ವಿಟ್ಲ: ಫೇಸ್ ಬುಕ್ನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೆಂಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ವಿಟ್ಲ ಪೋಲೀಸರು ಬಂಧಿಸಿದ್ದಾರೆ.


ಬೆಂಗಳೂರು ವಿದ್ಯಮಾನ್ಯ ನಗರ ನಿವಾಸಿ ಆನಂದ.ಎ ಬಂಧಿತ ಆರೋಪಿ. ಈತ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದ್ದ ಪೋಸ್ಟ್ ಒಂದಕ್ಕೆ, ‘ಸನಾತನಿ ಸಿಂಹ’ ಎಂಬ ಪೇಸ್ಬುಕ್ ಪೇಜ್ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೇಂಟ್ ಮಾಡಿದ್ದ ಬಗ್ಗೆ ವಿಟ್ಲ ಠಾಣೆಯಲ್ಲಿ 2025 ರಲ್ಲಿ ಅ.ಕ್ರ: 131/2025, ಕಲಂ: 353(2) BNS 20233ರಂತೆ ಪ್ರಕರಣ ದಾಖಲಾಗಿದೆ.


