• Home  
  • ಸುಳ್ಯದಲ್ಲಿ ತಾಯಿ-ಮಗ ವಿಷ ಸೇವನೆ: ಕೊನೆಯುಸಿರೆಳೆದ ಮಗ
- DAKSHINA KANNADA - HOME - LATEST NEWS

ಸುಳ್ಯದಲ್ಲಿ ತಾಯಿ-ಮಗ ವಿಷ ಸೇವನೆ: ಕೊನೆಯುಸಿರೆಳೆದ ಮಗ

ಸುಳ್ಯ: ಇಲಿ ಪಾಷಾಣ ಸೇವಿಸಿ ತಾಯಿ-ಮಗ ಆತ್ಮಹತ್ಯೆಗೆ ಯತ್ನಿಸಿದ ಘಟನೆ  ನಾಲ್ಕೂರು ಗ್ರಾಮದ ನಡುಗಲ್ಲು ಎಂಬಲ್ಲಿ ನಡೆದಿದೆ. ಇದರಲ್ಲಿ ಮಗ ಮೃತಪಟ್ಟಿದ್ದಾನೆ. ಮೃತಪಟ್ಟವನನ್ನು ನಾಲ್ಕೂರು ಗ್ರಾಮದ ನಡುಗಲ್ಲಿನ ದೇರಪ್ಪಜ್ಜನಮನೆ ನಿವಾಸಿ ಕುಶಾಲಪ್ಪ ಗೌಡ ಎಂಬವರ ಮಗ ನಿತಿನ್ (32) ಎಂದು ಗುರುತಿಸಲಾಗಿದೆ. ತಾಯಿ-ಮಗ ಇಬ್ಬರು ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದಾರೆ ಎನ್ನಲಾಗಿದ್ದು ರವಿವಾರ ಮುಂಜಾನೆ ಇಬ್ಬರೂ ಅಸ್ವಸ್ಥಗೊಂಡಿರುವುದು ತಿಳಿದು ಬಂದಿದೆ. ಈ ಪೈಕಿ ನಿತಿನ್ ಸ್ವಲ್ವ ಹೊತ್ತಿನಲ್ಲೇ ಮೃತಪಟ್ಟಿದ್ದು, ಗಂಭೀರ ಸ್ಥಿತಿಯಲ್ಲಿದ್ದ ತಾಯಿ ಸುಲೋಚನಾರನ್ನು […]

Share News

ಸುಳ್ಯ: ಇಲಿ ಪಾಷಾಣ ಸೇವಿಸಿ ತಾಯಿ-ಮಗ ಆತ್ಮಹತ್ಯೆಗೆ ಯತ್ನಿಸಿದ ಘಟನೆ  ನಾಲ್ಕೂರು ಗ್ರಾಮದ ನಡುಗಲ್ಲು ಎಂಬಲ್ಲಿ ನಡೆದಿದೆ. ಇದರಲ್ಲಿ ಮಗ ಮೃತಪಟ್ಟಿದ್ದಾನೆ.

ಮೃತಪಟ್ಟವನನ್ನು ನಾಲ್ಕೂರು ಗ್ರಾಮದ ನಡುಗಲ್ಲಿನ ದೇರಪ್ಪಜ್ಜನಮನೆ ನಿವಾಸಿ ಕುಶಾಲಪ್ಪ ಗೌಡ ಎಂಬವರ ಮಗ ನಿತಿನ್ (32) ಎಂದು ಗುರುತಿಸಲಾಗಿದೆ.

ತಾಯಿ-ಮಗ ಇಬ್ಬರು ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದಾರೆ ಎನ್ನಲಾಗಿದ್ದು ರವಿವಾರ ಮುಂಜಾನೆ ಇಬ್ಬರೂ ಅಸ್ವಸ್ಥಗೊಂಡಿರುವುದು ತಿಳಿದು ಬಂದಿದೆ.

ಈ ಪೈಕಿ ನಿತಿನ್ ಸ್ವಲ್ವ ಹೊತ್ತಿನಲ್ಲೇ ಮೃತಪಟ್ಟಿದ್ದು, ಗಂಭೀರ ಸ್ಥಿತಿಯಲ್ಲಿದ್ದ ತಾಯಿ ಸುಲೋಚನಾರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ನಿತಿನ್ ಐಟಿಐ ವಿದ್ಯಾಭ್ಯಾಸ ಹೊಂದಿದ್ದು,

ತಮ್ಮ ಜಮೀನಿನಲ್ಲಿ ಕೃಷಿಕರಾಗಿ ದುಡಿಯುತ್ತಿದ್ದರು. ಕಳೆದ ಒಂದು ವರ್ಷದ ಹಿಂದೆ ವಿವಾಹವಾಗಿದ್ದು, ಪತ್ನಿ ಸ್ಥಳೀಯ ಕಾಲೇಜೊಂದರಲ್ಲಿ ಅತಿಥಿ ಉಪನ್ಯಾಸಕಿ ಯಾಗಿದ್ದರು.

ಪತ್ನಿ ತವರು ಮನೆಗೆ ಹೋಗಿದ್ದ ಸಂದರ್ಭ ತಾಯಿ ಸುಲೋಚನಾ ಹಾಗೂ ಮಗ ನಿತಿನ್ ವಿಷ ಸೇವಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News