ಮಂಗಳೂರು, ಮಾರ್ಚ್ 13: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ (LPG) ಸಿಲಿಂಡರ್ಗಳ ದಾಸ್ತಾನು ಸಮರ್ಪಕವಾಗಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ದಿನಗಳಲ್ಲಿ ಅಡುಗೆ ಅನಿಲದ ಕೊರತೆಯಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುಳ್ಳು ವದಂತಿಗಳನ್ನು ಸಾರ್ವಜನಿಕರು ನಂಬಬಾರದು ಜಿಲ್ಲೆಯಲ್ಲಿ ಸಿಲಿಂಡರ್ಗಳ ಕೊರತೆ ಇಲ್ಲದಿರುವುದರಿಂದ ಗ್ರಾಹಕರು ಹೆಚ್ಚುವರಿ ದಾಸ್ತಾನು ಮಾಡಿಕೊಳ್ಳುವ ಅಗತ್ಯವಿಲ್ಲ ಮತ್ತು ಭಯ ಭೀತರಾಗ ಬಾರದು ಎಂದು ಸ್ಪಷ್ಟಪಡಿಸಲಾಗಿದೆ.
ಗ್ಯಾಸ್ ಸಿಲಿಂಡರ್ ಕುಂದುಕೊರತೆಗಳಿಗಾಗಿ ಸಹಾಯವಾಣಿ:0824-2423622
ಗೃಹ ಬಳಕೆ ಅಡುಗೆ ಅನಿಲ ಸರಬರಾಜಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಯಾವುದೇ ದೂರು ಅಥವಾ ಕುಂದುಕೊರತೆಗಳಿದ್ದಲ್ಲಿ ತಕ್ಷಣ ದಕ್ಷಿಣ ಕನ್ನಡ ಜಿಲ್ಲಾಡಳಿತದ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.
ಗೃಹ ಬಳಕೆ ಅಡುಗೆ ಅನಿಲ ಸರಬರಾಜಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಯಾವುದೇ ದೂರು ಅಥವಾ ಕುಂದುಕೊರತೆಗಳಿದ್ದಲ್ಲಿ ತಕ್ಷಣ ದಕ್ಷಿಣ ಕನ್ನಡ ಜಿಲ್ಲಾಡಳಿತದ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.