• Home  
  • ಜಿಲ್ಲಾಧಿಕಾರಿಗೆ ತಾವೇ ಬೆಳೆದ ತರಕಾರಿ ನೀಡಿದ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿಗಳು
- DAKSHINA KANNADA - LATEST NEWS

ಜಿಲ್ಲಾಧಿಕಾರಿಗೆ ತಾವೇ ಬೆಳೆದ ತರಕಾರಿ ನೀಡಿದ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿಗಳು

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬುಧವಾರ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿ ಮಾಡಿ ತಾವು ತಮ್ಮ ಶಾಲೆಯ ಆವರಣದಲ್ಲಿ  ಬೆಳೆಸಿದ ತರಕಾರಿಯನ್ನು ನೀಡಿದರು.

ಮಕ್ಕಳೊಂದಿಗೆ ಕೆಲ ಕಾಲ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು  ಶಾಲೆಯಲ್ಲಿ ಮಕ್ಕಳು  ನಡೆಸುವ ಕೃಷಿ ಚಟುವಟಿಕೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಶೀಘ್ರವೇ ಶಾಲೆಗೂ ಭೇಟಿ ನೀಡುವುದಾಗಿ ತಿಳಿಸಿದರು.

ಈ ವೇಳೆ ಶಾಲಾಭಿವೃದ್ಫಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್, ಶಾಲಾ ಮುಖ್ಯೋಪಾಧ್ಯಾಯಿನಿ ಜ್ಯೋತಿ .ಎ. ಎನ್, ಹಳೆ ವಿದ್ಯಾರ್ಥಿ ಸಂಘದ ಶಿವರಾಜ್, ದಕ್ಷಿಣ ಕನ್ನಡ ಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್‌ಇಂದಾಜೆ ಹಾಗೂ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್‌ ಅವರನ್ನು ಭೇಟಿ ಮಾಡಿ ಅವರಿಗೂ ವಿದ್ಯಾರ್ಥಿಗಳು ತರಕಾರಿ ನೀಡಿದರು.

Share News

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678