರ ಜೀವನ ಚರಿತ್ರೆಯನ್ನು ತಿಳಿದುಕೊಳ್ಳಬೇಕು ಎಂದು ಅರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಜನರು ಪರಸ್ಪರ ಸಹೋದರತ್ವ, ಪ್ರೀತಿ ಗೌರವವನ್ನು ನೀಡುವ ಮೂಲಕ ಸಹಬಾಳ್ವೆಯಿಂದ ಇದ್ದರೆ ನಮ್ಮ ದೇಶದಲ್ಲಿ ನಡೆಯುವ ಹಿಂಸಾತ್ಮಕ ಘಟನೆಗಳನ್ನು ತಪ್ಪಿಸಬಹುದು ಎಂದು ಸಚಿವರು ಹೇಳಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಸಚಿವರು ಬಹುಮಾನಗಳನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ ಎಂ ಶಹೀದ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ, ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ, ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಪೊಲೀಸ್ ಅಧೀಕ್ಷಕ ಅರುಣ್, ಭಾರತ ಸೇವಾದಳ ಕೇಂದ್ರ ನಿರ್ದೇಶಕ ಬಶೀರ್ ಬೈಕಂಪಾಡಿ, ಟಿ ಕೆ ಸುಧೀರ್ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ಸ್ವಾಗತಿಸಿದರು. ಸೈದುದ್ದೀನ್ ನಿರೂಪಿಸಿದರು.