• Home  
  • ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇ-ಹುಂಡಿ ಅಳವಡಿಕೆ
- DAKSHINA KANNADA - HOME - LATEST NEWS

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇ-ಹುಂಡಿ ಅಳವಡಿಕೆ

ಮಂಗಳೂರು: ಕಟೀಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆ.6ರಂದು ಕೆನರಾ ಬ್ಯಾಂಕ್ ಇ-ಹುಂಡಿಯನ್ನು (E Hundi) ಅಳವಡಿಸಿದೆ. ಕೆನರಾ ಬ್ಯಾಂಕ್‌ನ ಮಂಗಳೂರು ವಲಯ ಮುಖ್ಯಸ್ಥರಾದ ಮಂಜುನಾಥ್ ಬಿ. ಸಿಂಗೈ ಅವರ ಸಮ್ಮುಖದಲ್ಲಿ, ದೇವಳದ ಆನುವಂಶಿಕ ಮೊಕ್ತೇಸರರಾದ  ಸನತ್ ಕುಮಾರ್ ಶೆಟ್ಟಿ ಮತ್ತು  ಹರಿನಾರಾಯಣದಾಸ ಅಸ್ರಣ್ಣ ಅವರು ಉದ್ಘಾಟಿಸಿದರು. ಈ ಇ-ಹುಂಡಿ ಸೌಲಭ್ಯವು ಭಕ್ತರಿಗೆ ಡಿಜಿಟಲ್ ರೂಪದಲ್ಲಿ ಕಾಣಿಕೆ ಸಲ್ಲಿಸಲು ಸಹಾಯ ಮಾಡುತ್ತದೆ. ಈ ಭಾಗದ ದೇವಾಲಯ/ಸಂಸ್ಥೆಗಳಲ್ಲಿ ಕೆನರಾ ಬ್ಯಾಂಕ್ ಅಳವಡಿಸಿರುವ ಆರನೇ ಇ-ಹುಂಡಿ ಇದಾಗಿದೆ. ಈ ಸಂದರ್ಭದಲ್ಲಿ ಬ್ಯಾಂಕಿನ […]

Share News

ಮಂಗಳೂರು: ಕಟೀಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆ.6ರಂದು ಕೆನರಾ ಬ್ಯಾಂಕ್ ಇ-ಹುಂಡಿಯನ್ನು (E Hundi) ಅಳವಡಿಸಿದೆ.

ಕೆನರಾ ಬ್ಯಾಂಕ್‌ನ ಮಂಗಳೂರು ವಲಯ ಮುಖ್ಯಸ್ಥರಾದ ಮಂಜುನಾಥ್ ಬಿ. ಸಿಂಗೈ ಅವರ ಸಮ್ಮುಖದಲ್ಲಿ, ದೇವಳದ ಆನುವಂಶಿಕ ಮೊಕ್ತೇಸರರಾದ  ಸನತ್ ಕುಮಾರ್ ಶೆಟ್ಟಿ ಮತ್ತು  ಹರಿನಾರಾಯಣದಾಸ ಅಸ್ರಣ್ಣ ಅವರು ಉದ್ಘಾಟಿಸಿದರು.
ಈ ಇ-ಹುಂಡಿ ಸೌಲಭ್ಯವು ಭಕ್ತರಿಗೆ ಡಿಜಿಟಲ್ ರೂಪದಲ್ಲಿ ಕಾಣಿಕೆ ಸಲ್ಲಿಸಲು ಸಹಾಯ ಮಾಡುತ್ತದೆ.

ಈ ಭಾಗದ ದೇವಾಲಯ/ಸಂಸ್ಥೆಗಳಲ್ಲಿ ಕೆನರಾ ಬ್ಯಾಂಕ್ ಅಳವಡಿಸಿರುವ ಆರನೇ ಇ-ಹುಂಡಿ ಇದಾಗಿದೆ. ಈ ಸಂದರ್ಭದಲ್ಲಿ ಬ್ಯಾಂಕಿನ ಉಪ ಮಹಾಪ್ರಬಂಧಕರುಗಳಾದ  ಲತಾ ಕುರುಪ್ ಮತ್ತು ಎಲ್. ಆರ್. ವಿಜಯಶ್ರೀ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share News