ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮದ ಗುಂಪಲಡ್ಕ 4ನೇ ವಾರ್ಡಿನಲ್ಲಿ ಕಳೆದ 15 ದಿನಗಳಿಂದ ಎದುರಾಗಿದ್ದ ತೀವ್ರ ಕುಡಿಯುವ ನೀರಿನ ಸಮಸ್ಯೆಗೆ ಪುತ್ತೂರು ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಅವರು ತಕ್ಷಣ ಸ್ಪಂದಿಸುವ ಮೂಲಕ ಪರಿಹಾರ ಒದಗಿಸಿದ್ದಾರೆ.

ಪುತ್ತೂರು ಅಕ್ರಮ-ಸಕ್ರಮ ಸಮಿತಿಯ ಸದಸ್ಯರಾದ ರಾಮಣ್ಣ ಪಿಲಿಂಜ ಅವರ ವಿಶೇಷ ಮುತುವರ್ಜಿ ಹಾಗೂ ಗ್ರಾಮ ಪಂಚಾಯತ್ ಸಹಕಾರದಿಂದ ಈ ಕಾರ್ಯ ಯಶಸ್ವಿಯಾಗಿ ನೆರವೇರಿತು.