canaratvnews

*ಬೈಲೂರು: ಊರು ಬೋಡು ಪುದರ್ ಬೊಡ್ಚಿ ನಾಟಕದ ಶುಭಮುಹೂರ್ತ*

ಕಾರ್ಕಳ: ಚೈತನ್ಯ ಕಲಾವಿದರು ಬೈಲೂರು ಇವರ ಈ ವರ್ಷದ ತುಳು ಹಾಸ್ಯಮಯ ನಾಟಕ “ಊರು ಬೋಡು ಪುದರ್ ಬೊಡ್ಚಿ” ಇದರ ಶುಭ ಮುಹೂರ್ತ ಕಾರ್ಯಕ್ರಮ ಜುಲೈ 16ರಂದು ಬೈಲೂರು ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನಡೆಯಿತು.

ಅರ್ಚಕರಾದ ನಾರಾಯಣ ಭಟ್ ಕೌಡೂರು ನಾಟಕ ಮುಹೂರ್ತದ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿ ನಾಟಕದ ಯಶಸ್ವಿಗಾಗಿ ದೇವರಲ್ಲಿ ಪ್ರಾರ್ಥಿಸಿದರು.

ತಂಡದ ಸಾರಥಿ ನಾಟಕದ ಕರ್ತೃ ಪ್ರಸನ್ನ ಶೆಟ್ಟಿ ಬೈಲೂರು , ಪದ್ಮರಾಜ ಹೆಗ್ಡೆ, ಹರೀಶ್ ಶೆಟ್ಟಿ, ಹರಿಜೀವನ ಹೆಗ್ಡೆ, ಕುಟ್ಟಿ ಶೇರಿಗಾರ್, ಗುಣಕರ ಶೆಟ್ಟಿ, ಶರತ್ ಉಚ್ಚಿಲ, ದಿಲೀಪ್ ಶೆಟ್ಟಿ, ಸದಾನಂದ ಸಾಲಿಯನ್, ಪ್ರಸಾದ್ ಐಸಿರ, ಗುರುರಾಜ್ ಮಾಡ, ಕೃಷ್ಣ ಶೆಟ್ಟಿ, ರಾಜೇಂದ್ರ ಶೆಟ್ಟಿ, ಸುಬ್ರಮಣ್ಯ ಬೈಲೂರು, ವಿಶ್ವೇಶ್ ಕೌಡೂರು, ಸುರೇಶ್ ಶೆಟ್ಟಿ, ಚೈತನ್ಯ ಕಲಾವಿದರು ತಂಡದ ಸದಸ್ಯರು ಮತ್ತಿತರರು ಉಪಸ್ಥಿರಿದ್ದರು

Share News
Exit mobile version