canaratvnews

ಕಕ್ಯೆಪದವು ಲಾವಣ್ಯ ಹತ್ಯೆ: ಮೃತರ ನಿವಾಸಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ, ಸಾಂತ್ವನ

ಮಂಗಳೂರು: ಜುಲೈ 17: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಕಕ್ಯೆಪದವು ನಿವಾಸಿ ಲಾವಣ್ಯ ಅವರ ನಿವಾಸಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಭೇಟಿ ನೀಡಿ ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಲಾವಣ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ರಮಾನಾಥ ರೈ, ಮೃತರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛ ಇಟ್ಟು ಗೌರವ ನಮನ ಸಲ್ಲಿಸಿದರು. ಬಳಿಕ ದುಃಖತಪ್ತರಾದ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಅವರು, “ಈ ಅಮಾನವೀಯ ಕೃತ್ಯ ಅತ್ಯಂತ ಖಂಡನೀಯ ವಾಗಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಪೊಲೀಸರನ್ನು ಆಗ್ರಹಿಸಿದರು. ಮೃತರ ಕುಟುಂಬಕ್ಕೆ ಈ ತೀವ್ರ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಅವರು ಪ್ರಾರ್ಥಿಸಿದರು.

Share News
Exit mobile version