canaratvnews

ನಂತೂರಿನಲ್ಲಿ ಅಪಘಾತ ಪ್ರಕರಣ: ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ದ FIR- ಕಮೀಷನರ್‌

ಮಂಗಳೂರು: ನಗರದ ನಂತೂರಿನಲ್ಲಿ ಬಸ್ಸು ಚಾಲಕನ ಬೇಜವಾಬ್ದಾರಿಯಿಂದ ಯುವತಿ ಸಾವನ್ನಪ್ಪಿದ್ದಾಳೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.


ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಗರ ಖಾಸಗಿ ಬಸ್ಸುಗಳ ಓಡಾಟದ ಧಾವಂತಕ್ಕೆ ಒಂದು ಜೀವ ಹೋಗಿದೆ. ಆರೋಪಿ ಬಸ್ಸು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ನಡೆಸಿ ಆರೋಪಿಗೆ ಶಿಕ್ಷೆ ಆಗುತ್ತಿದೆ ಎಂದರು. ಇನ್ನು ಮೃತಳ ಪಾರ್ಥೀವ ಶರೀರವನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುವುದು ಸರಿಯಲ್ಲ. ಎಲ್ಲವೂ ಕಾನೂನುಬದ್ಧವಾಗಿಯೇ ಆಗುತ್ತದೆ.

ನಿರ್ಲಕ್ಷ್ಯಕ್ಕೆ ಏನು ಶಿಕ್ಷೆ ಇದೆ ಅದು ಚಾಲಕನಿಗೆ ಆಗೇ ಆಗುತ್ತದೆ. ಇದರ ಜೊತೆಗೆ ಕಾನೂನು ವಿರುದ್ಧವಾಗಿ ಇವತ್ತು ಕದ್ರಿ ಪೊಲೀಸ್‌ ಠಾಣೆಯ ಮುಂದೆ ಶವ ವಿಟ್ಟು ಪ್ರತಿಭಟನೆ ನಡೆಸಿದವರ ವಿರುದ್ಧವೂ ಪ್ರಕರಣ ದಾಖಲಾಗುತ್ತದೆ.  ಬಸ್ಸು ಚಾಲಕರಿಗೆ ನೀಡಲಾದ ಟೈಮಿಂಗ್ಸ್ ವಿಚಾರದಲ್ಲೂ ಈ ದುರಂತ ಸಂಭವಿಸುವ ಸಾಧ್ಯತೆ ಇದೆ ಎಂದರು.

Share News
Exit mobile version