ಮಂಗಳೂರು, ಮಾರ್ಚ್ 15: ಮಂಗಳೂರು ಮಹಾನಗರ ಪಾಲಿಕೆ ಸುರತ್ಕಲ್ ವಲಯ, ಉತ್ಕರ್ಷ ಚಾರಿಟೇಬಲ್ ಟ್ರಸ್ಟ್ ಮತ್ತು ವೆಲ್ಫೇರ್ (UCWT) ಹಾಗೂ ಮಂಗಳೂರಿನ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ‘ವಿಶ್ವ ಮಹಿಳಾ ದಿನಾಚರಣೆ’ಯ ಅಂಗವಾಗಿ ಪೌರ ಕಾರ್ಮಿಕರಿಗಾಗಿ ವಿಶೇಷ ಕಾರ್ಯಕ್ರಮ ಹಾಗೂ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.

ಪ್ರಸಾದ ನೇತ್ರಾಲಯದ ಡಾ. ಸಾಗರ್ ಅವರ ನೇತೃತ್ವದ ತಂಡವು ಪೌರ ಕಾರ್ಮಿಕರಿಗೆ ಉಚಿತ ಕಣ್ಣಿನ ತಪಾಸಣೆ ನಡೆಸಿ, ಅಗತ್ಯ ಸಲಹೆಗಳನ್ನು ನೀಡಿತು. ಮಹಿಳಾ ಕಾರ್ಮಿಕರಿಗಾಗಿ ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ‘ಕಸದಿಂದ ರಸ’ ಎಂಬ ವಿಶೇಷ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ವಲಯ ಆಯುಕ್ತರು ಬಹುಮಾನಗಳನ್ನು ವಿತರಿಸಿದರು. ನಂತರ ಮಹಿಳೆಯರಿಗಾಗಿ ಮನೋರಂಜನಾ ಆಟಗಳನ್ನು (Fun Games) ಆಯೋಜಿಸುವ ಮೂಲಕ ದಿನವನ್ನು ಸಂಭ್ರಮಿಸಲಾಯಿತು.

