• Home  
  • ಮಂಜೇಶ್ವರ: 18ರ ಹರೆಯದ ಮಗಳನ್ನೇ ಬರ್ಬರ ಹತ್ಯೆಗೈದ ಪಾಪಿ ತಂದೆ
- DAKSHINA KANNADA - HOME - LATEST NEWS

ಮಂಜೇಶ್ವರ: 18ರ ಹರೆಯದ ಮಗಳನ್ನೇ ಬರ್ಬರ ಹತ್ಯೆಗೈದ ಪಾಪಿ ತಂದೆ

ಮಂಜೇಶ್ವರ: ತಂದೆಯೋರ್ವ ತನ್ನ ಮಗಳನ್ನೇ ಕೊಚ್ಚಿ ಕೊಲೆ ಗೈದ ದಾರುಣ ಘಟನೆಯೊಂದು ಮಂಜೇಶ್ವರ ಸಮೀಪದ ಕುಂಜತ್ತೂರು ತೂಮಿನಾಡು ಎಂಬಲ್ಲಿ ಇಂದು ಸಂಜೆ ನಡೆದಿದೆ. ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣ ಎಂದು ತಿಳಿದುಬಂದಿದೆ. ತೂಮಿನಾಡಿನ ಜುಮೈಲಾ(18) ಕೊಲೆಗೀಡಾದ ಯುವತಿ. ಕೃತ್ಯ ನಡೆಸಿದ ಆರೋಪದಲ್ಲಿ ತಂದೆ ಉಮ್ಮರ್ ಫಾರೂಕ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿರುಚಾಟದ ಶಬ್ದ ಕೇಳಿ ಪರಿಸರ ವಾಸಿಗಳು ಸ್ಥಳಕ್ಕೆ ಬಂದಾಗ ಜುಮೈಲಾ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಜೀವ […]

Share News

ಮಂಜೇಶ್ವರ: ತಂದೆಯೋರ್ವ ತನ್ನ ಮಗಳನ್ನೇ ಕೊಚ್ಚಿ ಕೊಲೆ ಗೈದ ದಾರುಣ ಘಟನೆಯೊಂದು ಮಂಜೇಶ್ವರ ಸಮೀಪದ ಕುಂಜತ್ತೂರು ತೂಮಿನಾಡು ಎಂಬಲ್ಲಿ ಇಂದು ಸಂಜೆ ನಡೆದಿದೆ. ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣ ಎಂದು ತಿಳಿದುಬಂದಿದೆ.


ತೂಮಿನಾಡಿನ ಜುಮೈಲಾ(18) ಕೊಲೆಗೀಡಾದ ಯುವತಿ. ಕೃತ್ಯ ನಡೆಸಿದ ಆರೋಪದಲ್ಲಿ ತಂದೆ ಉಮ್ಮರ್ ಫಾರೂಕ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಿರುಚಾಟದ ಶಬ್ದ ಕೇಳಿ ಪರಿಸರ ವಾಸಿಗಳು ಸ್ಥಳಕ್ಕೆ ಬಂದಾಗ ಜುಮೈಲಾ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಜೀವ ಉಳಿಸಲಾಗಲಿಲ್ಲ, ಕೃತ್ಯ ನಡೆಯುವ ಸಮಯದಲ್ಲಿ ತಾಯಿ ಕೂಡಾ ಮನೆಯಲ್ಲಿದ್ದರು ಎಂದು ತಿಳಿದುಬಂದಿದೆ. ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ವಿದೇಶದಲ್ಲಿದ್ದ ಉಮ್ಮರ್ ಫಾರೂಕ್ ಮೂರು ತಿಂಗಳ ಹಿಂದೆ ಊರಿಗೆ ಬಂದಿದ್ದು, ಆಸ್ತಿಗಾಗಿ ಕುಟುಂಬದಲ್ಲಿ ಜಗಳ ನಡೆಯುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಮಂಜೇಶ್ವರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Share News