ಮಂಗಳೂರು, ಜೂನ್ 23: ದೇಶದ ಏಕತೆ ಮತ್ತು ಅಖಂಡತೆಗಾಗಿ ತಮ್ಮ ಪ್ರಾಣವನ್ನೇ ಮುಡುಪಾಗಿಟ್ಟ ಮಹಾನ್ ರಾಷ್ಟ್ರಭಕ್ತ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ‘ಬಲಿದಾನ್ ದಿವಸ್’ ಸಂಸ್ಮರಣ ಕಾರ್ಯಕ್ರಮ ವು ಮಂಗಳೂರಿನ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ಇಂದು ಜರುಗಿತು. ಕಾರ್ಯಕ್ರಮದ ಆರಂಭದಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.