ಬೆಂಗಳೂರು ಜೂನ್ 19 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೆಲವು ಅಹಿತಕರ ಘಟನೆಗಳ ವಾಸ್ತವ ಮತ್ತು ನೈಜತೆಯ ವರದಿ ಪಡೆಯಲು *ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಕಳುಹಿಸಿದ್ದ* ಎಐಸಿಸಿ ಪ್ರಧಾನ ಕಾರ್ಯದರ್ಶಿ *ಶ್ರೀ ಸೈಯದ್ ನಾಸೀರ್ ಹುಸೇನ್* ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಶಾಸಕರಾದ *ಶ್ರೀ ಮಂಜುನಾಥ ಭಂಡಾರಿ* ರವರ ನೇತೃತ್ವದ ನಿಯೋಗವು ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸ್ತವ್ಯ ಹೂಡಿ ಎಲ್ಲಾ ಧರ್ಮ, ಸಮುದಾಯದ ಮುಖಂಡರುಗಳನ್ನ ಭೇಟಿ ಮಾಡಿ ವರದಿಯನ್ನು ತಯಾರಿಸಿ ಅದನ್ನು *ಇಂದು ಕೆಪಿಸಿಸಿ ಕಚೇರಿಯಲ್ಲಿ* ಕೆಪಿಸಿಸಿ ಅಧ್ಯಕ್ಷ *ಸನ್ಯಾನ್ಯ ಶ್ರೀ ಡಿ.ಕೆ.ಶಿವಕುಮಾರ್* ಅವರಿಗೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷರಾದ *ಶ್ರೀ ವಿ. ಆರ್ ಸುದರ್ಶನ್ ,* ಮಾಜಿ ಸಚಿವರಾದ *ಶ್ರೀ ಕಿಮ್ಮನೆ ರತ್ನಾಕರ್* , ಮಾಜಿ ಸಂಸದರಾದ *ಶ್ರೀ ಜಯಪ್ರಕಾಶ್ ಹೆಗ್ಡೆ* ರವರು ಉಪಸ್ಥಿತರಿದ್ದರು.