
ಮಂಗಳೂರು, ಬಿಹಾರದಲ್ಲಿ ಚುನಾವಣಾ ಫಲಿತಾಂಶದ ಕುರಿತು ಮಂಗಳೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಹಾಗೂ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ನಾಯಕರ ವೋಟ್ ಚೋರಿ ಸುಳ್ಳು ಆರೋಪಕ್ಕೆ ಬಿಹಾರ ರಾಜ್ಯದ ಜನತೆ ತಕ್ಕ ಉತ್ತರ ಕೊಟ್ಟಿದ್ದಾರೆ. ಅಲ್ಲದೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯವನ್ನು ಜನರು ನೆಚ್ಚಿಕೊಂಡಿದ್ದಾರೆ. ಹೀಗಾಗಿ ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟಕ್ಕೆ ಭರ್ಜರಿ ಜಯ ಸಿಕ್ಕಿದೆ ಎಂದು ಹೇಳಿದರು.ದೇಶದಲ್ಲಿ ಪಕ್ಷ ಇನ್ನೂ ಬಲಿಷ್ಠ ವಾಗಿ ಸಂಘಟನೆ ಯಾಗಲಿದೆ ಎಂದು ಹೇಳಿದರು. ಈ ಚುನಾವಣಾ ಫಲಿತಾಂಶ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಅಸ್ತಿತ್ವಕ್ಕೂ ಧಕ್ಕೆ ತರಲಿದೆ ಎಂದು ಅಭಿಪ್ರಾಯ ಪಟ್ಟರು.


