ಪುತ್ತೂರು: ಕಳೆದ ಹಲವು ವರ್ಷಗಳ ಹಿಂದೆ ತಾವು ಮನೆ ಕಟ್ಟಿಕೊಂಡಿರುವ ಜಾಹದ ಅಡಿಸ್ಥಳಕ್ಕೆ ಸಲ್ಲಿಸಿದ ಅರ್ಜಿಯನ್ನು ಮಾನ್ಯ ಮಾಡಲೇಬೇಕು, ಅವರನ್ನು ಸತಾಯಿಸಬಾರದು, ತಿಳುವಳಿಕೆ ಕೊರತೆ ಇರುವ ಕೆಲವು ಗ್ರಾಮೀಣ ಭಾಗದ ಜನರು ಹಲವು ದೂರುಗಳನ್ನು ನೀಡಿದ್ದಾರೆ,ಮುಂದಕ್ಕೆ ಯಾವುದೇ ದೂರುಗಳು ನನ್ನ ಬಳಿ ಬಾರದ ಹಾಗೆ ನೋಡಿಕೊಳ್ಳಿ ಎಂದು ಕಂದಾಯ ವಿಭಾಗದ ಎಲ್ಲಾ ಅಧಿಕಾರಿಗಳಿಗೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ.
ಮನೆ ಕಟ್ಟಲು ಜಾಗವಿಲ್ಲದೆ ಸರಕಾರಿ ಜಾಗದಲ್ಲಿ ಮನೆ ಮಾಡಿಕೊಂಡಿರುವ ಬಡವರು ತಮ್ಮ ಅಡಿಸ್ಥಳದ ದಾಖಲೆ ಪತ್ರ ಪಡೆಯುವುದಕ್ಕೆ ಅಲೆದಾಡುವಂತಾಗಿದ್ದು, ಬಾಕಿ ಇರುವ ಅನೇಕ 94 ಸಿ ಕಡತವನ್ನು ವಿಲೇವಾರಿ ಮಾಡಿದ್ದೇನೆ, ಕೆಲವು ಗ್ರಾಮಗಳಲ್ಲಿ ಇನ್ನೂ ಕಡತ ಬಾಕಿ ಇದೆ. ಮನೆ ಕಟ್ಟಿಕೊಂಡಿರುವ ಅರ್ಜಿ ಹಾಕಿರುವ ಎಲ್ಲಾ ಫಲಾನುಭವಿಗಳಿಗೂ ಹಕ್ಕು ಪತ್ರ ಕಡ್ಡಾಯವಾಗಿ ಕೊಡಬೇಕು ಎಂದು ಶಾಸಕರು ಸೂಚನೆ ನೀಡಿದರು.ಅಕ್ರಮ ಸಕ್ರಮದಲ್ಲಿ ತಡವಾದರೂ ಪರವಾಗಿಲ್ಲ 94 ಸಿ ಹಕ್ಕು ಪತ್ರ ಬಾಕಿಯಾಗಲೇಬಾರದು ಎಂದು ಖಡಕ್ ಸೂಚನೆ ನೀಡಿದರು.
ಕಂದಾಯಸಚಿವರಿಂದ ಶ್ಲಾಘನೆ:
ರಾಜ್ಯದಲ್ಲಿ ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮಷ್ಟುಪ್ರಮಾಣದಲ್ಲಿ ಅಕ್ರಮ ಸಕ್ರಮ ಬೈಠಕ್ ನಡೆದಿಲ್ಲ.ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿರುವ ನಮ್ಮ ಕಂದಾಯ ಇಲಾಖೆ ಕಾರ್ಯವೈಖರಿ, ತಹಶಿಲ್ದಾರ್ ಬಗ್ಗೆ ಕಂದಾಯ ಸಚಿವರು ಮೆಚ್ಷುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ ಶಾಸಕರು ಬಡವರ ಕೆಲಸಮಾಡಲು ಹಿಂದೇಟು ಹಾಕಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಕ್ರಮಸಕ್ರಮಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರುಮಾತಬಾಡಿ ನಾಲ್ಕು ಕೋಣೆಗಳ ಮಧ್ಯೆ ನಡೆಯುತ್ತಿದ್ದ ಬೈಠಕ್ ಇಂದು ಗ್ರಾಮದ ಮನೆ ಬಾಗಿಲಲ್ಲಿ ನಡೆಯುತ್ತಿದೆ. ಜನರ ಮಧ್ಯೆ ನಿಂತು ಜನರಿಗೆ ಹಕ್ಕು ಪತ್ರವನ್ನು ಕೊಡುವ ಕೆಲಸ ಮಾಡಲಾಗುತ್ತದೆ. ಈ ರೀತಿಯ ಬೈಠಕ್ ಹಿಂದೆಯೂ ಇಲ್ಲಿ ನಡೆಯುವುದಿಲ್ಲ ಅದು ಅಶೋಕ್ ರೈ ಕಾಲದಲ್ಲಿ ಮಾತ್ರ ಎಂದು ಹೇಳಿದರು.
ವೇದಿಕೆಯಲ್ಲಿ ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ರಾಮಣ್ಣ ಪಿಲಿಂಜ, ರೂಪರೇಖಾ ಆಳ್ವ ಇದ್ದರು..
ತಹಶಿಲ್ದಾರ್ ಕೂಡ್ಲಿಗಿ ಸ್ವಾಗತಿಸಿ, ಕಂದಾಯ ನಿರೀಕ್ಷ ಗೋಪಾಲ್ ವಂದಿಸಿದರು.ಶಾಸಕ ರ ಕಚೇರಿ ಸಹಾಯಕ ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು

