ಮಂಗಳೂರು : ಮಾನಸಿಕ ರೋಗಿಗಳ ಸಾಮಾಜಿಕ ಪುನರ್ವಸತಿಗಾಗಿ ಸ್ಥಾಪಿಸಲ್ಪಟ್ಟು ಅಮೋಘ ಸೇವೆಯಲ್ಲಿ ನಿರತವಾಗಿರುವ ಸ್ನೇಹಾಲಯ ಸಂಸ್ಥೆಯು ತಮ್ಮ ವ್ಯಸನ ನಿವಾರಣಾ ಕೇಂದ್ರದಲ್ಲಿ ಹೊಸದಾಗಿ ನಿರ್ಮಿಸಲಾದ ಟೆರೇಸ್ ರೂಫಿಂಗ್ ಮತ್ತು ನೆಲಹಾಸಿನ ಉದ್ಘಾಟನೆಯನ್ನು ನೆರವೇರಿಸಿದರು.

ಈ ಸೌಲಭ್ಯವನ್ನು ಮಂಗಳೂರಿನ MRPLಸಂಸ್ಥೆಯ ಸಾಂಸ್ಥಿಕ ಸಮಾಜಿಕ ಯೋಜನೆಯಡಿ( CSR ಉಪಕ್ರಮದ ಅಡಿಯಲ್ಲಿ) ಪ್ರೋತ್ಸಾಹಿಸಲ್ಪಟ್ಟು ಸದರಿ ಸೌಲಭ್ಯವನ್ನು ವ್ಯಸನ ಮುಕ್ತ ಸಮಾಜಕಾಗಿ ರೊಗಿಗಳ ಚೇತರಿಕೆಯ ಹಾದಿಯಲ್ಲಿ ಸಬಲೀಕರಣಗೊಳ್ಳುವ ಅಭಿವ್ಯಕ್ತಿಶೀಲ ಕಲಾ ಚಿಕಿತ್ಸೆ ಮತ್ತು ವಿವಿಧ ಗುಣಪಡಿಸುವ ಶಾರಿರಿಕ್ ಹಾಗು ಮನಾಸಿಕ ಚಟುವಟಿಕೆಗಳಿಗೆ ಮೀಸಲಿಡಲಾಗುವುದು. .

ಉದ್ಘಾಟನಾ ಸಮಾರಂಭವು ಬಹಳ ಅರ್ಥಪೂರ್ಣವಾಗಿತ್ತು ಮತ್ತು ಹೃದಯಸ್ಪರ್ಶಿ ಕಾರ್ಯಕ್ರಮವಾಗಿತ್ತು, ಹಲವಾರು ಗಣ್ಯ ಅತಿಥಿಗಳ ಉಪಸ್ಥಿತಿಯಿಂದ ಕಾರ್ಯಕ್ರಮದ ಮೆರುಗು ಅಲಂಕರಿಸಲ್ಪಟ್ಟಿತು. MRPL ನ CSR ವಿಭಾಗದ ಹಿರಿಯ ವ್ಯವಸ್ಥಾಪಕ ಶ್ರೀ ಕೆ. ನಾಗರಾಜ್ ರಾವ್ ಅವರು ಮುಖ್ಯ ಅತಿಥಿಯಾಗಿ ಹಾಜರಿದ್ದು MRPL-ONGC ಮಂಗಳೂರಿನ ಗ್ರೂಪ್ ಜನರಲ್ ಮ್ಯಾನೇಜರ್ ಶ್ರೀ ಕೃಷ್ಣ ಹೆಗ್ಡೆ ಮಿಯಾರ್ ಅವರ ಪರವಾಗಿ ರಿಬ್ಬನ್ ಕತ್ತರಿಸುವ ಮೂಲಕ ಹೊಸ ಸೌಲಭ್ಯವನ್ನು ಉದ್ಘಾಟಿಸಿದರು.ನೆರೆದ ಅತಿಥಿಗಳು ದೀಪ ಬೆಳಗಿಸ್ಸಿ, ಹಾಗೂ ವನಮಹೋತ್ಸವ ಸಾಂಕೇತಿಸಲು ಗಿಡನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
.

ಮುಖ್ಯ ಅತಿಥಿಗಳಾಗಿ ಗೌರವಾನ್ವಿತ ಶ್ರೀ ಜಾನ್ ಬಿ. ಮೊಂತೆರೊ, ರಚನಾ ಕ್ಯಾಥೊಲಿಕ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ, ಮಂಗಳೂರು ಪೂಜ್ಯ ಶ್ರೀ ರಾಜ ಬಲ್ಚಡ, ಅರಸು ಮಂಜಿಹ್ನಾರ್ ಕ್ಷೇತ್ರ, ಉದ್ಯಾವರ ಮಾಡ ಸ್ನೇಹಾಲಯದ ಚಾಪ್ಲಿನ್ ರೆವರೆಂಡ್ ಫಾದರ್ ಸಿರಿಲ್ ಡಿ’ಸೋಜಾ ಮಂಗಳೂರಿನ ಪ್ರೇರಣಾ ಭಾಷಣಕಾರರಾದ ಶ್ರೀ ರಫೀಕ್ ಮಾಸ್ಟರ್ ಸ್ನೇಹಾಲಯದ ಸ್ಥಾಪಕ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಬ್ರದರ್ ಜೋಸೆಫ್ ಕ್ರಾಸ್ತಾ ಅವರು ಅತಿಥಿಗಳನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದರು ಮತ್ತು ಸಂಸ್ಥೆಯ ಧ್ಯೇಯದ ಆಶಯ ವ್ಯಕ್ತ ಪಡಿಸಿದರು. ಸ್ನೇಹಾಲಯವನ್ನು ವ್ಯಸನದಿಂದ ಮುಕ್ತಿ ಬಯಸುವವರಿಗೆ ಒಂದು ಪವಿತ್ರ ಸ್ಥಳವನ್ನಾಗಿ ರೂಪಿಸಿದ ಸಮರ್ಪಣೆಯನ್ನು ಅವರ ಮಾತುಗಳು ಪ್ರತಿಧ್ವನಿಸಿದವು. ಕಾರ್ಯಕ್ರಮವನ್ನು ಸೊಗಸಾಗಿ ಶ್ರೀ ಜಿಯೋ ಡಿಸಿಲ್ವಾ ಅವರು ನೀರೂಪಿಸಿದರು. ಶ್ರೀಮತಿ ಒಲಿವಿಯಾ ಕ್ರಾಸ್ತಾ ಸ್ನೇಹಾಲಯದ ಕಾರ್ಯದರ್ಶಿಗಳು ಅತಿಥಿಗಳಿಗೆ, ವಿಶೇಷವಾಗಿ MRPL ಮಂಗಳೂರು ಇವರಿಗೆ ಮತ್ತು ಈ ಕನಸನ್ನು ನನಸಾಗಿಸಲು ಬೆಂಬಲ ನೀಡಿದ ಎಲ್ಲರಿಗೂ ಅಂತರಾಳದ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.

ಜೀವನ ಪರಿವರ್ತನೆಗೆ ಸ್ನೇಹಾಲಯದ ಅಚಲ ಬದ್ಧತೆಯನ್ನು ಅತಿಥಿ ಭಾಷಣಕಾರರು ಶ್ಲಾಘಿಸಿದರು, ಹೊಸ ಟೆರೇಸ್ ಜಾಗವು ಸೃಜನಶೀಲತೆ ಮತ್ತು ಅಭಿವ್ಯಕ್ತಿಯ ಮೂಲಕ ಗುಣಪಡಿಸುವಲ್ಲಿ ಹೇಗೆ ಪ್ರಮುಖ ಪಾತ್ರ ವಹಿಸುತ್ತದೆ ಎಂಬುದನ್ನು ಒತ್ತಿ ಹೇಳಿದರು. ಅವರ ಹೃತ್ಪೂರ್ವಕ ಸಂದೇಶಗಳು ಸಹಾನುಭೂತಿಯ ಸೇವೆ ಮತ್ತು ಜವಾಬ್ದಾರಿಯುತ ಕಾರ್ಪೊರೇಟ್ ಪೌರತ್ವವು ಇಲ್ಲಿ ಸ್ವರ್ಗವನ್ನು ರೂಪಿಸಬಹುದು ಎಂಬ ಪ್ರಭಾವದ ಸಂದೇಶವನ್ನು ನೀಡಿದರು.