• Home  
  • ಖಾಯಂ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳ ತ್ವರಿತ ವಿಲೇವಾರಿ
- DAKSHINA KANNADA - HOME

ಖಾಯಂ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳ ತ್ವರಿತ ವಿಲೇವಾರಿ

ಮಂಗಳೂರು ಜು. 28: ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಖಾಯಂ ಜನತಾ ನ್ಯಾಯಾಲಯದಲ್ಲಿ ವಿವಿಧ ಪ್ರಕರಣಗಳನ್ನು ಅತ್ಯಂತ ಸರಳ ಮತ್ತು ಸುಲಲಿತವಾಗಿ ಇತ್ಯರ್ಥಪಡಿಸಲಾಗುತ್ತದೆ ಎಂದು ಜನತಾ ನ್ಯಾಯಾಲಯದ ಅಧ್ಯಕ್ಷ ಹಾಗೂ ನ್ಯಾಯಾಧೀಶ ಜೈಶಂಕರ್ ಅವರು ತಿಳಿಸಿದರು.
ಅವರು ಸೋಮವಾರ ಜನತಾ ನ್ಯಾಯಾಲಯ ಕಚೇರಿಯಲ್ಲಿ ವಿವಿಧ ಇಲಾಖೆ ಮತ್ತು ಸಂಸ್ಥೆಗಳ ಸಭೆ ನಡೆಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಖಾಯಂ ಜನತಾ ನ್ಯಾಯಾಲಯದಲ್ಲಿ ನ್ಯಾಯಾಧೀಶರು ಮತ್ತು ಇಬ್ಬರು ಸದಸ್ಯರಿದ್ದಾರೆ. ಸಾರ್ವಜನಿಕ ಸೇವೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಇಲ್ಲಿ ಇತ್ಯರ್ಥಪಡಿಸಲಾಗುತ್ತಿದೆ. ಪ್ರಕರಣ ದಾಖಲು ಪ್ರಕ್ರಿಯೆ ಅತ್ಯಂತ ಸರಳವಾಗಿದ್ದು ಅತಿ ಕಡಿಮೆ ಅವಧಿಯಲ್ಲಿ ಪ್ರಕರಣವನ್ನು ಇತ್ಯರ್ಥ ಪಡಿಸಲಾಗುತ್ತಿದೆ ಎಂದು ಅವರ ತಿಳಿಸಿದರು.
ಖಾಯಂ ಜನತಾ ನ್ಯಾಯಾಲಯವು ಪರ್ಯಾಯ ಪರಿಹಾರ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ಪೂರ್ಣ ಪ್ರಮಾಣದ ನ್ಯಾಯಾಧೀಶರೇ ಸೇವೆಯಲ್ಲಿರುತ್ತಾರೆ. ಸರಳ ದಾಖಲೆ ಪ್ರಕ್ರಿಯೆ ಮತ್ತು ಅಗತ್ಯವಿದ್ದರೆ ಮಾತ್ರ ಸಾಕ್ಷಿ ವಿಚಾರಣೆ ನಡೆಯಲಿದೆ. ಯಾವುದೇ ನ್ಯಾಯಾಲಯ ಶುಲ್ಕ ಇರುವುದಿಲ್ಲ ಎಂದು ಅವರು ತಿಳಿಸಿದರು.
ಸಾರಿಗೆ ಸೇವೆ, ಅಂಚೆ, ವಿದ್ಯುತ್, ಬ್ಯಾಂಕಿಂಗ್ ಮತ್ತು ಹಣಕಾಸು ಸಂಸ್ಥೆ, ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್, ವಿಮೆ, ವೈದ್ಯಕೀಯ ನಿರ್ಲಕ್ಷ್ಯತೆ ಮತ್ತಿತರ ಪ್ರಕರಣಗಳನ್ನು ಇಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ವಿವಿಧ ಸಾಲ ಸಂಬಂಧಿತ ವ್ಯಾಜ್ಯಗಳನ್ನು ಇಲ್ಲಿ ಪರಿಹರಿಸಿಕೊಳ್ಳಬಹುದಾಗಿದೆ. ಇಲ್ಲಿನ ಆದೇಶವು ಅಂತಿಮವಾಗಿದ್ದು ಮೇಲ್ಮನವಿಗೆ ಅವಕಾಶವಿಲ್ಲ. ರೂ.1 ಕೋಟಿವರೆಗಿನ ಮೊತ್ತದ ಪ್ರಕರಣಗಳನ್ನು ಇಲ್ಲಿ ಇತ್ಯರ್ಥಗೊಳಿಸಲಾಗುತ್ತದೆ. ಅತಿ ಸಣ್ಣ ಮೊತ್ತದ ಪ್ರಕರಣಗಳನ್ನು ಕೂಡಾ ಇಲ್ಲಿ ದಾಖಲಿಸಬಹುದು ಎಂದು ಅವರು ತಿಳಿಸಿದರು.
ಖಾಯಂ ಜನತಾ ನ್ಯಾಯಾಲಯವು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಸಂಕೀರ್ಣದ 6 ನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿದೆ. ಮಂಗಳೂರು, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ವ್ಯಾಪ್ತಿಯನ್ನು ಹೊಂದಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶೆ ಜೈಬುನ್ನೀಸಾ, ಖಾಯಂ ಜನತಾ ನ್ಯಾಯಾಲಯದ ಸದಸ್ಯರಾದ ಫಜಲ್ ರಹೀಮ್, ಲಾವಣ್ಯ ರೈ ಹೆಗ್ಡೆ ಉಪಸ್ಥಿತರಿದ್ದರು.

Share News

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678