• Home  
  • ವಿಕಸಿತ ಭಾರತ ಸಂಕಲ್ಪ ಅಭಿಯಾನದ ಅಂಗವಾಗಿ ಬಿಜೆಪಿ ವತಿಯಿಂದ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಶಾಲಾ ಸಾಮಗ್ರಿ ವಿತರಣಾ
- DAKSHINA KANNADA - HOME

ವಿಕಸಿತ ಭಾರತ ಸಂಕಲ್ಪ ಅಭಿಯಾನದ ಅಂಗವಾಗಿ ಬಿಜೆಪಿ ವತಿಯಿಂದ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಶಾಲಾ ಸಾಮಗ್ರಿ ವಿತರಣಾ

ಮಂಗಳೂರು ಜುಲೈ 08: ದೇಶಾದ್ಯಂತ ನಡೆಯುತ್ತಿರುವ ವಿಕಸಿತ ಭಾರತ ಸಂಕಲ್ಪ ಅಭಿಯಾನದ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಪಶ್ಚಿಮ ಮಹಾಶಕ್ತಿ ಕೇಂದ್ರದ ವತಿಯಿಂದ ಹೊಯ್ಗೆ ಬಜಾರಿನ ಜ್ಞಾನೋದಯ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಶಾಲಾ ಸಾಮಗ್ರಿ ವಿತರಣಾ ಕಾರ್ಯಕ್ರಮವು ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ನಮ್ಮ ದೇಶದ ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ದೇವರ ಸಮಾನರಾಗಿರುವ ಮುದ್ದು ಮಕ್ಕಳ ಶಾಲಾ ಚಟುವಟಿಕೆಗಳಿಗೆ ಅಗತ್ಯವಾಗಿರುವ ಸಾಮಗ್ರಿಗಳನ್ನು ನೀಡುತ್ತಿರುವ ಈ ಸಂದರ್ಭದಲ್ಲಿ ಅವರ ಮುಖದಲ್ಲಿ ಮಂದಹಾಸ ಕಾಣುವುದೇ ಒಂದು ಸಂಭ್ರಮ. ಸಣ್ಣಪುಟ್ಟ ವಿಷಯಗಳಲ್ಲೂ ಖುಷಿಯನ್ನು ಕಾಣುವ ಗುಣವನ್ನು ನಾವು ಮಕ್ಕಳಿಂದ ಕಲಿಯಬೇಕು ಎಂದು ಹೇಳಿ, ಎಲ್ಲರಿಗೂ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ರಮೇಶ್ ಕಂಡೆಟ್ಟು, ಲಲ್ಲೇಶ್ ಕುಮಾರ್, ಪೂರ್ಣಿಮಾ, ಮೋಹನ್ ಪೂಜಾರಿ, ಪ್ರವೀಣ್ ನಿಡ್ಡೇಲ್, ಅಶ್ವಿತ್ ಕೊಟ್ಟಾರಿ, ಭಾನುಮತಿ, ರಘುವೀರ್ ಬಾಬುಗುಡ್ಡ, ಪೂರ್ಣಿಮಾ ರಾವ್, ವಿನೋದ್ ಮೆಂಡನ್, ನಿತಿನ್ ಕುಮಾರ್, ರೇವತಿ, ನಾರಾಯಣಗಟ್ಟಿ, ಸುಮತಿ, ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರು, ಶಾಲಾ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Share News

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678