canaratvnews

ಮಂಗಳೂರಿನಲ್ಲಿ ಭಾರೀ ಮಳೆಗೆ ಮನೆ ಕುಸಿತ: ಮೂವರ ದುರ್ಮರಣ

ಮಂಗಳೂರು: ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ಬುಧವಾರ ಮುಂಜಾನೆ ಸುರಿದ ಭಾರೀ ಗಾಳಿ-ಮಳೆಗೆ ಮನೆಯೊಂದು ಕುಸಿದ ಪರಿಣಾಮ ಮಹಿಳೆಯೊಬ್ಬರು ಹಾಗೂ ಇಬ್ಬರು ಹೆಣ್ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.

ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಅವಘಡದ ವೇಳೆ ಒಟ್ಟು ಆರು ಮಂದಿ ಮನೆಯಲ್ಲಿ ಇದ್ದರು. ಅವರಲ್ಲಿ ಮೂವರು ಮೃತಪಟ್ಟಿದ್ದು, ಉಳಿದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆಯೇ ಎನ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News
Exit mobile version